Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 1,616 ಸ್ಥಳಗಳಲ್ಲಿ 22ಸಾವಿರ ಟನ್...

1,616 ಸ್ಥಳಗಳಲ್ಲಿ 22ಸಾವಿರ ಟನ್ ಪಾರಂಪರಿಕ ತ್ಯಾಜ್ಯ ಗುರುತು : ಸಚಿವ ಕೃಷ್ಣಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ1 Aug 2026 9:29 PM IST
share
1,616 ಸ್ಥಳಗಳಲ್ಲಿ 22ಸಾವಿರ ಟನ್ ಪಾರಂಪರಿಕ ತ್ಯಾಜ್ಯ ಗುರುತು : ಸಚಿವ ಕೃಷ್ಣಬೈರೇಗೌಡ
‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಪ್ರಾಥಮಿಕ ಸಮೀಕ್ಷೆ ಪ್ರಕಾರ ಪ್ರಸ್ತುತ 1,616 ಸ್ಥಳಗಳಲ್ಲಿ ಸುಮಾರು 22ಸಾವಿರ ಟನ್ ಪಾರಂಪರಿಕ ತ್ಯಾಜ್ಯವನ್ನು ಗುರುತಿಸಲಾಗಿದೆ. ನಗರದಾದ್ಯಂತ ಒಟ್ಟು 1 ಲಕ್ಷ ಟನ್‍ಗಿಂತ ಹೆಚ್ಚು ತ್ಯಾಜ್ಯ ಇರಬಹುದೆಂದು ಅಂದಾಜಿಸಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಶನಿವಾರ ನಗರದ ಹೆಬ್ಬಾಳ ಜಂಕ್ಷನ್ ಬಳಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಸ್ವಚ್ಛತಾ ಅಭಿಯಾನದ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರದಾದ್ಯಂತ 2000ಕ್ಕೂ ಹೆಚ್ಚು ಕಡೆ ಈ ತ್ಯಾಜ್ಯಗಳ ಬ್ಲಾಕ್‍ಸ್ಪಾಟ್‍ಗಳಿವೆ. ರಸ್ತೆ ಬದಿ, ಪಾದಚಾರಿ ಮಾರ್ಗ, ಸಾರ್ವಜನಿಕ ಸ್ಥಳಗಳು, ಖಾಲಿ ನಿವೇಶನಗಳು ಮಾತ್ರವಲ್ಲದೆ ವಿವಿಧ ಇಲಾಖೆಗಳ ಖಾಲಿ ಜಾಗಗಳಲ್ಲಿಯೂ ಪಾರಂಪರಿಕ ತ್ಯಾಜ್ಯ ಸಂಗ್ರಹವಾಗಿದ್ದು, ಇದರಿಂದ ಸಂಚಾರಕ್ಕೂ ಅಡಚಣೆ ಉಂಟಾಗಿದೆ ಎಂದರು.

ಜಿಬಿಎ, ಐದು ನಗರ ಪಾಲಿಕೆಗಳು, ರೈಲ್ವೆ, ಬಿಡಿಎ, ಜಲಮಂಡಳಿ, ಬೆಸ್ಕಾಂ, ಕೆ-ರೈಡ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಪಾರಂಪರಿಕ ತ್ಯಾಜ್ಯ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. ಬೃಹತ್ ತ್ಯಾಜ್ಯ ತೆರವು ಕಾರ್ಯಕ್ಕಾಗಿ ಸುಮಾರು 100 ವಾಹನಗಳನ್ನು ನಿಯೋಜಿಸಲಾಗುತ್ತಿದೆ. ಅಭಿಯಾನದಡಿ ಸ್ವಚ್ಛಗೊಳಿಸಲಾದ ಸ್ಥಳಗಳಲ್ಲಿ ಮತ್ತೆ ತ್ಯಾಜ್ಯ ಸುರಿಯದಂತೆ ನಿಗಾ ವಹಿಸಲಾಗುವುದು ಎಂದು ಕೃಷ್ಣ ಬೈರೇಗೌಡ ಹೇಳಿದರು.

