Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ...

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಅಸ್ತು; 3-4 ತಿಂಗಳಲ್ಲಿ ಹೊಸ ರೈಲು ಸೇವೆಗೆ ಪ್ರಯತ್ನ : ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ3 Dec 2025 8:03 PM IST
share
ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಅಸ್ತು; 3-4 ತಿಂಗಳಲ್ಲಿ ಹೊಸ ರೈಲು ಸೇವೆಗೆ ಪ್ರಯತ್ನ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ರಾಜಧಾನಿ ಬೆಂಗಳೂರು ಮತ್ತು ವಿಜಯಪುರ ನಡುವೆ ಹುಬ್ಬಳ್ಳಿ ಹಾಗೂ ಗದಗ ಬೈಪಾಸ್ ಮಾರ್ಗಗಳಲ್ಲಿ ರೈಲು ಓಡಿಸಲು ಯಾವುದೇ ತೊಂದರೆ ಇಲ್ಲ. ಆದರೆ ಈಗ ಚಾಲ್ತಿಯಲ್ಲಿರುವ ರೈಲು ಮಾರ್ಗವನ್ನು ಬದಲಿಸಲು ಸಾಧ್ಯವಿಲ್ಲ. ಇದಕ್ಕಾಗಿ ರೈಲ್ವೆ ಮಂಡಳಿಯಿಂದ ಹೊಸ ರೈಲುಗಳನ್ನು ಮಂಜೂರು ಮಾಡಿಸಿಕೊಳ್ಳಬೇಕಿದೆ. ಹೀಗಾಗಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ವಿ.ಸೋಮಣ್ಣ ಅವರಿಗೆ ಪತ್ರ ಬರೆಯಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಬುಧವಾರ ಇಲ್ಲಿನ ಖನಿಜ ಭವನದಲ್ಲಿ ರಾಜ್ಯದ ವಿವಿಧ ವೆಚ್ಚ ಹಂಚಿಕೆ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾತನಾಡಿದ ಅವರು, `ವಿಜಯಪುರ-ಬೆಂಗಳೂರು ನಡುವೆ ಈಗ ರೈಲು ಪ್ರಯಾಣಕ್ಕೆ 15 ಗಂಟೆ ಬೇಕಾಗುತ್ತಿದೆ. ಇದನ್ನು 10 ಗಂಟೆಗಳಿಗೆ ಇಳಿಸಲು ಪ್ರಯತ್ನಗಳು ನಡೆಯುತ್ತಿದ್ದು, ಈಗಾಗಲೇ ಹಲವು ಸಭೆಗಳನ್ನು ನಡೆಸಲಾಗಿದೆ.

ಈಗ ರೈಲ್ವೇ ಅಧಿಕಾರಿಗಳು ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮಾರ್ಗಗಳ ಮೂಲಕ ರೈಲು ಓಡಿಸಲು ಅಭ್ಯಂತರವಿಲ್ಲ ಎಂದಿದ್ದಾರೆ. ಇದು ಸಕಾರಾತ್ಮಕ ಬೆಳವಣಿಗೆಯಾಗಿದೆ. ಬೆಂಗಳೂರಿನಿಂದ ಹುಬ್ಬಳ್ಳಿಯವರೆಗೆ ನಿಯಮಿತ ನಿಲುಗಡೆಗಳನ್ನು ಮಾತ್ರ ಕೊಟ್ಟು, ಅಲ್ಲಿಂದ ಮುಂದಕ್ಕೆ ವಿಜಯಪುರದ ವರೆಗೆ ಸ್ಥಳೀಯ ಜನರಿಗೆ ಅನುಕೂಲವಾಗುವಂತೆ ರೈಲು ಸೇವೆ ಆರಂಭಿಸಿದರೆ ಹೆಚ್ಚು ಪರಿಣಾಮಕಾರಿ ಆಗಲಿದೆ ಎಂಬುದನ್ನು ರೈಲ್ವೆ ಅಧಿಕಾರಿಗಳಿಗೆ ಮನದಟ್ಟು ಮಾಡಿಕೊಡಲಾಗುವುದು ಎಂದರು.

ಪ್ರಸ್ತುತ ಬೆಂಗಳೂರು-ವಿಜಯಪುರ ರೈಲು ಹುಬ್ಬಳ್ಳಿ ಮತ್ತು ಗದಗ ರೈಲು ನಿಲ್ದಾಣಗಳಲ್ಲಿ ಇಂಜಿನ್ ಬದಲಿಸಿಕೊಂಡು ಚಲಿಸಬೇಕಾಗಿದೆ. ಇದರಿಂದ ಪ್ರಯಾಣ ಅವಧಿ ಜಾಸ್ತಿ ಆಗುತ್ತಿದೆ. ಹೀಗಾಗಿ ಈ ಎರಡೂ ಬೈಪಾಸ್ ಗಳ ಮೂಲಕ ರೈಲು ಓಡಿಸುವಂತಾದರೆ ಪ್ರಯಾಣ ಅವಧಿ ಕಡಿಮೆ ಆಗಲಿದೆ ಎಂದು ಅವರು ವಿವರಿಸಿದರು.

