Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಕೆಎಎಸ್’ ಮರು ಪರೀಕ್ಷೆ ನಡೆಸಲು...

‘ಕೆಎಎಸ್’ ಮರು ಪರೀಕ್ಷೆ ನಡೆಸಲು ಅಭ್ಯರ್ಥಿಗಳ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ1 Sept 2024 10:50 PM IST
share
‘ಕೆಎಎಸ್’ ಮರು ಪರೀಕ್ಷೆ ನಡೆಸಲು ಅಭ್ಯರ್ಥಿಗಳ ಒತ್ತಾಯ

ಬೆಂಗಳೂರು : ವಿರೋಧದ ನಡುವೆಯೂ ಕರ್ನಾಟಕ ಲೋಕಸೇವಾ ಆಯೋಗವು ಆ.27ರಂದು ಕೆಎಎಸ್ ಪರೀಕ್ಷೆ ನಡೆಸಿದ್ದು, ಕನ್ನಡ ಅನುವಾದ ಪ್ರಶ್ನೆ ಪತ್ರಿಕೆಯಲ್ಲಿ ತಪ್ಪುಗಳು ಕನ್ನಡಿಗರ ಕೋಪಕ್ಕೆ ಕಾರಣವಾಗಿದೆ. ಹೀಗಾಗಿ ಮರು ಪರೀಕ್ಷೆಯನ್ನು ನಡೆಸುವಂತೆ ಅಭ್ಯರ್ಥಿಗಳು ಪಟ್ಟು ಹಿಡಿದಿದ್ದಾರೆ.

ಇಂಗ್ಲಿಷ್ ನಿಂದ ಕನ್ನಡ ಅನುವಾದದಲ್ಲಿ ಸಾಕಷ್ಟು ಗೊಂದಲ ಸೃಷ್ಟಿಯಾಗಿದ್ದು, ಕೆಪಿಎಸ್ಸಿ ಹಾಗೂ ಸರಕಾರದ ವಿರುದ್ಧ ಪರೀಕ್ಷಾರ್ಥಿಗಳು ಅಸಮಾಧನ ವ್ಯಕ್ತಪಡಸಿದ್ದಾರೆ. ಪ್ರಶ್ನೆಪತ್ರಿಕೆಯ ಕನ್ನಡ ಅನುವಾದದಲ್ಲಿ ತಪ್ಪುಗಳು, ಒಟ್ಟು 58 ಪ್ರಶ್ನೆಗಳಲ್ಲಿ ತಪ್ಪಾಗಿರುವುದು ತಿಳಿದು ಬಂದಿದೆ.

ಎಪ್ರಿಲ್ ತಿಂಗಳಲ್ಲೇ ಪ್ರಶ್ನೆಪತ್ರಿಕೆ ಸಿದ್ಧಪಡಿಸಲಾಗಿದೆ ಎಂದು ಸಾಮಾಜಿಕ ಜಾಲಾತಾಣದಲ್ಲಿ ಚರ್ಚೆಯಾಗುತ್ತಿದೆ. ಸರಕಾರಿ ನಿಯಮಗಳ ಪ್ರಕಾರ ಪರೀಕ್ಷೆಯ ಒಂದು ವಾರ ಮುಂಚೆ ಸಿದ್ಧಪಡಿಸಬೇಕು. ವಾರದ ಮಧ್ಯ ಕೆಲಸದ ದಿನ ಪರೀಕ್ಷೆ ನಿಗದಿ, ಸಾಮಾನ್ಯವಾಗಿ ರವಿವಾರ ನಡೆಯುತ್ತಿತ್ತು. ಆದರೆ ರಜೆಯಲ್ಲದೆ ದಿನ ಪರೀಕ್ಷೆ ನಡೆಸಲಾಗಿದೆ ಎಂದು ಪರೀಕ್ಷಾರ್ಥಿಗಳು ಆರೋಪಿಸಿದ್ದಾರೆ.