ನಗರದಲ್ಲಿ ಕಟ್ಟಡ ಭಗ್ನಾವಶೇಷಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲು ಅಧಿಕೃತ ಸಂಸ್ಥೆಯನ್ನು ನಿಯೋಜಿಸಲಾಗಿದೆ. ಪ್ರತಿ ಟನ್‍ಗೆ 760 ರೂ. ದರ ನಿಗದಿಪಡಿಸಲಾಗಿದ್ದು, ಇನ್ನು ಮುಂದೆ ಕಟ್ಟಡ ತ್ಯಾಜ್ಯವನ್ನು ನೋಂದಾಯಿತ ಸಂಸ್ಥೆಗಳಿಗೆ ಮಾತ್ರ ನೀಡಬೇಕು. ಸಂಬಂಧಿಸಿದ ಸಂಸ್ಥೆಗಳ ಸಂಪರ್ಕ ವಿವರಗಳನ್ನು ಸಹ ಸಾರ್ವಜನಿಕರಿಗೆ ಒದಗಿಸಲಾಗುವುದು ಎಂದು ಕೃಷ್ಣ ಬೈರೇಗೌಡ ಹೇಳಿದರು.

ನಗರ ಪಾಲಿಕೆಗಳು ನಿಗದಿಪಡಿಸಿರುವ ಸ್ಥಳಗಳಲ್ಲಿಯೇ ತ್ಯಾಜ್ಯವನ್ನು ವಿಲೇವಾರಿ ಮಾಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ತ್ಯಾಜ್ಯ ಬಿದ್ದಿರುವ ಸ್ಥಳಗಳಲ್ಲಿ ಮತ್ತಷ್ಟು ಕಸವನ್ನು ಎಸೆಯುವ ಪ್ರವೃತ್ತಿ ಹೆಚ್ಚಾಗಿ ನಗರದ ಸೌಂದರ್ಯಕ್ಕೂ ಧಕ್ಕೆ ಉಂಟಾಗುತ್ತಿದೆ. ನಗರದಲ್ಲಿರುವ ಅನೇಕ ಖಾಲಿ ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳದೇ ಮಣ್ಣು, ತ್ಯಾಜ್ಯ ಹಾಗೂ ಕಳೆ-ಗಿಡಗಳು ಬೆಳೆದು ಸುತ್ತಮುತ್ತಲಿನ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಈ ಕುರಿತು ನಾಗರಿಕರಿಂದ ನೂರಾರು ದೂರುಗಳು ಬಂದಿವೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಖಾಲಿ ನಿವೇಶನಗಳ ಮಾಲಕರು ಆಗಸ್ಟ್ 15ರೊಳಗೆ ತಮ್ಮ ನಿವೇಶನಗಳನ್ನು ಸ್ವಯಂ ಸ್ವಚ್ಛಗೊಳಿಸಬೇಕು. ಸ್ವಚ್ಛತಾ ಕಾರ್ಯ ನಡೆಸುವ ಸಂಸ್ಥೆಗಳು ಹಾಗೂ ಗುತ್ತಿಗೆದಾರರ ಸಂಪರ್ಕ ವಿವರಗಳನ್ನು ಆಯಾ ನಗರ ಪಾಲಿಕೆಗಳಲ್ಲಿ ಲಭ್ಯವಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆಗಸ್ಟ್ 15ರ ನಂತರವೂ ಸ್ವಚ್ಛಗೊಳಿಸದ ನಿವೇಶನಗಳನ್ನು ಸಂಬಂಧಿಸಿದ ನಗರ ಪಾಲಿಕೆ ಸ್ವಚ್ಛಗೊಳಿಸಿ, ಅದಕ್ಕೆ ತಗಲುವ ವೆಚ್ಚವನ್ನು ಆಸ್ತಿ ತೆರಿಗೆಯೊಂದಿಗೆ ವಸೂಲಿ ಮಾಡಲಾಗುವುದು ಎಂದು ಕೃಷ್ಣ ಬೈರೇಗೌಡ ಹೇಳಿದರು.

Tags

Minister Krishna Byre Gowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X