Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ...

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ, ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಕಾರ್ಯಾರಂಭ : ಚಾಲನೆ ನೀಡಿದ ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ31 July 2026 9:32 PM IST
share
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ, ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಕಾರ್ಯಾರಂಭ :  ಚಾಲನೆ ನೀಡಿದ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ಆಸ್ಟ್ರೇಲಿಯಾದ ಸುಸಜ್ಜಿತ ಕಾನ್ಸುಲೇಟ್ ಜನರಲ್ ಕಚೇರಿ ಮತ್ತು ಆ ರಾಷ್ಟ್ರದ ಪ್ರತಿಷ್ಠಿತ ವಿಶ್ವ ವಿದ್ಯಾನಿಲಯಗಳಲ್ಲಿ ಒಂದಾಗಿರುವ ನ್ಯೂಸೌತ್ ವೇಲ್ಸ್ ವಿಶ್ವ ವಿದ್ಯಾನಿಲಯದ ಬೆಂಗಳೂರು ಕ್ಯಾಂಪಸ್ ಎರಡಕ್ಕೂ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಶುಕ್ರವಾರ ಇಲ್ಲಿ ಚಾಲನೆ ನೀಡಿದರು.

ಕ್ಯಾಂಪಸ್ ಉದ್ಘಾಟನೆ ನಂತರ ಮಾತನಾಡಿದ ಎಂ.ಬಿ.ಪಾಟೀಲ್, `ನ್ಯೂಸೌತ್ ವೇಲ್ಸ್ ವಿವಿಯು ಜಗತ್ತಿನಲ್ಲಿ ಅಗ್ರಸ್ಥಾನದಲ್ಲಿರುವ 20 ವಿವಿಗಳಲ್ಲಿ ಒಂದಾಗಿದ್ದು, ಆಸ್ಟ್ರೇಲಿಯಾದ ಅಗ್ರಮಾನ್ಯ ವಿ.ವಿ.ಯೂ ಆಗಿದೆ. ಇದರ ಬೆಂಗಳೂರು ಕ್ಯಾಂಪಸ್ ಹೆಬ್ಬಾಳದ ಸಮೀಪದಲ್ಲಿರುವ ಮಾನ್ಯತಾ ಟೆಕ್ ಪಾರ್ಕಿನಲ್ಲಿ ಇರಲಿದೆ. ರಾಜ್ಯದ ಯುವಜನರು ಮನೆಯ ಹತ್ತಿರದಲ್ಲೇ ಜಾಗತಿಕ ಗುಣಮಟ್ಟದ ಶಿಕ್ಷಣ ಪಡೆಯಲು ಈ ಕ್ಯಾಂಪಸ್ ಇನ್ನು ಮುಂದೆ ಲಭ್ಯವಾಗಲಿದೆ. ಇದು ರಾಜ್ಯದಲ್ಲಿ ಕ್ಯಾಂಪಸ್ ತೆರೆಯುತ್ತಿರುವ 6ನೇ ವಿದೇಶಿ ವಿ.ವಿ.ಆಗಿದೆ’ ಎಂದು ಹೇಳಿದರು.

ನ್ಯೂಸೌತ್ ವೇಲ್ಸ್ ವಿ.ವಿ.ಯು ಆಸ್ಟ್ರೇಲಿಯಾದಲ್ಲಿ ತಾನು ಅನುಸರಿಸುವ ಪಠ್ಯಕ್ರಮ ಮತ್ತು ಬೋಧನಾ ವಿಧಾನವನ್ನೇ ಇಲ್ಲೂ ಅಳವಡಿಸಿಕೊಳ್ಳಲಿದೆ. ಸದ್ಯಕ್ಕೆ ಬಿಝಿನೆಸ್, ಕಂಪ್ಯೂಟರ್ ಸೈನ್ಸ್, ಡೇಟಾ ಸೈನ್ಸ್ ಮತ್ತು ಡಿಸಿಷನ್ಸ್ ವಿಷಯಗಳಲ್ಲಿ ಪದವಿ ಹಾಗೂ ಒಂದು ವರ್ಷ ಅವಧಿಯ ಸೈಬರ್ ಸೆಕ್ಯುರಿಟಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಕೋರ್ಸುಗಳನ್ನು ಆರಂಭಿಸುತ್ತಿದೆ. ಪ್ರತಿಯೊಂದು ಕೋರ್ಸಿನಲ್ಲೂ ತಲಾ 30 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಇರಲಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಈಗಾಗಲೇ ಲಿವರ್ಪೂಲ್, ಲ್ಯಾಂಕಾಸ್ಟರ್, ಲಾ ಟ್ರೋಬ್, ಫ್ಲಿಂಡರ್ಸ್ ಮತ್ತು ಲಂಡನ್ನಿನ ಇಂಪೀರಿಯಲ್ ಕಾಲೇಜ್ ವಿ.ವಿ.ಗಳು ತಮ್ಮ ಕ್ಯಾಂಪಸ್ ತೆರೆದಿವೆ. ಮುಂದಿನ ದಿನಗಳಲ್ಲಿ ಮತ್ತೊಂದಿಷ್ಟು ಜಾಗತಿಕ ಮಟ್ಟದ ವಿ.ವಿ.ಗಳು ನಮ್ಮಲ್ಲಿ ತಮ್ಮ ಕ್ಯಾಂಪಸ್ ತೆಗೆಯಲಿವೆ. ನಮ್ಮಲ್ಲಿರುವ ವಿಶ್ವ ದರ್ಜೆಯ ಸಂಶೋಧನಾ ಸಂಸ್ಥೆಗಳು, ಕೈಗಾರಿಕೋದ್ಯಮಗಳು ಮತ್ತು ನವೋದ್ಯಮ ಕಾರ್ಯಪರಿಸರಗಳು ಇದಕ್ಕೆ ಹೇಳಿ ಮಾಡಿಸಿದಂತಿವೆ ಎಂದು ಅವರು ವಿವರಿಸಿದರು.

