Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿ.ಕೆ.ಉಬೇದುಲ್ಲಾ ಶಾಲೆಯಲ್ಲಿ ಹೆಣ್ಣು...

ವಿ.ಕೆ.ಉಬೇದುಲ್ಲಾ ಶಾಲೆಯಲ್ಲಿ ಹೆಣ್ಣು ಮಕ್ಕಳ ಪಿಯು ಕಾಲೇಜು ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ4 Nov 2023 6:39 PM IST
share
ವಿ.ಕೆ.ಉಬೇದುಲ್ಲಾ ಶಾಲೆಯಲ್ಲಿ ಹೆಣ್ಣು ಮಕ್ಕಳ ಪಿಯು ಕಾಲೇಜು ಉದ್ಘಾಟನೆ

ಬೆಂಗಳೂರು, ನ.4: ಕಬ್ಬನ್‍ಪೇಟೆ ಮುಖ್ಯರಸ್ತೆಯಲ್ಲಿರುವ ಹಝ್ರತ್ ಹಮೀದ್ ಶಾ ದರ್ಗಾ ಕಾಂಪ್ಲೆಕ್ಸ್ ಮೇಲುಸ್ತುವಾರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿವಾಜಿನಗರದಲ್ಲಿರುವ ವಿ.ಕೆ.ಉಬೇದುಲ್ಲಾ ಶಾಲ್ಲೆಯಲ್ಲಿ ಹೆಣ್ಣು ಮಕ್ಕಳಿಗಾಗಿ ಪಿಯು ಕಾಲೇಜು ವಿಭಾಗವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮಧು ಬಂಗಾರಪ್ಪ, ವಿ.ಕೆ.ಉಬೇದುಲ್ಲಾ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತಿಸಲಿದ್ದೇವೆ. ಈ ಶಾಲೆಯು ಆಧುನಿಕವಾಗಿದೆ. ಇದೇ ರೀತಿ ರಾಜ್ಯದ ಸರಕಾರಿ ಶಾಲೆಗಳನ್ನು ಆಧುನೀಕರಣಗೊಳಿಸಲಿದ್ದೇವೆ ಎಂದರು.

ಶಾಲೆಗಳಲ್ಲಿರುವ ಶಿಕ್ಷಕರ ಕೊರತೆಯನ್ನು ನೀಗಿಸಲು 13 ಸಾವಿರ ಶಿಕ್ಷಕರನ್ನು ನೇಮಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ 20 ಸಾವಿರ ಶಿಕ್ಷಕರನ್ನು ಹಂತ ಹಂತವಾಗಿ ನೇಮಕ ಮಾಡಲಾಗುವುದು. ಈ ಮೂಲಕ ಸರಕಾರಿ ಶಾಲೆಗಳಲ್ಲಿ ಎಲ್ಲ ಮಕ್ಕಳು ಕಲಿಯುವಂತಹ ವಾತಾವರಣ ಸೃಷ್ಠಿಸುತ್ತೇವೆ ಎಂದರು.

ಶಾಲೆಯ ಹಿನ್ನೆಲೆ: ವಿ.ಕೆ.ಉಬೇದುಲ್ಲಾ ಶಾಲೆಯನ್ನು ಐಎಂಎ ಸಂಸ್ಥೆಯವರು ನವೀಕರಿಸಿ ಒಂದರಿಂದ 10ನೆ ತರಗತಿಯವರೆಗೆ ನಡೆಸುತ್ತಿದ್ದರು. ಆದರೆ, ಬಹುಕೋಟಿ ಹಗರಣದಲ್ಲಿ ಐಎಂಎ ಸಂಸ್ಥೆ ಸಿಲುಕಿದ್ದರಿಂದ ವಿ.ಕೆ.ಉಬೇದುಲ್ಲಾ ಶಾಲೆಯು ಮುಚ್ಚುವ ಹಂತಕ್ಕೆ ತಲುಪಿತ್ತು. ಅಲ್ಲದೆ, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಅತಂತ್ರ ಪರಿಸ್ಥಿತಿಗೆ ಸಿಲುಕಿದ್ದರು.

ಈ ಸಂದರ್ಭದಲ್ಲಿ ಹಝ್ರತ್ ಹಮೀದ್ ಶಾ ದರ್ಗಾ ಕಾಂಪ್ಲೆಕ್ಸ್ ಅಧ್ಯಕ್ಷರಾಗಿದ್ದ ಜಿ.ಎ.ಬಾವ ಅವರ ಮುತುವರ್ಜಿಯಿಂದ, ವಕ್ಫ್ ಸಚಿವ ಝಮೀರ್ ಅಹ್ಮದ್ ಖಾನ್, ಸ್ಥಳೀಯ ಶಾಸಕ ರಿಝ್ವಾನ್ ಅರ್ಶದ್ ಸಹಕಾರದಿಂದ ಶಾಲೆಯು ಪುನರ್ ಆರಂಭಗೊಂಡು, ಇದೀಗ ಪಿಯು ಕಾಲೇಜು ವಿಭಾಗವನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ.

ಶಿವಾಜಿ ನಗರದ ಸುತ್ತಮುತ್ತಲಿನ ಬಡವರು ಹಾಗೂ ಮಧ್ಯಮ ವರ್ಗದ ಕುಟುಂಬಗಳ ಮಕ್ಕಳಿಗೆ ಉನ್ನತ ಶಿಕ್ಷಣ ಸಿಗಬೇಕು, ಸೌಲಭ್ಯಗಳ ಕೊರತೆಯಿಂದ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ವಕ್ಫ್ ಬೋರ್ಡ್‍ನ ಅಧೀನ ಸಂಸ್ಥೆಯಾಗಿರುವ ಹಝ್ರದ್ ಹಮೀದ್ ಶಾ ದರ್ಗಾ ಟ್ರಸ್ಟ್ ಒಂದು ಕೋಟಿ ರೂ.ಗಳಿಗಿಂತ ಹೆಚ್ಚಿನ ಮೊತ್ತವನ್ನು ಖರ್ಚು ಮಾಡಿ, ಶಾಲೆಯಲ್ಲಿ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಿದೆ.

ಪಿಯುಸಿ ವಿಭಾಗ ಆರಂಭವಾಗಿರುವುದರಿಂದ ಈ ಭಾಗದಲ್ಲಿನ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಇದು ನೆರವಾಗಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ರಿಝ್ವಾನ್ ಅರ್ಶದ್, ಜಿ.ಎ.ಬಾವ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಿದ್ದರು.













share
ವಾರ್ತಾಭಾರತಿ
ವಾರ್ತಾಭಾರತಿ
Next Story
X