Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Mangaluru | ತ್ಯಾಜ್ಯ, ಕುಡಿಯುವ ನೀರು,...

Mangaluru | ತ್ಯಾಜ್ಯ, ಕುಡಿಯುವ ನೀರು, ಒಳಚರಂಡಿ ಅವ್ಯವಸ್ಥೆಯನ್ನು ಆದ್ಯತೆ ಮೇರೆಗೆ ಸರಿಪಡಿಸಲು ಕ್ರಮ : ರಾಹುಲ್ ರತ್ನಂ ಪಾಂಡೆ

ವಾರ್ತಾಭಾರತಿವಾರ್ತಾಭಾರತಿ13 Aug 2026 4:08 PM IST
share
Mangaluru | ತ್ಯಾಜ್ಯ, ಕುಡಿಯುವ ನೀರು, ಒಳಚರಂಡಿ ಅವ್ಯವಸ್ಥೆಯನ್ನು ಆದ್ಯತೆ ಮೇರೆಗೆ ಸರಿಪಡಿಸಲು ಕ್ರಮ : ರಾಹುಲ್ ರತ್ನಂ ಪಾಂಡೆ

ಮಂಗಳೂರು : ನಗರದಲ್ಲಿ ಘನತ್ಯಾಜ್ಯ ವಿಲೇವಾರಿ, ಸ್ವಚ್ಛತೆ, ಕುಡಿಯುವ ನೀರು ಹಾಗೂ ಒಳಚರಂಡಿ ಕುರಿತಂತೆ ಸಾಕಷ್ಟು ಸಮಸ್ಯೆಗಳು ಗಮನಕ್ಕೆ ಬಂದಿದ್ದು, ಆದ್ಯತೆ ನೆಲೆಯಲ್ಲಿ ಅವುಗಳ ಪರಿಹಾರಕ್ಕೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತ ರಾಹುಲ್ ರತ್ನಂ ಪಾಂಡೆ ಭರವಸೆ ನೀಡಿದ್ದಾರೆ.

ಪಾಲಿಕೆ ಕಚೇರಿಯಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಸಂವಾದದ ವೇಳೆ, ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ 15 ದಿನಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕೆಲವೊಂದು ಕಡೆ ಭೇಟಿ ನೀಡಿದ ಸಂದರ್ಭ ತಾವು ಗಮನಿಸಿದ ಸಮಸ್ಯೆಗಳನ್ನು ಉಲ್ಲೇಖಿಸುತ್ತಾ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಡೆಸಲಾಗುತ್ತಿರುವ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ನೀಡಿದರು.

ಪಚ್ಚನಾಡಿಯಲ್ಲಿನ ಸಾಂಪ್ರದಾಯಿಕ ತ್ಯಾಜ್ಯ ವಿಲೇಗೆ ಸಂಬಂಧಿಸಿ ಟೆಂಡರ್ ಆಗಿದ್ದು, ಈ ಕುರಿತು ಸಂಬಂಧಪಟ್ಟ ಕಂಪನಿ ಜತೆ ಸಭೆ ನಡೆಸಬೇಕಿದೆ. ಮನೆಗಳಿಂದ ತ್ಯಾಜ್ಯ ವಿಂಗಡನೆ, ರಸ್ತೆ ಬದಿ ತ್ಯಾಜ್ಯ ಎಸೆಯುವ ಕುರಿತಂತೆಯೂ ವಿಸ್ತೃತ ಯೋಜನೆ ಮೂಲಕ ಸಮಸ್ಯೆ ಬಗೆಹರಿಸಲಾಗುವುದು ಎಂದು ಅವರು ಹೇಳಿದರು.

