Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Mysuru | ಸಹಬಾಳ್ವೆ, ಸಮಾನತೆ,...

Mysuru | ಸಹಬಾಳ್ವೆ, ಸಮಾನತೆ, ಸೌಹಾರ್ದಕ್ಕಾಗಿ ನಡಿಗೆ

ವಾರ್ತಾಭಾರತಿವಾರ್ತಾಭಾರತಿ31 Jan 2026 12:31 AM IST
share
Mysuru | ಸಹಬಾಳ್ವೆ, ಸಮಾನತೆ, ಸೌಹಾರ್ದಕ್ಕಾಗಿ ನಡಿಗೆ

ಮೈಸೂರು : ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹುತಾತ್ಮ ದಿನದ ಅಂಗವಾಗಿ ದೇಶವನ್ನು ಸರ್ವಜನಾಂಗದ ತೋಟವನ್ನಾಗಿಸಿ ಸಹಬಾಳ್ವೆ, ಸಮಾನತೆ, ಸೌಹಾರ್ದ ನಿರ್ಮಾಣದ ಆಶಯದಲ್ಲಿ ಶುಕ್ರವಾರ ಮೈಸೂರು ನಗರದಲ್ಲಿ ಸೌಹಾರ್ದ ನಡಿಗೆ ಜಾಥಾ ನಡೆಯಿತು.

ಸೌಹಾರ್ದ ಕರ್ನಾಟಕ ಮೈಸೂರು ಘಟಕದ ವತಿಯಿಂದ ಸೇಂಟ್ ಫಿಲೋಮಿನಾ ಚರ್ಚ್‌ನಿಂದ ನಡಿಗೆ ಹೊರಟು, ಆಝಾಮ್ ಮಸೀದಿ, ಅಶೋಕ ರಸ್ತೆ ಮೂಲಕ ಗಾಂಧಿ ಚೌಕದ ಗಾಂಧಿ ಪ್ರತಿಮೆ ತಲುಪಿತು. ನಡಿಗೆಯಲ್ಲಿ ಪಾಲ್ಗೊಂಡವರು ಸರ್ವಜನಾಂಗದ ಶಾಂತಿಯ ತೋಟ ನಿರ್ಮಿಸುವ ಆಶಯದ ವಿವಿಧ ಪ್ಲೇಕಾರ್ಡ್‌ಗಳನ್ನು ಹಿಡಿದು ಗಮನಸೆಳೆದರು.

ಚಿಕ್ಕಗಡಿಯಾರ ವೃತ್ತದಲ್ಲಿ ಹಿರಿಯ ರಂಗಕರ್ಮಿ ರಂಗಕರ್ಮಿ ಎನ್.ಜನಾರ್ದನ್ (ಜನ್ನಿ) ಮತ್ತು ದೇವಾನಂದ ವರ ಪ್ರಸಾದ್ ಅವರ ತಂಡದವರು ಸೌಹಾರ್ದ ಗೀತೆ ಹಾಡುಗಳನ್ನು ಪ್ರಸ್ತುತ ಪಡಿಸಿದರು.

ಸಾಹಿತಿ, ವಿಶ್ರಾಂತ ಕುಲಪತಿ ಸಬೀಹಾ ಭೂಮಿಗೌಡ ಮಾತನಾಡಿ, ನಾವೆಲ್ಲರೂ ಸೇರಿ ಪ್ರೀತಿಯ ಸ್ನೇಹದ ಸಂಬಂಧ ರಚಿಸಬೇಕು. ಇದಕ್ಕಿರುವ ಅಡ್ಡಿಗಳನ್ನು ಪ್ರಶ್ನಿಸಿ ಅದನ್ನು ಮೀರುತ್ತ ಸಾಗಬೇಕು ಎಂದು ಹೇಳಿದರು.