ಆಯೋಗವು ಕೀ ಉತ್ತರಗಳನ್ನು ಪ್ರಕಟಿಸಿದ್ದು, ಇದಕ್ಕೆ ಆಕ್ಷೇಪಣೆ ಸಲ್ಲಿಸಬೇಕೆಂದರೆ ಪ್ರತಿ ಪ್ರಶ್ನೆಗೆ 50 ರೂ. ಕಟ್ಟಬೇಕು. ಅಲ್ಲದೆ ಆಕ್ಷೇಪಣೆ ಸಲ್ಲಿಸಲು ಪೋಸ್ಟಲ್ ಬಳಕೆ ಮಾಡಲಾಗುತ್ತಿದೆ. ಈ ಪ್ರಕ್ರಿಯೆ ಸಂಕೀರ್ಣವಾಗಿದ್ದು, ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಲು ಸಾಧ್ಯವಾಗಬಾರದು ಎಂದು ನಿಯಮ ಮಾಡಲಾಗಿದೆ ಎಂದು ಅಭ್ಯರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಮಾಡುತ್ತಿದ್ದಾರೆ.

ಸಿಲೆಬಸ್ ಪ್ರಕಾರ ಪ್ರಶ್ನೆಪತ್ರಿಕೆ ಸಿದ್ಧಪಡಿಸದೆ ಇದ್ದದ್ದು, ವಿಷಯವಾರು ಅಂಕ ವಿಂಗಡನೆ ನಿಯಮ ಪಾಲಿಸಲಿಲ್ಲ ಎಂಬ ಆರೋಪ ಇದೆ.

ಕನ್ನಡ ಮತ್ತು ಇಂಗ್ಲೀಷ್ ಪ್ರಶ್ನೆಗಳಲ್ಲಿ ತರ್ಜುಮೆ ವಿಷಯದಲ್ಲಿ ಗೊಂದಲ ಉಂಟಾದರೆ ಇಂಗ್ಲಿಷ್ ಪ್ರಶ್ನೆ ಅಂತಿಮ ಎಂಬ ಅವೈಜ್ಞಾನಿಕ ನಿಯಮ ಹಾಕಿರುವುದು ಕನ್ನಡಿಗರಿಗೆ ಮಾಡಿರುವ ಅನ್ಯಾಯವಾಗಿದೆ ಎಂದು ಚರ್ಚೆ ಮಾಡಲಾಗುತ್ತಿದೆ.

ಮರು ಪರೀಕ್ಷೆಗೆ ಒತ್ತಾಯ: ಮರು ಪರೀಕ್ಷೆ ನಡೆಸಲು ಕೆಪಿಎಸ್‍ಸಿಗೆ ಸೂಕ್ತ ಆದೇಶವನ್ನು ನೀಡಬೇಕು ಎಂದು ಕರ್ನಾಟಕ ರಾಜ್ಯ ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳ ಸಂಘದ ಅಧ್ಯಕ್ಷೆ ಭವ್ಯಾ ನರಸಿಂಹಮೂರ್ತಿ ಮುಖ್ಯಮಂತ್ರಿಗೆ ಪತ್ರವನ್ನು ಬರೆದಿದ್ದಾರೆ.

ಕರ್ನಾಟಕದಲ್ಲಿ ಕನ್ನಡ ಭಾಷೆ ಹಾಗೂ ಮಾಧ್ಯಮಕ್ಕೆ ಒತ್ತು ನೀಡದೇ ಆಂಗ್ಲ ಭಾಷೆ ಅಂತಿಮ ಎಂದು ಸೂಚಿಸಿದೆ. ಹಾಗಾದರೆ ಕನ್ನಡ ಆಸ್ಮಿತೆ, ಮಾಧ್ಯಮ, ಹಕ್ಕುಗಳು, ಹಾಗೂ ಕನಸುಗಳು ಬರೀ ನಾಟಕಿಯವೇ? ಕನ್ನಡ ಸಾರ್ವಭೌಮತ್ವಕ್ಕೆ ಬೆಲೆ ಇಲ್ಲವೇ? ಕನ್ನಡದ ವಿರೋಧ ನೀತಿ ವಿರುದ್ಧ ಮತ್ತೊಮ್ಮೆ ಗೋಕಾಕ್ ತರಹದ ಚಳವಳಿ ಅನಿವಾರ್ಯವೇ? ಎಂದು ಅವರು ಪತ್ರದಲ್ಲಿ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X