ನಗರದಲ್ಲಿ ಬಹುದೊಡ್ಡ ಸಮಸ್ಯೆ ಭೂಗತ ಒಳಚರಂಡಿ (ಯುಜಿಡಿ)ಯದ್ದಾಗಿದೆ. 1961ರಲ್ಲಿ ಒಳಚರಂಡಿ ವ್ಯವಸ್ಥೆ ಆರಂಭವಾಗಿ ಈವರೆಗೆ ಶೇ.65ರಷ್ಟು ಮಾತ್ರವೇ ಒಳಚರಂಡಿ ಇದೆ. ಒಳಚರಂಡಿ ಆಗಿರುವ ಶೇ.35ರಷ್ಟು ಭಾಗದಲ್ಲಿ 65 ವರ್ಷಗಳಿಗೂ ಹಳೆಯ ಪೈಪ್‌ಲೈನ್‌ಗಳು ಇರುವುದರಿಂದ ಮಳೆಯಿಂದ ಲೀಕೇಜ್ ಆಗುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸಿದ್ದು, ಅದನ್ನು ಸಂಪೂರ್ಣವಾಗಿ ಸರಿಪಡಿಸಲು 1250 ಕೋಟಿ ರೂ.ಗಳ ಅನುದಾನದ ಅಗತ್ಯತೆಯ ಪ್ರಸ್ತಾವನೆಯನ್ನು ಈಗಾಗಲೇ ಪಾಲಿಕೆಯಿಂದ ಸರಕಾರಕ್ಕೆ ಸಲ್ಲಿಕೆಯಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನದ ಮೂಲಕ ಈ ಸಮಸ್ಯೆಯನ್ನು ಬಗೆಹರಿಸಬೇಕಿದೆ. ಮುಂದಿನ ಸಚಿವ ಸಂಪುಟ ಸಭೆ ಮಂಗಳೂರಿನಲ್ಲಿ ನಡೆಯುವ ನಿರೀಕ್ಷೆ ಇದ್ದು ಆ ಸಂದರ್ಭ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಈ ಸಮಸ್ಯೆಗೆ ಪರಿಹಾರ ದೊರಕಲಿದೆ. ಈ ನಡುವೆ, ಯುಜಿಡಿಗೆ ಸಂಬಂಧಿಸಿ ತುರ್ತು ಕಾಮಗಾರಿಗಳ ಅಗತ್ಯವಿರುವಲ್ಲಿ ಪಾಲಿಕೆ ನಿಧಿಯಿಂದ ಕ್ರಮ ವಹಿಸಲಾಗುವುದು. ದಂಬೇಲ್ ಸೇರಿದಂತೆ ನಗರದ ಹಲವು ಕಡೆಗಳಲ್ಲಿ ವೆಟ್‌ವೆಲ್‌ಗಳು ಶಿಥಿಲಗೊಂಡಿರುವುದು ಗಮನಕ್ಕೆ ಬಂದಿದೆ. ಪಾಲಿಕೆ ವ್ಯಾಪ್ತಿಯಲ್ಲಿರುವ ವೆಟ್‌ವೆಲ್‌ಗಳ ಪ್ರಸಕ್ತ ಸಾಮರ್ಥ್ಯವನ್ನು ಗಮನದಲ್ಲಿಸಿಕೊಂಡು ಮುಂದಿನ 2051ರ ಜನಸಂಖ್ಯೆಗೆ ಅನುಗುಣವಾಗಿ ಅವುಗಳನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಆದ್ಯತೆ ನೆಲೆಯಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದವರು ವಿವರ ನೀಡಿದರು.

