Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗ್ಯಾರೆಂಟಿ ಯೋಜನೆಗಳಿಗೆ...

ಗ್ಯಾರೆಂಟಿ ಯೋಜನೆಗಳಿಗೆ ಎಸ್‍ಸಿಪಿ-ಟಿಎಸ್‍ಪಿ ಅನುದಾನ ಬಳಕೆ ನಿಜ: ಕೆ.ಎಚ್.ಮುನಿಯಪ್ಪ

ವಾರ್ತಾಭಾರತಿವಾರ್ತಾಭಾರತಿ11 Sept 2026 9:55 PM IST
share
ಗ್ಯಾರೆಂಟಿ ಯೋಜನೆಗಳಿಗೆ ಎಸ್‍ಸಿಪಿ-ಟಿಎಸ್‍ಪಿ ಅನುದಾನ ಬಳಕೆ ನಿಜ: ಕೆ.ಎಚ್.ಮುನಿಯಪ್ಪ

ಬೆಂಗಳೂರು : ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್‍ಟಿಪಿ-ಟಿಎಸ್‍ಪಿ ಅನುದಾನವನ್ನು ಬಳಕೆ ಮಾಡಿಕೊಂಡಿರುವುದು ನಿಜ. ಇದನ್ನು ರಾಜಕೀಯ ಅಸ್ತ್ರವಾಗಿ ಬಳಕೆ ಮಾಡಿಕೊಂಡರೂ, ವಾಸ್ತವ ಸಂಗತಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2026-27ನೇ ಸಾಲಿಗೆ ಎಸ್‍ಸಿಪಿ-ಟಿಎಸ್‍ಪಿರಡಿ ಒದಗಿಸಿದ ಅನುದಾನಕ್ಕೆ ವಿವಿಧ ಅಭಿವೃದ್ದಿ ಇಲಾಖೆಗಳು ತಯಾರಿಸಿದ ಕ್ರಿಯಾ ಯೋಜನೆ ಕುರಿತು ಈಗಾಗಲೇ ನೋಡಲ್ ಏಜೆನ್ಸಿ ಸಭೆ ನಡೆಸಲಾಗಿದೆ. 2025-26ನೇ ಸಾಲಿಗೆ ಸರಕಾರದಿಂದ ಎಸ್‍ಸಿಎಸ್‍ಪಿರಡಿ 30,649 ಕೋಟಿ ರೂ, ಟಿಎಸ್‍ಪಿರಡಿ 11,854 ಕೋಟಿ ಸೇರಿದಂತೆ 42,503 ಕೋಟಿ ರೂ.,ಗಳನ್ನು 34 ಇಲಾಖೆಗಳ 451 ಯೋಜನೆಗಳಿಗೆ ಹಂಚಿಕೆ ಮಾಡಿದೆ. ಈ ಪೈಕಿ ಎಸ್‍ಸಿಎಸ್‍ಪಿ ರಡಿ 28,630 ಕೋಟಿ, ರೂ., ಟಿಎಸ್‍ಪಿರಡಿ 10,927 ಕೋಟಿ ರೂ., ಒಟ್ಟು 39,557 ಕೋಟಿ ರೂ., ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.

ಕೆಲ ಇಲಾಖೆಗಳಲ್ಲಿ ಅನುದಾನ ಬಿಡುಗಡೆ ಆಗಿದ್ದರೂ 104.56 ಕೋಟಿ ರೂ.,ಗಳನ್ನು ವೆಚ್ಚ ಮಾಡಿಲ್ಲ. ಬಿಡುಗಡೆ ಮಾಡಿದ ಅನುದಾನ ವನ್ನು ಅಧಿಕಾರಿಗಳು ಶೇ.100 ವೆಚ್ಚ ಮಾಡಬೇಕಾಗಿತ್ತು. ಆದರೆ, ಈಗ ಕಾಯ್ದೆಯಂತೆ ಈ ಅನುದಾನ 2027-28 ನೇ ಸಾಲಿಗೆ ಮರು ಹಂಚಿಕೆ ಮಾಡಲಾಗುತ್ತದೆ. ಮತ್ತೊಂದೆಡೆ, ವಿವಿಧ ಇಲಾಖೆಗಳಲ್ಲಿ ಮುಖ್ಯವಾಗಿ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ 2,841 ಕೋಟಿ ರೂ, ಬಿಡುಗಡೆಯಾಗಿಲ್ಲ ಎಂದೂ ಅವರು ಹೇಳಿದರು.

Tags

Minister K.H. Muniyappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X