ಕಾನ್ಸುಲೇಟ್ ಜನರಲ್ ಕಚೇರಿ: ಇದಕ್ಕೂ ಮೊದಲು ಸಚಿವ ಎಂ.ಬಿ.ಪಾಟೀಲ್, ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಆಸ್ಟ್ರೇಲಿಯಾದ ಕಾನ್ಸುಲೇಟ್ ಜನರಲ್ ಕಚೇರಿಯನ್ನು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಆಸ್ಟ್ರೇಲಿಯಾವು ತನ್ನ ಕಾನ್ಸುಲೇಟ್ ಜನರಲ್ ಕಚೇರಿಗೆ ಬೆಂಗಳೂರನ್ನು ಆಯ್ಕೆ ಮಾಡಿಕೊಂಡಿದ್ದು ಶ್ಲಾಘನೀಯ. ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ 40ಕ್ಕೂ ಹೆಚ್ಚು ಕಂಪೆನಿಗಳು ನೆಲೆಯೂರಿವೆ. ಆ ದೇಶವು ನಮ್ಮಲ್ಲಿ ನಡೆದುಕೊಂಡು ಬರುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶ, ಬೆಂಗಳೂರು ತಂತ್ರಜ್ಞಾನ ಶೃಂಗಸಭೆ, ಸ್ಪೇಸ್-ಎಕ್ಸ್ಪೋ ಮುಂತಾದವುಗಳಲ್ಲಿ ಪಾಲ್ಗೊಳ್ಳುತ್ತ ಬರುತ್ತಿದೆ. ಅಲ್ಲಿನ ಕ್ವೀನ್ಸ್‌ ಲ್ಯಾಂಡ್ ಮತ್ತು ವಿಕ್ಟೋರಿಯಾ ಪ್ರಾಂತ್ಯಗಳು ಬೆಂಗಳೂರಿನಲ್ಲೇ ತಮ್ಮ ವಾಣಿಜ್ಯ ವಹಿವಾಟು ಕಚೇರಿಗಳನ್ನು ಹೊಂದಿವೆ ಎಂದು ಹೇಳಿದರು.

ಕಾನ್ಸುಲೇಟ್ ಜನರಲ್ ಕಚೇರಿ ಆರಂಭದಿಂದ ನಮ್ಮ ದ್ವಿಪಕ್ಷೀಯ ಬಾಂಧವ್ಯವು ದೀರ್ಘಕಾಲೀನ ದೃಷ್ಟಿಕೋನದೊಂದಿಗೆ ಮುಂದುವರಿಯಲಿದೆ. ನಾವು ಅತ್ತ ಕಡೆಯಿಂದ ಹೂಡಿಕೆ, ಸಂಸ್ಥೆಗಳು ಮತ್ತು ನಾವೀನ್ಯತೆಯನ್ನು ನಮ್ಮಲ್ಲಿಗೆ ಬರುವುದನ್ನು ಎದುರು ನೋಡುತ್ತಿದ್ದೇವೆ ಎಂದು ಪಾಟೀಲ್ ಭರವಸೆ ವ್ಯಕ್ತಪಡಿಸಿದರು.

ಎರಡೂ ಕಾರ್ಯಕ್ರಮಗಳಲ್ಲಿ ಆಸ್ಟ್ರೇಲಿಯಾದ ಅಂತಾರಾಷ್ಟ್ರೀಯ ಶಿಕ್ಷಣ ಸಚಿವರಾದ ಜೂಲಿಯನ್ ಹಿಲ್, ಭಾರತದಲ್ಲಿರುವ ಆಸ್ಟ್ರೇಲಿಯನ್ ಹೈಕಮಿಷನರ್ ಫಿಲಿಫ್ ಗ್ರೀನ್, ಕೈಗಾರಿಕಾ ಇಲಾಖೆ ಆಯುಕ್ತೆ ಖುಷ್ಬು ಗೋಯಲ್, ಬೆಂಗಳೂರಿನಲ್ಲಿರುವ ಕಾನ್ಸುಲ್ ಜನರಲ್ ಹಿಲರಿ ಮೆಗಿಚಿ, ನ್ಯೂಸೌತ್ ವೇಲ್ಸ್ ವಿವಿ ಕುಲಪತಿ ಪ್ರೊ.ಆ್ಯಟಿಲಾ ಬ್ರಂಗ್ಸ್ ಭಾಗವಹಿಸಿದ್ದರು.

Tags

M.B.Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X