ಎಸ್‌ಟಿಪಿಗಳ ತ್ಯಾಜ್ಯ ನೀರು ಸಂಸ್ಕರಣೆಗೆ ಕ್ರಮ

ನಗರದಲ್ಲಿರುವ ನಾಲ್ಕು ಎಸ್‌ಟಿಪಿಗಳಲ್ಲಿ ಸದ್ಯ ಕಾವೂರು ಎಸ್‌ಟಿಪಿಯಲ್ಲಿ ಮಾತ್ರವೇ ತ್ಯಾಜ್ಯ ನೀರು ಸಂಸ್ಕರಣೆಗೊಂಡು ಎಂಸಿಎಫ್‌ಗೆ ಮರುಬಳಕೆಯಾಗುತ್ತಿದೆ. ಎಸ್‌ಟಿಪಿಗಳ ಕೊಳಚೆ ನೀರು ನದಿಗಳಿಗೆ ಹರಿದು ಜಲಚರಗಳ ಸಾವು, ನೀರು ಮಾಲಿನ್ಯಗೊಳ್ಳುತ್ತಿರುವ ಕುರಿತಂತೆ ಪಾಲಿಕೆ ಮೇಲೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, ಎನ್‌ಜಿಟಿಯಿಂದ ಹಲವು ಪ್ರಕರಣಗಳು ದಾಖಲಾಗಿವೆ. ಬಜಾಲ್, ಪಚ್ಚನಾಡಿ ಮೊದಲಾದ ಎಸ್‌ಟಿಪಿಗಳಲ್ಲಿ ಪ್ರಾಥಮಿಕ ಹಂತದ ಸಂಸ್ಕರಣೆ ಮಾಡಲಾಗುತ್ತಿದೆಯೇ ಹೊರತು ದ್ವಿತೀಯ ಹಂತದಲ್ಲಿ ಸಂಸ್ಕರಣೆ ನಡೆಯುತ್ತಿಲ್ಲ.ಬಜಾಲ್ ಮತ್ತು ಪಚ್ಚನಾಡಿಯಲ್ಲಿ ದ್ವಿತೀಯ ಹಂತದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ರಚನೆಯ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ. ಕಾವೂರು ಎಸ್‌ಟಿಪಿಯಲ್ಲಿ ಕೈಗಾರಿಕೆಯ ಬೇಡಿಕೆಯ ಪ್ರಮಾಣದಲ್ಲಿ ಸಂಸ್ಕರಣೆಗೊಂಡ ನೀರು ಸಿಗುತ್ತಿಲ್ಲ. ಹಾಗಾಗಿ ಪಚ್ಚನಾಡಿ ಎಸ್‌ಟಿಪಿ ನೀರು ಬಳಕೆ ಕುರಿತಂತೆ ಈ ಹಿಂದೆಯೇ ಆಗಿರುವ ಒಪ್ಪಂದದ ಪ್ರಕಾರ ಪಚ್ಚನಾಡಿಯಿಂದ ಕಾವೂರಿಗೆ ನೀರು ಹರಿಸಿ ಕೈಗಾರಿಕೆಗೆ ಬಳಸಬಹುದಾಗಿದೆ. ಇದಕ್ಕಾಗಿ 25 ಕೋಟಿ ರೂ.ಗಳ ಅಂದಾಜು ವೆಚ್ಚ ತಯಾರಿಸಲಾಗಿದ್ದು, ಅದನ್ನು ಅರ್ಬನ್ ಚಾಲೆಂಜ್ ಫಂಡ್ (ಯುಸಿಎಫ್)ನಿಂದ ಪಡೆದು ಅಗತ್ಯ ಕ್ರಮ ವಹಿಸಲಾಗುವುದು ಎಂದು ಆಯುಕ್ತ ರಾಹುಲ್ ರತ್ನಂ ಪಾಂಡೆ ವಿವರ ನೀಡಿದರು.

ಅಗತ್ಯವಿರುವಲ್ಲಿ ರಸ್ತೆ ಅಗಲೀಕರಣ- 60 ವಾರ್ಡ್‌ಗೂ ಪ್ರತಿದಿನ ನೀರು

ಕೆಲವೊಂದು ಪ್ರಮುಖ ರಸ್ತೆಗಳ ಅಗಲೀಕರಣ ಹಾಗೂ ಪುಟ್‌ಪಾತ್‌ಗಳ ನಿರ್ಮಾಣಕ್ಕೂ ಆದ್ಯತೆ ನೆಲೆಯಲ್ಲಿ ಕ್ರಮ ವಹಿಸಲಾಗುವುದು. ಸದ್ಯ ಪಾಲಿಕೆಯ 50 ವಾರ್ಡ್‌ಗಳಿಗೆ ಪ್ರತಿದಿನ ಹಾಗೂ 10 ವಾರ್ಡ್‌ಳಲ್ಲಿ ಎರಡು ದಿನಕೊಮ್ಮೆ ನೀರು ಪೂರೈಕೆ ನಡೆಯುತ್ತಿದೆ. ಪ್ರತಿ ವಾರ್ಡ್‌ಗಳ ಪ್ರತಿ ಮನೆಗೂ ಪ್ರತಿದಿನ ನೀರು ಸರಬರಾಜು ಮಾಡಬೇಕೆಂಬುದು ನಮ್ಮ ಗುರಿ. ಆ ನಿಟ್ಟಿನಲ್ಲಿ ಡಬ್ಲ್ಯುಟಿಪಿ (ವಾಟರ್ ಟ್ರೀಟ್‌ಮೆಂಟ್ ಪ್ಲಾಂಟ್)ನಲ್ಲಿ ಬದಲಾವಣೆ ಮಾಡಿಕೊಂಡು ಹಬ್ಬಗಳ ಬಳಿಕ ಎಲ್ಲಾ ವಾರ್ಡ್‌ಗಳಿಗೂ ಪ್ರತಿದಿನ ನೀರು ಸಿಗುವಂತೆ ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದರು.

ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುತ್ತಿದ್ದು, ಅದರ ಜತೆಗೆ ಜನ ಜಾಗೃತಿ ಅಭಿಯಾನವನ್ನೂ ನಡೆಸಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೆ ಕೆಲವೊಂದು ಸರಕಾರೇತರ ಸಂಸ್ಥೆಗಳವರು ಸ್ವಯಂ ಪ್ರೇರಿತವಾಗಿ ಈ ಕಾರ್ಯಕ್ಕೆ ಸಹಕಾರ ನೀಡಲು ಮುಂದಾಗಿದ್ದು,ಅವರ ಜತೆ ಚರ್ಚಿಸಿ ಮುಂದಿನ ಕ್ರಮ ವಹಿಸುವುದಾಗಿ ಪಾಲಿಕೆ ಆಯುಕ್ತರು ತಿಳಿಸಿದರು.

ಮುಂದಿನ ದಿನಗಳಲ್ಲಿ ರಸ್ತೆ ಅಗಲೀಕರಣದ ಸಂದರ್ಭ ಮರಗಳನ್ನು ನೆಟ್ಟು ಪೋಷಣೆ ಮಾಡುವ ಬಗ್ಗೆಯೂ ಕ್ರಮ ವಹಿಸಲಾಗುವುದು.

ಮಾರುಕಟ್ಟೆಗಳ ಸ್ಥಿತಿಗತಿ ಪರಿಶೀಲನೆ ಬಗ್ಗೆ ಮುಂದಿನ ವಾರ ಸಭೆ

ಉರ್ವಾ ಮಾರುಕಟ್ಟೆ ಸೇರಿದಂತೆ ನಗರದ ಹಲವೊಂದು ಮಾರುಕಟ್ಟೆಗಳು ನಿರ್ಮಾಣವಾಗಿ ಹಲವು ಸಮಯಗಳಾದರೂ ಬಳಕೆಯಲ್ಲಿಲ್ಲದಿರುವುದು ಗಮನಕ್ಕೆ ಬಂದಿದೆ. ಮಾರುಕಟ್ಟೆಗಳಿಗೆ ಸಾಕಷ್ಟು ಹಣವನ್ನು ವೆಚ್ಚ ಮಾಡಲಾಗಿದ್ದು, ಅದಕ್ಕಾಗಿ ಸಾಕಷ್ಟು ಸಾಲವನ್ನು ಪಡೆಯಲಾಗಿದೆ. ಹಾಗಾಗಿ ಅವುಗಳ ಬಳಕೆ ಬಗ್ಗೆ ಕ್ರಮ ಅಗತ್ಯವಾಗಿದೆ. ಕಂಕನಾಡಿ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಕೇಂದ್ರ ಮಾರುಕಟ್ಟೆ ಸೇರಿದಂತೆ ನಗರದ ಎಲ್ಲಾ ಮಾರುಕಟ್ಟೆಗಳ ಸ್ಥಿತಿಗತಿಗಳ ಬಗ್ಗೆ ಮುಂದಿನ ವಾರ ಸಭೆ ನಡೆಸಿ ಸೂಕ್ತ ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ತಿಳಿಸಿದರು.

ಫುಟ್‌ಪಾತ್‌ಗಳು ಪಾದಾಚಾರಿಗಳಿಗೆ ಮಾತ್ರ- ಬೀದಿ ವ್ಯಾಪಾರಿಗಳಿಗೂ ಸೂಕ್ತ ವ್ಯವಸ್ಥೆ

ನಗರದಲ್ಲಿ ಫುಟ್‌ಪಾತ್‌ಗಳು ಪಾದಾಚಾರಿಗಳಿಗೆ ಮಾತ್ರವೇ ಸೀಮಿತವಾಗಿರಬೇಕು. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್‌ನ ಆದೇಶದಂತೆ ಕ್ರಮ ವಹಿಸುವ ಜತೆಗೆ ಬೀದಿಬದಿ ವ್ಯಾಪಾರಿಗಳ ಹಿತಾಸಕ್ತಿಯನ್ನು ಕಾಪಾಡಲಾಗುವುದು. ಬೀದಿಬದಿ ವ್ಯಾಪಾರಿಗಳ ಮಾರ್ಗಸೂಚಿಯಂತೆ ಯಾರೆಲ್ಲಾ ಅರ್ಹರು, ರಾಜ್ಯದವರಿಗೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸುವ ಮೂಲಕ ನಿಯಮಗಳನ್ನು ಪಾಲನೆ ಮಾಡಲಾಗುವುದು ಎಂದು ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಭರವಸೆ ನೀಡಿದರು.

Tags

Mangaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X