Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಒಳಮೀಸಲಾತಿ ಸಮೀಕ್ಷೆ ಸಮಸ್ಯೆ ಸರಿಪಡಿಸಿ :...

ಒಳಮೀಸಲಾತಿ ಸಮೀಕ್ಷೆ ಸಮಸ್ಯೆ ಸರಿಪಡಿಸಿ : ನ್ಯಾ.ನಾಗಮೋಹನ್ ದಾಸ್ ಆಯೋಗಕ್ಕೆ ಮಾದಿಗ-ಛಲವಾದಿ ಮುಖಂಡರ ನಿಯೋಗ ಮನವಿ

ವಾರ್ತಾಭಾರತಿವಾರ್ತಾಭಾರತಿ11 May 2025 12:19 AM IST
share
ಒಳಮೀಸಲಾತಿ ಸಮೀಕ್ಷೆ ಸಮಸ್ಯೆ ಸರಿಪಡಿಸಿ : ನ್ಯಾ.ನಾಗಮೋಹನ್ ದಾಸ್ ಆಯೋಗಕ್ಕೆ ಮಾದಿಗ-ಛಲವಾದಿ ಮುಖಂಡರ ನಿಯೋಗ ಮನವಿ

ಬೆಂಗಳೂರು : ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗೂ ನ್ಯಾಯ ಕಲ್ಪಿಸಲು ಸಮೀಕ್ಷೆಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಟ್ಟಹೆಜ್ಜೆ ಇಟ್ಟಿರುವುದು ಸ್ವಾಗತಾರ್ಹ. ಆದರೆ, ಗಣತಿ ವೇಳೆ ಬಹಳಷ್ಟು ಸಮಸ್ಯೆಗಳು ಎದುರಾಗಿದ್ದು, ಇವುಗಳನ್ನು ತಕ್ಷಣ ಬಗೆಹರಿಸಬೇಕು ಎಂದು ಮಾದಿಗ-ಛಲವಾದಿ ಮುಖಂಡರ ನಿಯೋಗವು, ಒಳಮೀಸಲಾತಿ ಆಯೋಗಕ್ಕೆ ಒತ್ತಾಯಿಸಿದೆ.

ಶುಕ್ರವಾರ ಬೆಂಗಳೂರಿನಲ್ಲಿ ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ಅವರನ್ನು ಭೇಟಿ ಮಾಡಿದ ಮಾದಿಗ-ಛಲವಾದಿ ಮುಖಂಡರ ನಿಯೋಗವು, ಜಾತಿ ಸಮೀಕ್ಷೆ ವೇಳೆ ಎದುರಾಗಿರುವ ಸಮಸ್ಯೆಗಳನ್ನು ಬಿಕ್ಕಟ್ಟುಗಳನ್ನು ತಕ್ಷಣ ಪರಿಹರಿಸಬೇಕು ಎಂದು ಕೋರಿದರು.

ಒಳಮೀಸಲಾತಿ ಶೀಘ್ರ ಜಾರಿಗೊಳಿಸಬೇಕೆಂಬ ಸರಕಾರದ ಕಾಳಜಿ, ಬದ್ಧತೆ ಸರಿಯಿದೆ. ಆದರೆ, ಜಾತಿಸಮೀಕ್ಷೆ ಕಾರ್ಯಕ್ಕೆ ಗಣತಿದಾರರಿಗೆ ಕೇವಲ 3 ಗಂಟೆ ತರಬೇತಿ ನೀಡಿರುವುದು ಬಹಳಷ್ಟು ಲೋಪಗಳಿಗೆ ಕಾರಣವಾಗಿದೆ. ಆದ್ದರಿಂದ ಅವರಿಗೆ ಒಂದು ದಿನದ ಮಟ್ಟಿಗೆ ಸಮಗ್ರ ಮಾಹಿತಿ ನೀಡುವ ತರಬೇತಿ ಆಯೋಜಿಸಬೇಕು ಎಂದು ನಿಯೋಗ ಮನವಿ ಮಾಡಿದೆ.

ನೆಟ್‍ವರ್ಕ್, ಸರ್ವರ್ ಸಮಸ್ಯೆ ಪರಿಹರಿಸಲು ಪ್ರತಿ ಹೋಬಳಿಗೊಬ್ಬರಂತೆ ತಾಂತ್ರಿಕ ಸಲಹೆಗಾರನನ್ನು ನೇಮಿಸಬೇಕು. ಪರಿಶಿಷ್ಟ ಸಮುದಾಯ ಶೈಕ್ಷಣಿಕವಾಗಿ ಹಿಂದುಳಿದಿರುವ ಕಾರಣ, ಜಾತಿಗಣತಿಯಲ್ಲಿನ ಪ್ರಶ್ನಾವಳಿಗಳಿಗೆ ಮಾಹಿತಿ ನೀಡಲು ತಡವರಿಸುತ್ತಿದ್ದಾರೆ. ಆದ್ದರಿಂದ ಪ್ರಶ್ನೆಗಳನ್ನು ಸರಳಗೊಳಿಸಬೇಕು ಎಂದು ನಿಯೋಗ ತಿಳಿಸಿದೆ.