ಸದ್ಯಕ್ಕೆ ಈ ಮಾರ್ಗದ ವಂಡಾಲ ಮತ್ತು ಆಲಮಟ್ಟಿ ನಡುವೆ ಜೋಡಿ ಹಳಿ ಕಾಮಗಾರಿ ಮಾತ್ರ ಬಾಕಿ ಇದೆ. ಇದು 2026ರ ಫೆಬ್ರವರಿಯಲ್ಲಿ ಮುಗಿಯಲಿದೆ. ಈ ಭಾಗದಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಅರ್ಧ ಕಿ.ಮೀ. ಉದ್ದದ ಬೃಹತ್ ಉಕ್ಕು ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಮಾರ್ಚ್ ವೇಳೆಗೆ ವಿದ್ಯುದ್ದೀಕರಣದ ಜೋಡಿ ಮಾರ್ಗದ ನಿರ್ಮಾಣ ಕಾಮಗಾರಿ ಮುಗಿಯಲಿದೆ. ಆ ಬಳಿಕ ಹಾಲಿ ರೈಲುಗಳ ವೇಗ ಹೆಚ್ಚಾಗಲಿದೆ.

ಜತೆಗೆ ಹೊಸ ರೈಲುಗಳಿಗೂ ಬೇಡಿಕೆ ಸಲ್ಲಿಸಲಾಗುವುದು. ಬೆಂಗಳೂರು-ವಿಜಯಪುರ ನಡುವೆ ವಂದೇ ಭಾರತ್ ರೈಲು ಸೇವೆ ಆರಂಭಿಸಬೇಕೆಂದೂ ನಾವು ಆಗ್ರಹಿಸುತ್ತಿದ್ದೇವೆ. ಆದರೆ ಅದು ಕಾರ್ಯಸಾಧುವಲ್ಲ, ಬದಲಿಗೆ ವಂದೇ ಭಾರತ್ ಸ್ಪೀಪರ್ ಕೋಚ್ ಸೇವೆ ಆರಂಭಿಸಬಹುದು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ. ಆ ಪ್ರಕಾರ ಇಬ್ಬರೂ ರೈಲ್ವೆ ಸಚಿವರಿಗೆ ಪತ್ರ ಬರೆಯಲಾಗುವುದು. ಸೋಮಣ್ಣ ಜತೆಗೂ ಸಭೆ ಮಾಡಿ ಮನವಿ ಮಾಡಲಾಗುವುದು ಎಂದು ಅವರು ವಿವರಿಸಿದರು.

ತುಮಕೂರು-ಊರುಕೆರೆ ರೈಲು ಆರಂಭ: ತುಮಕೂರು-ರಾಯದುರ್ಗ ನಡುವೆ ರೈಲು ಹಳಿ ಜೋಡಣೆ ನಡೆಯುತ್ತಿದೆ. ಇಲ್ಲಿ ತುಮಕೂರು-ಊರುಕೆರೆ ಮತ್ತು ದೊಡ್ಡಹಳ್ಳಿ-ಪಾವಗಡ ನಡುವೆ ಈ ವರ್ಷ 27 ಕಿ.ಮೀ. ಕಾಮಗಾರಿ ಮುಗಿಯಲಿದೆ. ತುಮಕೂರು-ಊರುಕೆರೆ ನಡುವೆ (10 ಕಿ.ಮೀ) ನೂರಾರು ಕೈಗಾರಿಕೆಗಳಿದ್ದು, ದಿನವೂ ಸಾವಿರಾರು ಜನ ಇಲ್ಲಿ ಓಡಾಡುತ್ತಾರೆ.

ಇನ್ನೊಂದು ಬದಿಯಲ್ಲಿ ದೊಡ್ಡಹಳ್ಳಿ-ಪಾವಗಡ ನಡುವೆಯೂ (20 ಕಿ.ಮೀ) 2026ರ ಜನವರಿಯಿಂದ ರೈಲು ಓಡಿಸಲಾಗುವುದು. ಮಡಕಶಿರಾ-ಪಾವಗಡ ನಡುವಿನ ಕಾಮಗಾರಿ 2026ರ ಡಿಸೆಂಬರ್ ಹೊತ್ತಿಗೆ, ಮಧುಗಿರಿ-ಪಾವಗಡ ಮಧ್ಯದ ಹಳಿ ಜೋಡಣೆ 2028ರ ಫೆಬ್ರವರಿ ವೇಳೆಗೆ ಮುಗಿಯಲಿದೆ ಎಂದು ಅವರು ನುಡಿದರು.

