Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸರಕಾರಿ ಕಾರ್ಯಕ್ರಮಗಳಲ್ಲಿ ವೈದಿಕ...

ಸರಕಾರಿ ಕಾರ್ಯಕ್ರಮಗಳಲ್ಲಿ ವೈದಿಕ ಆಚರಣೆಗೆ ಮಾವಳ್ಳಿ ಶಂಕರ್ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ20 Aug 2026 8:07 PM IST
share
ಸರಕಾರಿ ಕಾರ್ಯಕ್ರಮಗಳಲ್ಲಿ ವೈದಿಕ ಆಚರಣೆಗೆ ಮಾವಳ್ಳಿ ಶಂಕರ್ ಆಕ್ಷೇಪ

ಬೆಂಗಳೂರು : ಸರಕಾರಿ ಕಾರ್ಯಕ್ರಮಗಳಲ್ಲಿ ವೈದಿಕ ಆಚರಣೆಗಳು ವ್ಯಾಪಕವಾಗುತ್ತಿವೆ. ಒಂದೊಂದು ಮಂತ್ರಿ ಮಂಡಲ ಬಂದಾಗಲೂ ವಿದಾನಸೌಧದ ಕಚೇರಿಗಳನ್ನು ಮಾರ್ಪಾಡು ಮಾಡುವ ಕೆಲಸ ಸಲ್ಲ, ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಹೇಳಿದ್ದಾರೆ.

ಗುರುವಾರ ವೀಂದ್ರ ಕಲಾಕ್ಷೇತ್ರ ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಕರ್ನಾಟಕ ವೈಜ್ಞಾನಿಕ ಮನೋವೃತ್ತಿ ವೇದಿಕೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂವಿಧಾನದ 51ಎ(ಎಚ್) ಬೋಧಿಸಿ ಮಾತನಾಡಿದ ಅವರು, ವೈಜ್ಞಾನಿಕ ಕಾರ್ಯಕ್ರಮಗಳು ವರ್ಷಪೂರ್ತಿ ನಡೆಯುವಂತಾಗಬೇಕು. ಅಂಬೇಡ್ಕರ್, ಗಾಂಧಿ, ಕುವೆಂಪು ಅಧ್ಯಯನ ಕೇಂದ್ರಗಳ ಸಹಯೋಗದಲ್ಲಿ ಈ ಕಾರ್ಯಕ್ರಮಗಳು ನಡೆಯಬೇಕು ಎಂದರು.

ವಿಜ್ಞಾನಿ ಡಾ.ಎಸ್.ಚಟರ್ಜಿ ಮಾತನಾಡಿ, ಡಾ.ನರೇಂದ್ರ ದಾಬೋಳ್ಕರ್ ಹತ್ಯೆ ಇಡೀ ಜಗತ್ತಿನ ಗಮನ ಸೆಳೆದಿದೆ. ಪ್ರಶ್ನೆ ಮಾಡುವ ಧ್ವನಿಯನ್ನು ಅಡಗಿಸುವ ಪ್ರಯತ್ನಗಳು ನಡೆಯುತ್ತಲೇ ಇವೆ. ಇದರ ವಿರುದ್ದ ವಿಜ್ಞಾನಿಗಳೂ ಸೇರಿದಂತೆ ಎಲ್ಲ ಸಂಘಟನೆಗಳು ಒಗ್ಗೂಡಬೇಕು ಎಂದು ತಿಳಿಸಿದರು.

ಜ್ಞಾನ ವಿಜ್ಞಾನ ಸಮಿತಿ ರಾಜ್ಯಾಧ್ಯಕ್ಷ ಡಾ.ಸಿ.ಆರ್.ಚಂದ್ರಶೇಖರ್ ಮಾತನಾಡಿ, ನಾವುಗಳು ಮೌಢ್ಯ, ಕಂದಚಾರಗಳ ಜೊತೆಗೆ ಭ್ರಷ್ಟಾಚಾರವನ್ನು ಪ್ರಶ್ನಿಸಬೇಕಿದೆ. ಆದರೆ, ಪ್ರಶ್ನಿಸುವವರನ್ನು ಮುಗಿಸುವ ವ್ಯವಸ್ಥೆಯಡಿಯಲ್ಲಿ ನಾವುಗಳು ಇದ್ದೇವಾದರೂ, ಎದೆಗುಂದದೆ ಆತ್ಮವಿಶ್ವಾಸದೊಂದಿಗೆ ಮುನ್ನುಗ್ಗಬೇಕಿದೆ. ಭಯವೇ ಮೌಢ್ಯದ ಮೂಲ ಬೀಜವಾಗಿದ್ದು, ಭಯಕ್ಕೆ ಅವಕಾಶ ಕೊಡದೆ ಆತ್ಮಬಲ ಹೆಚ್ಚಿಸಿಕೊಳ್ಳಬೇಕಿದೆ ಎಂದು ಹೇಳಿದರು.

ಕರ್ನಾಟಕ ಜನಶಕ್ತಿ ಗೌರವಾಧ್ಯಕ್ಷ ಪ್ರೊ.ನಗರಗೆರೆ ರಮೇಶ್ ಮಾತನಾಡಿ, ಮೌಢ್ಯಾಚರಣೆ ತೊಲಗಲು ರಾಜಕೀಯ ಬದಲಾವಣೆಗಳಾಗಬೇಕು. ರಾಜಕೀಯವನ್ನು ಹೊರತುಪಡಿಸಿ, ವೈಜ್ಞಾನಿಕ ಮನೋಭಾವದ ಬಗ್ಗೆ ಮಾತನಾಡಲು ಸಾಧ್ಯವಿಲ್ಲ. ರಾಜ್ಯದಲ್ಲಿ ವೈಚಾರಿಕ ಆಂದೋಲನ ರೂಪಿಸಲು ಪ್ರಗತಿಪರ ಸಂಘಟನೆಗಳು ಒಗ್ಗೂಡಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಪ್ರಬುದ್ಧ ಸಮಾಜ ವೇದಿಕೆಯ ಎಚ್.ಕೆ.ವಿವೇಕಾನಂದ, ಪತ್ರಕರ್ತೆ ಶಶಿಕಲಾ, ವೇದಿಕೆಯ ಪದಾಧಿಕಾರಿಗಳಾದ ಈ.ಬಸವರಾಜು, ನಾ.ಶ್ರೀಧರ್, ಕೆ.ಬಿ.ಮಹದೇವಪ್ಪ, ಗೋವಿಂದರಾಜ್ ಪಟೇಲ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

GovernmentVedic ritualsMavalli Shankar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X