Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿಮಾನ ನಿಲ್ದಾಣ ಸಮೀಪ ಜ್ಯುವೆಲ್ಲರಿ...

ವಿಮಾನ ನಿಲ್ದಾಣ ಸಮೀಪ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆ : ಎಂ.ಬಿ.ಪಾಟೀಲ್

ಆಭರಣ ಪ್ರದರ್ಶನ ಮೇಳಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ21 March 2025 8:38 PM IST
share
ವಿಮಾನ ನಿಲ್ದಾಣ ಸಮೀಪ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆ : ಎಂ.ಬಿ.ಪಾಟೀಲ್

ಬೆಂಗಳೂರು : ಆಭರಣ ರಫ್ತಿಗೆ ಉತ್ತೇಜನ ನೀಡಲು ಸರಕಾರ ಒತ್ತು ನೀಡಲಿದ್ದು, ದೇವನಹಳ್ಳಿ ವಿಮಾನ ನಿಲ್ದಾಣ ಸಮೀಪದಲ್ಲಿ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಜಾಗ ನೀಡಲು ರಾಜ್ಯ ಸರಕಾರ ಮುಕ್ತವಾಗಿದೆ. ಇದನ್ನು ಆಭರಣ ಉದ್ಯಮಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಶುಕ್ರವಾರ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ನಾಲ್ಕು ದಿನಗಳ ಆಭರಣ ಪ್ರದರ್ಶನ ಮತ್ತು ವಾಣಿಜ್ಯ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆಭರಣಗಳ ರಫ್ತಿಗೆ ಇರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಹೂಡಿಕೆ ಮಾಡಲು ಉದ್ಯಮಿಗಳು ಮುಂದಾಗಬೇಕು ಎಂದರು.

ಸುಸ್ಥಿರತೆಗೆ ಒತ್ತು ನೀಡುವ ದಿಸೆಯಲ್ಲಿ ‘ನೆಟ್ ಜೀರೋ ಜ್ಯುವೆಲ್ಲರಿ ಪಾರ್ಕ್’ ನಿರ್ಮಿಸಲು ಹಿತಾಸಕ್ತಿದಾರರು ಗಮನ ವಹಿಸಬೇಕು. ಇದೇ ಮಾ.24ರವರೆಗೆ ನಡೆಯಲಿರುವ ದೇಶದ ಮೂರನೇ ಅತಿದೊಡ್ಡ ಚಿನ್ನಾಭರಣ ಮೇಳವನ್ನು ಮುಂಬರುವ ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ದಿ ಜೆಮ್ ಅಂಡ್ ಜ್ಯುವೆಲ್ಲರಿ ಎಕ್ಸ್‍ಸ್ಪೋರ್ಟ್ ಪ್ರಮೋಶನ್ ಕೌನ್ಸಿಲ್ ಏರ್ಪಡಿಸಿದೆ ಎಂದು ಎಂ.ಬಿ.ಪಾಟೀಲ್ ಹೇಳಿದರು.

ವಿಶ್ವ ದರ್ಜೆಯ ಮೂಲಸೌಕರ್ಯ, ಪುರೋಗಾಮಿ ನೀತಿಗಳು ಮತ್ತು ಕೌಶಲ್ಯಪೂರ್ಣ ಕೆಲಸಗಾರರನ್ನು ಹೊಂದಿರುವ ರಾಜ್ಯವು ಆಭರಣ ತಯಾರಿಕೆ ಮತ್ತು ರಫ್ತು ವಹಿವಾಟಿಗೆ ಪ್ರಶಸ್ತ ತಾಣವಾಗಿದೆ. ಇದಕ್ಕೆ ಪೂರಕವಾಗಿ, ಉಡುಪಿಯಲ್ಲಿ ಇರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಜೆಮ್ ಅಂಡ್ ಜ್ಯೂವೆಲ್ಲರಿ ಸಂಸ್ಥೆಯು ಆಭರಣ ಕುಶಲಕರ್ಮಿಗಳನ್ನು ಸಜ್ಜುಗೊಳಿಸುತ್ತಿದೆ ಎಂದು ಎಂ.ಬಿ.ಪಾಟೀಲ್ ವಿವರಿಸಿದರು.