ತುಮಕೂರು-ಚಿತ್ರದುರ್ಗ-ದಾವಣಗೆರೆ ಮಾರ್ಗದಲ್ಲಿ ಊರುಕೆರೆ-ತಿಮ್ಮರಾಯನಹಳ್ಳಿ ನಡುವೆ 13 ಕಿ.ಮೀ. ಹಳಿ ಜೋಡಣೆ ಈ ತಿಂಗಳೇ ಮುಗಿಯಲಿದೆ. ಭರಮಸಾಗರ-ಹೆಬ್ಬಾಳು, ಹೆಬ್ಬಾಳು-ತೋಳಹುಣಸೆ ನಡುವೆ 2026ರ ಫೆಬ್ರವರಿ ಕೊನೆಯ ವೇಳೆಗೆ ಹಳಿ ಜೋಡಣೆ ಆಗಲಿದೆ. ಬೆಂಗಳೂರು-ತುಮಕೂರು ಮತ್ತು ಬೆಂಗಳೂರು-ಮೈಸೂರು ನಡುವೆ ಈಗ ಜೋಡಿ ಹಳಿ ಇದೆ.

ಇದನ್ನು ನಾಲ್ಕು ಹಳಿಗಳ ಮಾರ್ಗವಾಗಿ ಮಾಡುವ ಬಗ್ಗೆ ಕಾರ್ಯಸಾಧ್ಯತಾ ವರದಿ ನೀಡುವಂತೆ ಹೇಳಲಾಗಿತ್ತು. ಈ ಸಂಬಂಧದ ವರದಿಗಳು ಕ್ರಮವಾಗಿ ಈ ತಿಂಗಳ 25ರಂದು ಮತ್ತು 2026ರ ಮೇ ತಿಂಗಳಲ್ಲಿ ಕೈ ಸೇರಲಿವೆ. ಪ್ರಾಥಮಿಕ ಮೂಲಗಳ ಪ್ರಕಾರ, ಈ ಚತುಷ್ಪಥ ಮಾರ್ಗ ಲಾಭದಾಯಕ ವಾಗಲಿದ್ದು, ಇದರಿಂದ ಸ್ಥಳೀಯ ಜನರಿಗೆ ಹೆಚ್ಚಿನ ಅನುಕೂಲ ಆಗಲಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ಬೆಂಗಳೂರು-ಹಾಸನ-ಮಂಗಳೂರು ದ್ವಿಪಥ: ಬೆಂಗಳೂರು-ಹಾಸನ-ಮಂಗಳೂರು ಮಾರ್ಗವನ್ನು ಜೋಡಿ ಹಳಿಗೇರಿಸುವ ಬಗ್ಗೆಯೂ ಚರ್ಚಿಸಲಾಗಿದೆ. ಹಾಸನ-ಮಂಗಳೂರು ನಡುವೆ ಸ್ವಲ್ಪ ಸವಾಲಿದೆ. ಇಲ್ಲಿ ರಸ್ತೆ ಮತ್ತು ರೈಲು ಎರಡನ್ನೂ ಸಮಾನಾಂತರವಾಗಿ ಅಭಿವೃದ್ಧಿಪಡಿಸುವ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ. ಚಿತ್ರದುರ್ಗ-ಆಲಮಟ್ಟಿ ಹಾಗೂ ಯಾದಗಿರಿ-ಆಲಮಟ್ಟಿ ಹೊಸ ಮಾರ್ಗ, ಕೂಡ್ಗಿ ಮಾರ್ಗಗಳ ಯೋಜನಾ ಪ್ರಗತಿ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಪಾಟೀಲ್ ಮಾಹಿತಿ ನಿಲ್ದರು.

ಕರಾವಳಿಗೆ ಸಂಪರ್ಕ ಕಲ್ಪಿಸುವ ಹುಬ್ಬಳ್ಳಿ-ಅಂಕೋಲಾ ಯೋಜನೆಯಿಂದ ವನ್ಯಜೀವಿಗಳ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎನ್ನುವುದರ ಬಗ್ಗೆ ಡೆಹ್ರಾಡೂನ್‍ನ ವನ್ಯಜೀವಿ ಸಂಸ್ಥೆ ಅಧ್ಯಯನ ನಡೆಸುತ್ತಿದ್ದು, 2026ರ ಜೂನ್‍ಗೆ ವರದಿ ಬರಲಿದೆ. ಅದರ ಬಳಿಕ ಯೋಜನೆ ಆರಂಭವಾಗುವ ವಿಶ್ವಾಸ ಇದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಎನ್.ಮಂಜುಳಾ, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ, ನೈರುತ್ಯ ರೈಲ್ವೆ ಮುಖ್ಯ ಆಡಳಿತಾಧಿಕಾರಿ ಅಜಯ್ ಸಿಂಗ್ ಉಪಸ್ಥಿತರಿದ್ದರು. ನೈರುತ್ಯ ರೈಲ್ವೆ ಉಪ ಮುಖ್ಯ ಎಂಜಿನಿಯರ್ ಶಾಸ್ತ್ರಿ ಅವರು ವಿಡಿಯೊ ಸಂವಾದದ ಮೂಲಕ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X