Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯದ ವಿವಿಧ ಉದ್ದಿಮೆ ವಲಯಗಳಲ್ಲಿ...

ರಾಜ್ಯದ ವಿವಿಧ ಉದ್ದಿಮೆ ವಲಯಗಳಲ್ಲಿ ವಿಪುಲ ಅವಕಾಶ : ಎಂ.ಬಿ.ಪಾಟೀಲ್‌

ದಕ್ಷಿಣ ಕೊರಿಯಾದ ರಾಜಧಾನಿ ಸೋಲ್‍ನಲ್ಲಿ ʼರೋಡ್ ಶೋ’

ವಾರ್ತಾಭಾರತಿವಾರ್ತಾಭಾರತಿ2 July 2024 10:12 PM IST
share
ರಾಜ್ಯದ ವಿವಿಧ ಉದ್ದಿಮೆ ವಲಯಗಳಲ್ಲಿ ವಿಪುಲ ಅವಕಾಶ : ಎಂ.ಬಿ.ಪಾಟೀಲ್‌

ಬೆಂಗಳೂರು : ಮುಂದಿನ ವರ್ಷದ ಫೆಬ್ರವರಿಯಲ್ಲಿ ನಗರದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸುವುದಕ್ಕೆ ದಕ್ಷಿಣ ಕೊರಿಯಾದ ಉದ್ಯಮಿಗಳನ್ನು ಆಹ್ವಾನಿಸಲು ಕರ್ನಾಟಕ ಸರಕಾರವು ಮಂಗಳವಾರ ಸೋಲ್‍ನಲ್ಲಿ ಯಶಸ್ವಿಯಾಗಿ ರೋಡ್ ಶೋ ನಡೆಸಿತು.

ಈ ವೇಳೆ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ವಿದ್ಯುತ್ ಚಾಲಿತ ವಾಹನಗಳ ಭವಿಷ್ಯ, ಅತ್ಯಾಧುನಿಕ ಯಂತ್ರೋಪಕರಣ, ಬಾಹ್ಯಾಕಾಶ ತಂತ್ರಜ್ಞಾನ ಸೇರಿದಂತೆ ವಿವಿಧ ಉದ್ದಿಮೆ ವಲಯಗಳಲ್ಲಿ ರಾಜ್ಯದಲ್ಲಿ ಇರುವ ವಿಪುಲ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.

ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ಸರಕಾರ ನೀಡಿದ ಆಹ್ವಾನ ಮನ್ನಿಸಿ ಕೆಲ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿ, ಕರ್ನಾಟಕದ ಕೈಗಾರಿಕಾ ಅಭಿವೃದ್ಧಿಗೆ ಕೈಜೋಡಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಆಗಿದೆ. ಕೈಗಾರಿಕೆಗಳ ಸ್ಥಾಪನೆಗೆ ಕರ್ನಾಟಕದಲ್ಲಿ ಇರುವ ಪೂರಕ ಪರಿಸರ ಹಾಗೂ ಹೂಡಿಕೆಗೆ ಕರ್ನಾಟಕವು ಅಚ್ಚುಮೆಚ್ಚಿನ ತಾಣವಾಗಿರುವುದನ್ನು ರೋಡ್ ಶೋನಲ್ಲಿ ಮನವರಿಕೆ ಮಾಡಿಕೊಡಲಾಯಿತು. ಭಾರತದಲ್ಲಿ ಪ್ರಮುಖ ಆವಿಷ್ಕಾರ ಕೇಂದ್ರವಾಗಿರುವ ಕರ್ನಾಟಕವು ರೋಡ್ ಶೋನಲ್ಲಿ ಕೊರಿಯಾದ ಉದ್ಯಮಿಗಳ ಗಮನ ಸೆಳೆಯುವಲ್ಲಿ ಸಫಲವಾಯಿತು.

ದಕ್ಷಿಣ ಕೊರಿಯಾದಲ್ಲಿನ ಭಾರತೀಯ ವಾಣಿಜ್ಯೋದ್ಯಮ ಮಹಾಸಂಘದ(ಐಸಿಸಿಕೆ)ಸಹಯೋಗದಲ್ಲಿ ಈ ರೋಡ್ ಶೋ ಏರ್ಪಡಿಸಲಾಗಿತ್ತು. ಸಚಿವರ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು, ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆಗಳ ವಿಸ್ತರಣೆಗೆ ಕೊರಿಯಾದ ಕಂಪನಿಗಳಿಗೆ ಕರ್ನಾಟಕದಲ್ಲಿ ಇರುವ ಅವಕಾಶಗಳನ್ನು ಮನವರಿಕೆ ಮಾಡಿಕೊಟ್ಟಿತು. ರಾಜ್ಯಕ್ಕೆ ಬಂಡವಾಳ ಆಕರ್ಷಿಸಲು ಉನ್ನತ ಮಟ್ಟದ ನಿಯೋಗವು ದಕ್ಷಿಣ ಕೊರಿಯಾಕ್ಕೆ 5 ದಿನಗಳ ಭೇಟಿ ನೀಡುತ್ತಿದೆ.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ರೋಡ್ ಶೋನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶದ ಬಗ್ಗೆ ಮಾಹಿತಿ ನೀಡಿದರು. ಈ ರೋಡ್ ಶೋನಲ್ಲಿ ದಕ್ಷಿಣ ಕೊರಿಯಾದ 45ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಂಡಿದ್ದವು. ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸುವ ಬಗ್ಗೆ ಆಸಕ್ತಿ ಪ್ರದರ್ಶಿಸಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X