ದೇಶದಲ್ಲಿ ವಾರ್ಷಿಕ 32 ಬಿಲಿಯನ್ ಡಾಲರ್ ಮೊತ್ತದ ಆಭರಣ ವಹಿವಾಟು ನಡೆಯುತ್ತಿದೆ. ಮುಖ್ಯವಾಗಿ ಇಲ್ಲಿಂದ ಅಮೆರಿಕ, ಅರಬ್ ಸಂಯುಕ್ತ ಸಂಸ್ಥಾನ, ರಷ್ಯಾ, ಸಿಂಗಪುರ್ ಮತ್ತು ಹಾಂಕಾಂಗ್ ಮಾರುಕಟ್ಟೆಗೆ ಹೆಚ್ಚಿನ ಆಭರಣಗಳನ್ನು ಕಳುಹಿಸಲಾಗುತ್ತಿದೆ. ಉಡುಪಿಯಲ್ಲಿರುವ ಕಾಮನ್ ಫೆಸಿಲಿಟಿ ಸೆಂಟರ್ ಐದು ವರ್ಷಗಳ ಹಿಂದೆ 55 ವಿದ್ಯಾರ್ಥಿಗಳನ್ನು ಹೊಂದಿತ್ತು. ಈಗ ಅಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಅವರಿಗೆ ಹೊಸ ಬಗೆಯ ಕೌಶಲ್ಯಗಳನ್ನು ಕಲ್ಪಿಸಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಮಹಿಳೆಯರು ಮತ್ತು ಯುವಜನರಿಗೆ ಆದ್ಯತೆ ನೀಡಲಾಗಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ಪ್ರಸ್ತುತ ಮೇಳದಲ್ಲಿ ಆಭರಣ ವಲಯದ 80 ಪ್ರಮುಖ ಕಂಪೆನಿಗಳು ಪಾಲ್ಗೊಂಡಿವೆ. ಇವು ಹೊಸ ಬಗೆಯ ಯಂತ್ರೋಪಕರಣಗಳು, ತಂತ್ರಜ್ಞಾನ ಮತ್ತು ಪ್ಯಾಕೇಜಿಂಗ್ ಬಗ್ಗೆ ಗಮನ ಕೇಂದ್ರೀಕರಿಸಿವೆ. ಜತೆಗೆ ಭಾರತದ 15 ಸಾವಿರ ಮತ್ತು ವಿದೇಶಗಳ 300ಕ್ಕೂ ಹೆಚ್ಚು ಆಭರಣ ಖರೀದಿದಾರರು ಭಾಗವಹಿಸುತ್ತಿದ್ದಾರೆ. ಈಗ ಹೊಸ ಬಗೆಯ ವಿನ್ಯಾಸಗಳ ಆಭರಣಗಳಿಗೆ ಇರುವ ಬೇಡಿಕೆಯನ್ನು ತಿಳಿಸಿದರೆ, ಅಂತಹ ವಿನ್ಯಾಸಗಳನ್ನು ಅಕ್ಷಯ ತೃತೀಯ ವೇಳೆಗೆ ಸಿದ್ಧಪಡಿಸಿ, ವ್ಯಾಪಾರಿಗಳಿಗೆ ಪೂರೈಸಲಾಗುವುದು ಎಂದು ಎಂ.ಬಿ.ಪಾಟೀಲ್ ಹೇಳಿದರು.

ರಾಜ್ಯವು ಉದ್ಯಮಸ್ನೇಹಿ ಮತ್ತು ರಫ್ತು ಕೇಂದ್ರಿತ ಹೊಸ ಕೈಗಾರಿಕಾ ನೀತಿಯನ್ನು ಹೊಂದಿದೆ. ವಿದೇಶಿ ಹೂಡಿಕೆಯಲ್ಲಿ ದೇಶದಲ್ಲಿ ಮೊದಲ ಸ್ಥಾನದಲ್ಲಿರುವ ಕರ್ನಾಟಕವು ಜಿಎಸ್‍ಟಿ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ಇದಲ್ಲದೆ, ಉದ್ಯಮ ಬೆಳವಣಿಗೆಗೆ ಸಂಬಂಧಿಸಿದ ಇನ್ನೂ ಕೆಲವಾರು ಸೂಚ್ಯಂಕಗಳಲ್ಲಿ ರಾಜ್ಯವು ಮೇಲ್ಪಂಕ್ತಿಯಲ್ಲಿದೆ. 2033ರ ವೇಳೆಗೆ ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೊಂದಲಿದ್ದು, ಅದಕ್ಕಾಗಿ ಈಗಾಗಲೇ ಕಾರ್ಯ ಆರಂಭವಾಗಿದೆ. ಹೀಗಾಗಿ, ಆಭರಣ ಉದ್ದಿಮೆದಾರರು ರಾಜ್ಯದಲ್ಲಿ ಹೂಡಿಕೆ ಮಾಡುವತ್ತ ಗಮನ ಹರಿಸಬೇಕು. ಈ ವಲಯದ ಬೆಳವಣಿಗೆಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನೂ ಸರಕಾರವು ಒದಗಿಸಲಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ಕಾರ್ಯಕ್ರಮದಲ್ಲಿ ದಿ ಜೆಮ್ ಅಂಡ್ ಜ್ಯುವೆಲ್ಲರಿ ಎಕ್ಸ್‌ಸ್ಪೋರ್ಟ್ ಪ್ರಮೋಶನ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಕಿರೀಟ್ ಭನ್ಸಾಲಿ, ಸಂಚಾಲಕ ನೀರವ್ ಭನ್ಸಾಲಿ, ದಕ್ಷಿಣ ಭಾರತದ ಅಧ್ಯಕ್ಷ ಮಹೇಂದ್ರ ತಾಯಲ್, ಕಾರ್ಯಕಾರಿ ನಿರ್ದೇಶಕ ಸವ್ಯಸಾಚಿ ರಾಯ್, ಚೇತನ್ ಮೆಹತಾ, ಶ್ರೀಕಾಂತ್ ಕಾರಿ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಆಭರಣೋದ್ಯಮಿಗಳಾದ ಬಿ.ಎ.ರಮೇಶ್, ಎ.ಬಿ.ಎಸ್.ಸಂಜಯ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X