Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದೇಶದಲ್ಲಿ ಕ್ರೌರ್ಯ ತುಂಬಿ ತುಳುಕುತ್ತಿದೆ...

ದೇಶದಲ್ಲಿ ಕ್ರೌರ್ಯ ತುಂಬಿ ತುಳುಕುತ್ತಿದೆ : ಮಾವಳ್ಳಿ ಶಂಕರ್

‘ತ್ರಿಪುರ ಅಂದು ಇಂದು’ ಸಂವಾದ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ16 March 2025 11:26 PM IST
share
ದೇಶದಲ್ಲಿ ಕ್ರೌರ್ಯ ತುಂಬಿ ತುಳುಕುತ್ತಿದೆ : ಮಾವಳ್ಳಿ ಶಂಕರ್

ಬೆಂಗಳೂರು : ಇವತ್ತಿನ ಪರಿಸ್ಥಿತಿಯಲ್ಲಿ ದೇಶದಲ್ಲಿ ಕ್ರೌರ್ಯ ತುಂಬಿ ತುಳುಕುತ್ತಿದೆ ಎಂದು ದಲಿತ ಸಂಘರ್ಷ ಸಮಿತಿಯ ಪ್ರದಾನ ಸಂಚಾಲಕ ಮಾವಳ್ಳಿ ಶಂಕರ್ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ನಗರದ ಎಸ್‍ಸಿಎಂ ಹೌಸ್‍ನಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಹಾಗೂ ಸೌಹಾರ್ದ ಕರ್ನಾಟಕದ ವತಿಯಿಂದ ಆಯೋಜಿಸಿದ್ದ‘ತ್ರಿಪುರ ಅಂದು ಇಂದು’ ಸಂವಾದದಲ್ಲಿ ಮಾತನಾಡಿದ ಅವರು, ಇತ್ತೀಚಿಗೆ ರಾಜ್ಯ ಸರಕಾರ ಬಜೆಟ್ ಮಂಡನೆ ಮಾಡುವಾಗ ಜನಸಂಖ್ಯೆಗೆ ಅನುಗುಣವಾಗಿ ಅಲ್ಪಸಂಖ್ಯಾತರಿಗೆ ಅನುದಾನವನ್ನು ನೀಡಿದ್ದಾರೆ. ಅವರ ಜನಸಂಖ್ಯೆಗೆ ಆ ಬಜೆಟ್ ತುಂಬಾ ಕಡಿಮೆಯೇ ಇದೆ. ಅದನ್ನು ಹಲಾಲ್ ಕಟ್ ಬಜೆಟ್ ಎನ್ನುವ ಮೂಲಕ ಪ್ರತಿಯೊಂದರಲ್ಲೂ ಧರ್ಮವನ್ನು ತರಲಾಗುತ್ತಿದೆ ಎಂದು ಹೇಳಿದರು.

ನಮ್ಮ ಪ್ರಾರಂಭದ ಹೋರಾಟದ ದಿನಗಳಲ್ಲೇ ಪಶ್ಚಿಮ ಬಂಗಾಳ, ಕೇರಳ, ತ್ರಿಪುರ ಇವುಗಳಲ್ಲಿ ಬದಲಾವಣೆ ಪರ್ವ ಆರಂಭವಾಗಿತ್ತು. ಮುಂದಿನ ದಿನಗಳಲ್ಲಿ ಇಡೀ ದೇಶ ಆ ರೀತಿಯ ಸಮಾನತೆಯ ಹೆಜ್ಜೆಗಳನ್ನು ಇಡುತ್ತೆ ಎನ್ನುವ ಬಹುದೊಡ್ಡ ಆಸೆಯನ್ನು ಇಟ್ಟುಕೊಂಡಿದ್ದೆವು. ಆದರೆ ಅದು ಹುಸಿಯಾಗಿದೆ ಎಂದು ತಿಳಿಸಿದರು.

ಕಳೆದ 15 ವರ್ಷಗಳಲ್ಲಿ ದೇಶ ಯಾವ ದಿಕ್ಕಿನ ಕಡೆ ಹೋಗುತ್ತಿದೆ ಎನ್ನುವುದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಒರಿಸ್ಸಾದಲ್ಲಿ 1999ರಲ್ಲಿ ಜನರಿಗಾಗಿ ಕೆಲಸ ಮಾಡುತ್ತಿದ್ದ ಒಂದು ಕುಟುಂಬಕ್ಕೆ ಬೆಂಕಿ ಹಾಕಿ ಸುಡಲಾಯಿತು. ಅದರ ಹಿಂದೆ ಇದ್ದಿದ್ದು ಬಜರಂಗದಳವಾಗಿತ್ತು. ಈಗ ಮಣಿಪುರ ಹತ್ತಿ ಉರಿಯುತ್ತಿದೆ. ಮಹಿಳೆಯರನ್ನು ಬೆತ್ತಲೆಗೊಳಿಸಲಾಗುತ್ತಿದೆ ಆದರೆ, ಬೇಟಿ ಪಡಾವೋ ಬೇಟಿ ಬಚಾವೋ ಎಂದು ಹೇಳಲಾಗುತ್ತಿದೆ. ಇಂತಹ ವಿಪರ್ಯಾಸಗಳ ನಡುವೆ ನಾವು ಬದುಕುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ಈಶಾನ್ಯ ರಾಜ್ಯಗಳಲ್ಲಿ ಇರುವ ಬುಡಕಟ್ಟು ಸಮುದಾಯಗಳನ್ನು ಯಾವ ರೀತಿಯಲ್ಲಿ ಕೋಮುವಾದೀಕರಣಗೊಳಿಸಲಾಗುತ್ತಿದೆ ಎನ್ನುವುದನ್ನು ಹಾಗೂ ಅಲ್ಲಿನ ರಾಜಕೀಯ ವಾತಾವರಣವನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಇದೇ ವೇಳೆ ಆದಿವಾಸಿ ಅಧಿಕಾರ ರಾಷ್ಟ್ರೀಯ ಮಂಚ್‍ನ ರಾಷ್ಟ್ರೀಯ ಅಧ್ಯಕ್ಷ ಜಿತೇಂದ್ರ ಚೌಧುರಿ ಸಂವಾದ ನಡೆಸಿದರು. ಪತ್ರಕರ್ತೆ ಮಂಜುಶ್ರೀ ಕಡಕೋಳ, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹ ಸಂಚಾಲಕ ಡಾ.ಎಸ್.ವೈ.ಗುರುಶಾಂತ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X