ಪಡಿತರ ಚೀಟಿಯಲ್ಲಿ ಹೊಸದಾಗಿ ಮದುವೆ ಆಗಿಬಂದ ಸೊಸೆ, ಆಗತಾನೇ ಹುಟ್ಟಿದ ಮಕ್ಕಳ ಮಾಹಿತಿ ದಾಖಲಿಸಿಕೊಳ್ಳಲು ಯಾವುದೇ ದಾಖಲೆ ಕೇಳಬಾರದು. ಈ ನಿಟ್ಟಿನಲ್ಲಿ ಆದೇಶಿಸಬೇಕು. ಬಹಳಷ್ಟು ಗಣತಿದಾರರ ಬಳಿ ಗುಣಮಟ್ಟದ ಮೊಬೈಲ್‍ಗಳು ಇಲ್ಲದ ಕಾರಣ ಜಾತಿಗಣತಿ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ಸಮೀಕ್ಷೆ ಕಾರ್ಯ ಕೈಗೊಳ್ಳಲು ಸಮಸ್ಯೆ ಆಗುತ್ತಿದೆ. ಇದನ್ನು ಸರಿಪಡಿಸಲು ತಕ್ಷಣ ಕ್ರಮಕೈಗೊಳ್ಳಬೇಕು ಎಂದು ನಿಯೋಗ ಆಗ್ರಹಿಸಿದೆ.

ಜಾತಿಗಣತಿ ಕಾರ್ಯ ಪಾರದರ್ಶಕ, ನ್ಯಾಯಸಮ್ಮತವಾಗಿರಬೇಕು. ಆದರೆ, ಕೆಲವೆಡೆ ಗೊತ್ತಿದ್ದು ತಪ್ಪು ಮಾಹಿತಿ ನೋಂದಾಯಿಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಆದ್ದರಿಂದ ತಪ್ಪು ಮಾಹಿತಿ ನೋಂದಾಯಿಸಿಕೊಳ್ಳುವ ಗಣತಿದಾರರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂಬ ಎಚ್ಚರಿಕೆ ಸಂದೇಶ ರವಾನಿಸಬೇಕು ಎಂದು ನಿಯೋಗ ತಿಳಿಸಿದೆ.

ಗಣತಿ ಕಾರ್ಯದಲ್ಲಿ ಶಿಕ್ಷಕರು ಹಾಗೂ ಇತರೆ ಎಲ್ಲ ಸಿಬ್ಬಂದಿಗೆ ಅಗತ್ಯ ಪರಿಕರಗಳನ್ನು ನೀಡಬೇಕು. ಬಿಸಿಲು ಹೆಚ್ಚಿರುವ ಕಾರಣಕ್ಕೆ ಅವರಿಗೆ ಟೋಪಿ ಸೇರಿ ಎಲ್ಲ ಅಗತ್ಯ ಸಾಮಾಗ್ರಿಗಳನ್ನು ತುರ್ತಾಗಿ ಓದಗಿಸಬೇಕು. ಜೊತೆಗೆ ಅವರಿಗೆ ಈ ಕಾರ್ಯ ಕೈಗೊಂಡ ಕಾರಣಕ್ಕೆ ನೀಡುವ ಗೌರವಧನವನ್ನು ವಿಳಂಬ ಮಾಡದೆ ಬಿಡುಗಡೆಗೊಳಿಸಬೇಕು ಎಂದು ಮಾದಿಗ-ಛಲವಾದಿ ಮುಖಂಡರ ನಿಯೋಗ ತಿಳಿಸಿದೆ.

ಈ ಆಯೋಗದ ಮನವಿಗಳನ್ನು ಆಲಿಸಿದ ನ್ಯಾ.ನಾಗಮೋಹನ್ ದಾಸ್ ಅವರು, ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. ಇದೇ ವೇಳೆಯಲ್ಲಿ ಮಾಜಿ ಸಚಿವ ಎಚ್.ಆಂಜನೇಯ, ರಾಜ್ಯಸಭೆ ಮಾಜಿ ಸದಸ್ಯ ಎಲ್.ಹನುಮಂತಯ್ಯ, ದಸಂಸ ರಾಜ್ಯ ಸಂಚಾಲಕ ಡಿ.ಜಿ.ಸಾಗರ್, ಕೆಪಿಎಸ್‍ಸಿ ಮಾಜಿ ಸದಸ್ಯ ದಾಸಯ್ಯ, ಮುತ್ತುರಾಜ್, ಅಮರನಾಥ ಮಳವಳ್ಳಿ ಇತರರು ನಿಯೋಗದಲ್ಲಿದ್ದರು.

ಬೇಡಜಂಗಮ, ಬುಡ್ಗಜಂಗಮ ಹೆಸರಿನಲ್ಲಿ ಸುಳ್ಳು ನೋಂದಣಿ: ಪರಿಶಿಷ್ಟ ಜಾತಿಯಲ್ಲಿರುವ ಬೇಡಜಂಗಮ, ಬುಡ್ಗಜಂಗಮ ಹೆಸರಿನಲ್ಲಿ ಲಿಂಗಾಯಿತ ಸಮಾಜದ ಗುರುಸ್ಥಾನದಲ್ಲಿರುವ ವೀರಶೈವರು, ನಾವು ಬೇಡಜಂಗಮರೆಂದು ನೋಂದಾಯಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಸುಳ್ಳು ಹೇಳಿ ನೋಂದಾಯಿಸಿಕೊಂಡವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಮಾದಿಗ-ಛಲವಾದಿ ಮುಖಂಡರ ನಿಯೋಗ ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X