Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಧರ್ಮಗಳ ನಡುವೆ ವೈಷಮ್ಯ ಬಿತ್ತುವುದು...

ಧರ್ಮಗಳ ನಡುವೆ ವೈಷಮ್ಯ ಬಿತ್ತುವುದು ಬಿಜೆಪಿಯವರ ಕೆಲಸ : ಮಲ್ಲಿಕಾರ್ಜುನ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ31 Oct 2024 8:07 PM IST
share
ಧರ್ಮಗಳ ನಡುವೆ ವೈಷಮ್ಯ ಬಿತ್ತುವುದು ಬಿಜೆಪಿಯವರ ಕೆಲಸ : ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು : ‘ಸರ್ದಾರ್ ಪಟೇಲರ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ ಈ ದೇಶಕ್ಕಾಗಿ ಪ್ರಾಣಕೊಟ್ಟ ಇಂದಿರಾಗಾಂಧಿ ಹೆಸರನ್ನು ನೆನಪಿಸಿಕೊಳ್ಳಲೇ ಇಲ್ಲ. ಇನ್ನೂ ಅವರ ಮನಸ್ಸಿನಲ್ಲಿ ಹಾಗೂ ಪಕ್ಷದ ಜನರಲ್ಲಿ ವಿಷ ತುಂಬಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಇಂದಿರಾ ಗಾಂಧಿ ಪುಣ್ಯಸ್ಮರಣೆ ಹಾಗೂ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಯ ಅಗ್ರಗಣ್ಯ ನಾಯಕರಾದ ವಾಜಪೇಯಿ ಅವರು ಇಂದಿರಾಗಾಂಧಿ ಅವರನ್ನು ‘ದುರ್ಗೆ’ ಎಂದು ಕರೆದಿದ್ದರು. ಇಂತಹ ಪಕ್ಷದ ನಾಯಕರಾದ ಮೋದಿ ಅವರ ಬಾಯಲ್ಲಿ ಇಂದಿರಾಗಾಂಧಿ ಅವರ ಹೆಸರೇ ಬರಲಿಲ್ಲ ಎಂದರು.

ಈ ದೇಶದ ಸಮಗ್ರತೆಗೆ ಹೋರಾಟ ಮಾಡಿದವರು ಸರ್ದಾರ್ ಪಟೇಲರು. ದೇಶವನ್ನು ಕಾಪಾಡಲು ನೆಹರು ಹಾಗೂ ಸರ್ದಾರ್ ಪಟೇಲ್ ಅವರಷ್ಟೇ ಅತ್ಯಂತ ತೀವ್ರವಾಗಿ ಈ ದೇಶವನ್ನು ಕಟ್ಟಿದವರು ಇಂದಿರಾಗಾಂಧಿ. ದೇಶದ ಒಗ್ಗಟ್ಟಿಗಾಗಿ ತಮ್ಮ ಪ್ರಾಣವನ್ನೇ ಕೊಟ್ಟರು. ರಾಜೀವ್ ಗಾಂಧಿ ಅವರು ತಾಯಿಯಂತೆ ದೇಶದ ಒಗ್ಗಟ್ಟಿಗೆ ಪ್ರಾಣ ಕೊಟ್ಟರು ಎಂದು ಮಲ್ಲಿಕಾರ್ಜುನ ಖರ್ಗೆ ಸ್ಮರಿಸಿದರು.

ವೈಷಮ್ಯ ಬಿತ್ತುವುದು ಬಿಜೆಪಿ ಕೆಲಸ :

ಜಾತಿಯತೆ ಮೂಡಿಸುವುದು. ಧರ್ಮಗಳ ನಡುವೆ ವೈಷಮ್ಯ ಬಿತ್ತುವುದು ಬಿಜೆಪಿಯವರ ಕೆಲಸ. ಗುಂಪು ಘರ್ಷಣೆ ಸೇರಿದಂತೆ ಈ ದೇಶದೊಳಗೆ ಅಶಾಂತಿಯನ್ನು ಮೂಡಿಸುವುದೇ ಬಿಜೆಪಿಯ ಕೆಲಸ ಎಂದು ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು.

ಪಟೇಲ್‍ರನ್ನು ಕಸಿಯಲು ಪ್ರಯತ್ನ: ಕಾಂಗ್ರೆಸ್ ನಾಯಕರಾದ ಸರ್ದಾರ್ ಪಟೇಲ್ ಅವರನ್ನು ಬಿಜೆಪಿ ಕಸಿಯಲು ಪ್ರಯತ್ನ ಮಾಡುತ್ತಿದೆ. ಗಾಂಧಿ ಅವರನ್ನು ಗೋಡ್ಸೆ ಕೊಂದ ನಂತರ ಆರೆಸ್ಸೆಸ್ ಅನ್ನು ಬ್ಯಾನ್ ಮಾಡಿದರು. ಇದರ ಬಗ್ಗೆ ಬಿಜೆಪಿಯವರು ಏನು ಮಾತನಾಡುವುದಿಲ್ಲ. ಸರ್ದಾರ್ ಪಟೇಲ್ ಅವರ ತತ್ವಗಳಿಗೆ ಬಿಜೆಪಿ ಹಾಗೂ ಮೋದಿ ವಿರುದ್ಧವಾಗಿ ಇದ್ದಾರೆ. ಅವರನ್ನು ಬಿಜೆಪಿಯವರನ್ನಾಗಿ ಮಾಡಿಕೊಳ್ಳಲು ಹೊರಟಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X