ಒಡನಾಡಿಯ ಸ್ಟ್ಯಾನ್ಲಿ ಮಾತನಾಡಿ, ಸತ್ಯ, ಅಹಿಂಸೆ ಉಸಿರಾಡುತ್ತ ಬ್ರಿಟಿಷರಿಂದ ಬಿಡುಗಡೆಗೊಳಿಸಿ ಬಾಪು ಹತ್ಯೆಯು ಸತ್ಯ, ಅಹಿಂಸೆ ಮತ್ತು ಕಾರುಣ್ಯದ ಮೇಲೆ ನಡೆದ ಗುಂಡಿನ ದಾಳಿಯಾಗಿದೆ. ಸಾಮರಸ್ಯದಿಂದ ಬದುಕು ಬಹಳ ಹದಗೆಟ್ಟು ದುರಿತ ದಿನದಲ್ಲಿ ಬದುಕುತ್ತಿದ್ದೇವೆ. ಧರ್ಮಗಳನ್ನು ಭ್ರಷ್ಟಗೊಳಿಸಿ ಮತಾಂಧೆ ಎದ್ದು ಕಾಣುತ್ತಿದೆ. ಸಾಂಸ್ಥಿಕ ಧರ್ಮಗಳ ಮೇಲೆ ನಂಬಿಕೆ ಹೋಗುವಂತೆ ಕೆಲವು ಕಿಡಿಗೇಡಿಗಳು ಮಾಡುತ್ತಿದ್ದಾರೆ. ಧರ್ಮ ರಾಜಕಾರಣ ಒಳಗಣ್ಣಿನಿಂದ ನೋಡುತ್ತ ಒಟ್ಟಾಗಿ ಪ್ರಶ್ನಿಸಬೇಕು ಎಂದರು.

ಹೋರಾಟಗಾರ್ತಿ ಸವಿತಾ ಮಲ್ಲೇಶ್ ಮಾತನಾಡಿದರು. ಒಡನಾಡಿ ಸೇವಾ ಸಂಸ್ಥೆಯ ನಿರ್ದೇಶಕ ಪರಶು, ಕರ್ನಾಟಕ ರಾಜ್ಯ ರೈತ ಸಂಘದ ಹೊಸಕೋಟೆ ಬಸವರಾಜು, ಪಿ.ಮರಂಕಯ್ಯ,ಪ್ರಗತಿ ಪರ ಚಿಂತಕ ಪ್ರೊ.ಕಾಳಚೆನ್ನೇಗೌಡ, ಪಂಡಿತಾರಾಧ್ಯ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಅಹಿಂದ ಜವರಪ್ಪ, ಮೈಸೂರು ವಿವಿ ಸಂಶೋಧಕರ ಸಂಘದ ಅಧ್ಯಕ್ಷ ವರಹಳ್ಳಿ ಆನಂದ, ಗೌರವಾಧ್ಯಕ್ಷ ಕಲ್ಲಳ್ಳಿ ಕುಮಾರ್, ವಕೀಲ ಪುನೀತ್, ಹಿರಿಯ ಪತ್ರಕರ್ತ ಜಿ.ಪಿ.ಬಸವರಾಜು, ಗೋಪಿನಾಥ್, ಪ್ರಭಾಕರ್, ಶ್ರೀದೇವಿ, ಲತಾ ಕೆ.ಬಿದ್ದಪ್ಪ, ಜಯರಾಂ, ಕೆ.ಬಸವರಾಜು, ಚಿರಾಗ್ ಮೂರ್ತಿ, ಹಣ್ಣಪ್ಪ, ನೂರ್ ಮರ್ಚೆಂಟ್, ಎನ್.ವಿಜಯಕುಮಾರ್, ಸುಬ್ರಹ್ಮಣ್ಯ, ಚೌಡಳ್ಳಿ ಜವರಯ್ಯ, ಶ್ರೀಧರ್, ಅಯ್ಯಪ್ಪ ಹೂಗಾರ್, ಡಿ.ಅಭಿ, ಚೇತನ್, ರಾಜೇಂದ್ರ, ನೆಲೆ ಹಿನ್ನೆಲೆ ಗೋಪಾಲ್, ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳಾದ ಕುಮಾರ್, ರಘು, ಮಂಜುನಾಥ್, ರಾಘು, ಶ್ರೀಕಂಠ, ಪ್ರಕಾಶ್, ಕೋಚನಹಳ್ಳಿ ಮಹೇಶ್, ಶಿವಣ್ಣ ನಾಯಕ, ಪ್ರೇಮ್ ರಾಜ್, ಜೆ.ರಘು ಇನ್ನಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Tags

Mysuru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X