Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮಳವಳ್ಳಿ: ಗಾರ್ಮೆಂಟ್ಸ್ ವಾಹನಗಳ ಸರಣಿ...

ಮಳವಳ್ಳಿ: ಗಾರ್ಮೆಂಟ್ಸ್ ವಾಹನಗಳ ಸರಣಿ ಅಪಘಾತ; 60ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ26 July 2026 12:27 AM IST
share
ಮಳವಳ್ಳಿ: ಗಾರ್ಮೆಂಟ್ಸ್ ವಾಹನಗಳ ಸರಣಿ ಅಪಘಾತ; 60ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ

ಮಳವಳ್ಳಿ : ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಮಹಿಳೆಯರನ್ನು ಕರೆದೊಯ್ಯುತ್ತಿದ್ದ ಎರಡು ಬಸ್ ಮತ್ತು ಒಂದು ಟೆಂಪೋ ನಡುವೆ ಸರಣಿ ಅಪಘಾತ ಸಂಭವಿಸಿ 60ಕ್ಕೂ ಹೆಚ್ಚು ಮಹಿಳೆಯರು ಗಾಯಗೊಂಡಿರುವ ಘಟನೆ ತಾಲೂಕಿನ ಮಳವಳ್ಳಿ-ಕನಕಪುರ ಹೆದ್ದಾರಿಯ ಡಿ.ಹಲಸಹಳ್ಳಿ ಗೇಟ್ ಬಳಿ ವರದಿಯಾಗಿದೆ.

ಶನಿವಾರ ಬೆಳಗ್ಗೆ 8:30ರ ಸುಮಾರಿಗೆ ತಾಲೂಕಿನ ಬಾಣಸಮುದ್ರ ಬಳಿಯ ಅಕ್ವೇರ ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಯಳಂದೂರು, ಕೊಳ್ಳೇಗಾಲ, ಟಿ.ನರಸೀಪುರ ಭಾಗದಿಂದ ಮಹಿಳೆಯರನ್ನು ಕರೆದೊಯ್ಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಅಡ್ಡಾದಿಡ್ಡಿ ಬಂದ ಬೈಕ್ ಸವಾರನಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಮುಂದೆ ಹೋಗುತ್ತಿದ್ದ ಟೆಂಪೋ ಚಾಲಕ ಸಡನ್ ಬ್ರೇಕ್ ಹಾಕಿದ ಕಾರಣ ಹಿಂದಿನಿಂದ ಬರುತ್ತಿದ್ದ ಎರಡು ಬಸ್‌ಗಳು ಟೆಂಪೋಗೆ ಢಿಕ್ಕಿ ಹೊಡೆದಿವೆ. ಪರಿಣಾಮ ಮೂರು ವಾಹನಗಳು ಜಖಂಗೊಂಡಿವೆ.

ಅಪಘಾತದಲ್ಲಿ ಬಸ್ ಮತ್ತು ಟೆಂಪೋದಲ್ಲಿದ್ದ 60ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡಿದ್ದಾರೆ. ಕೂಡಲೇ ಫ್ಯಾಕ್ಟರಿಯ ಇತರ ವಾಹನಗಳಲ್ಲಿ ಗಾಯಾಳುಗಳನ್ನು ಮಳವಳ್ಳಿ ಸರಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು.

ಈ ಪೈಕಿ ತೀವ್ರವಾಗಿ ಗಾಯಗೊಂಡಿದ್ದ 17 ಮಹಿಳೆಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಉಳಿದವರಿಗೆ ಮಳವಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ವಿಷಯ ತಿಳಿದ ತಕ್ಷಣ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಆಸ್ಪತ್ರೆಗೆ ಭೇಟಿ ನೀಡಿದರು. ವೈದ್ಯರಿಂದ ಮಾಹಿತಿ ಪಡೆದು ಗಾಯಾಳುಗಳ ಆರೋಗ್ಯ ವಿಚಾರಿಸಿ, ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಮಾಹಿತಿ ತಿಳಿದು ಹಲಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags

Malavalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X