Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Monsoon session | ಸುಗಮ ಕಲಾಪಕ್ಕಾಗಿ...

Monsoon session | ಸುಗಮ ಕಲಾಪಕ್ಕಾಗಿ ವಿಪಕ್ಷಗಳ ಸಹಕಾರ ಕೋರಿದ ಮುಖ್ಯಮಂತ್ರಿ

ವಾರ್ತಾಭಾರತಿವಾರ್ತಾಭಾರತಿ13 Aug 2026 7:09 PM IST
share
Monsoon session | ಸುಗಮ ಕಲಾಪಕ್ಕಾಗಿ ವಿಪಕ್ಷಗಳ ಸಹಕಾರ ಕೋರಿದ ಮುಖ್ಯಮಂತ್ರಿ


ಬೆಂಗಳೂರು : ವಿಧಾನ ಮಂಡಲದ ಅಧಿವೇಶನದ ಮೊದಲ ದಿನವಾದ ಗುರುವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿರೋಧ ಪಕ್ಷದ ಸದಸ್ಯರ ಬಳಿ ತೆರಳಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು, ‘ಕಲಾಪವನ್ನು ಸುಗಮವಾಗಿ ನಡೆಯಲು ತಮ್ಮೆಲ್ಲರ ಸಹಕಾರ ಅಗತ್ಯ’ ಎಂದು ಕೋರಿದರು.

ಕಲಾಪ ಆರಂಭಕ್ಕೂ ಮುನ್ನ ಸಭಾಂಗಣದಲ್ಲಿ ಕರೆಗಂಟೆ ಮೊಳಗುತ್ತಿದ್ದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ಆಸನಗಳ ಬಳಿ ತೆರಳಿ ಉಭಯ ಕುಶಲೋಪರಿ ವಿಚಾರಿಸಿದರು. ವಿರೋಧ ಪಕ್ಷದ ಹಲವು ಸದಸ್ಯರೊಂದಿಗೆ ಕೆಲಕಾಲ ಮಾತುಕತೆ ನಡೆಸಿ, ಅಧಿವೇಶನವನ್ನು ಸೌಹಾರ್ದಯುತವಾಗಿ ನಡೆಸಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ವಿರೋಧ ಪಕ್ಷದ ಸದಸ್ಯರ ಜೊತೆ ಮುಖ್ಯಮಂತ್ರಿ ಚರ್ಚೆ ನಡೆಸುತ್ತಿದ್ದ ನಡುವೆ ಕರೆಗಂಟೆ ನಿಂತು, ಕಲಾಪ ಅಧಿಕೃತವಾಗಿ ಆರಂಭವಾಗಿ ವಂದೇ ಮಾತರಂ ಗಾಯನ ಪೂರ್ಣಗೊಂಡ ಬಳಿಕ ಮತ್ತೆ ವಿರೋಧ ಪಕ್ಷದ ಸಾಲಿನತ್ತ ಬಂದ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಹಸ್ತ ಲಾಘವ ನೀಡಿ ಶುಭಾಶಯ ವಿನಿಮಯ ಮಾಡಿಕೊಂಡರು.

ಮುಖ್ಯಮಂತ್ರಿಯಾಗಿ ಮೊದಲ ಅಧಿವೇಶನವನ್ನು ಎದುರಿಸುತ್ತಿರುವ ಡಿ.ಕೆ.ಶಿವಕುಮಾರ್ ಅವರು ಆಡಳಿತ ಪಕ್ಷದ ಮೊಗಸಾಲೆಯಿಂದ ಸದನದ ಸಭಾಂಗಣ ಪ್ರವೇಶಿಸುವ ಮುನ್ನ ಸಭಾಂಗಣದ ಬಾಗಿಲಿಗೆ ದೀರ್ಘದಂಡ ನಮಸ್ಕಾರವನ್ನು ಹಾಕಿದರು. ಸಭಾಂಗಣದ ಒಳಗೆ ತಮ್ಮ ಕುರ್ಚಿಯಲ್ಲಿ ಆಸನರಾಗುವ ಮುನ್ನ ಮತ್ತೆ ಮುಂದಿನ ಮೇಜಿಗೆ ಹಣೆ ಮುಟ್ಟಿ ಡಿ.ಕೆ.ಶಿವಕುಮಾರ್ ನಮಸ್ಕರಿಸಿದ್ದು ವಿಶೇಷವಾಗಿತ್ತು.

ಅದೇ ರೀತಿ ಸಚಿವರಾದ ಕೃಷ್ಣ ಭೈರೇಗೌಡ, ಬಸವರಾಜ ರಾಯರೆಡ್ಡಿ, ಲಕ್ಷ್ಮಣ್ ಸವದಿ ಸೇರಿದಂತೆ ಹಲವು ಸಚಿವರು ವಿರೋಧ ಪಕ್ಷದ ಸದಸ್ಯರ ಸಾಲಿಗೆ ತೆರಳಿ ಮಾತುಕತೆ ನಡೆಸಿದ ದೃಶ್ಯ ಕಂಡುಬಂತು.

Tags

Monsoon session
share
ವಾರ್ತಾಭಾರತಿ
ವಾರ್ತಾಭಾರತಿ
Next Story
X