Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕಲ್ಯಾಣ ಕರ್ನಾಟಕದ 41 ಶಾಲೆಗಳಲ್ಲಿ...

ಕಲ್ಯಾಣ ಕರ್ನಾಟಕದ 41 ಶಾಲೆಗಳಲ್ಲಿ ‘ನೆಹರು ಸ್ಟ್ರೀಮ್ ಲ್ಯಾಬ್‌’ ಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ15 Dec 2025 12:37 PM IST
share
ಕಲ್ಯಾಣ ಕರ್ನಾಟಕದ 41 ಶಾಲೆಗಳಲ್ಲಿ ‘ನೆಹರು ಸ್ಟ್ರೀಮ್ ಲ್ಯಾಬ್‌’ ಸ್ಥಾಪನೆ
'ಕ್ವಾಂಟಮ್ ಫಿಸಿಕ್ಸ್' ಮತ್ತು 'ಪರಿಸರ ವಿಜ್ಞಾನ' ಕಲಿಕೆಗೆ ವಿಶೇಷ ಆದ್ಯತೆ : ಸಚಿವ ಭೋಸರಾಜು

ಬೆಂಗಳೂರು : ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 41 ‘ನೆಹರು ಸ್ಟ್ರೀಮ್ ಲ್ಯಾಬ್’ ಗಳನ್ನು ಸ್ಥಾಪಿಸಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ತಿಳಿಸಿದ್ದಾರೆ.

ರವಿವಾರ ಪ್ರಕಟಣೆ ನೀಡಿರುವ ಅವರು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸಹಯೋಗದೊಂದಿಗೆ ಜಾರಿಗೊಳ್ಳುತ್ತಿರುವ ಈ ಯೋಜನೆಯು, ಸಾಂಪ್ರದಾಯಿಕ ವಿಜ್ಞಾನ ಕಲಿಕೆಗಿಂತ ಒಂದು ಹೆಜ್ಜೆ ಮುಂದೆ ಹೋಗಿ, ಭವಿಷ್ಯದ ಅತ್ಯಾಧುನಿಕ ವಿಜ್ಞಾನ ಮತ್ತು ಪರಿಸರ ಸುಸ್ಥಿರತೆಯನ್ನು ಒಳಗೊಂಡ ವಿಶಿಷ್ಟ ಪಠ್ಯಕ್ರಮವನ್ನು ಆ ಭಾಗದ ವಿದ್ಯಾರ್ಥಿಗಳಿಗೆ ಪರಿಚಯಿಸಲಿದೆ. 'ಸ್ಟ್ರೀಮ್' ಪದದ ವ್ಯಾಖ್ಯಾನವನ್ನು ಜಾಗತಿಕ ವೈಜ್ಞಾನಿಕ ಪ್ರಗತಿ ಮತ್ತು ಸ್ಥಳೀಯ ಪರಿಸರ ಅಗತ್ಯಗಳಿಗೆ ಅನುಗುಣವಾಗಿ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.

STREAM ಎಂದರೆ ವಿಜ್ಞಾನ (Science), ತಂತ್ರಜ್ಞಾನ (Technology), ರೊಬೊಟಿಕ್ಸ್ (Robotics), ಪರಿಸರ ವಿಜ್ಞಾನ (Ecology), ಖಗೋಳಶಾಸ್ತ್ರ (Astronomy) ಮತ್ತು ಗಣಿತ (Mathematics) ಆಗಿರುತ್ತದೆ," ಎಂದು ಸಚಿವರು ವಿವರಿಸಿದರು.

"ಇದೇ ಮೊದಲ ಬಾರಿಗೆ ಶಾಲಾ ಮಟ್ಟದಲ್ಲಿಯೇ ವಿದ್ಯಾರ್ಥಿಗಳಿಗೆ 'ಕ್ವಾಂಟಮ್ ಫಿಸಿಕ್ಸ್'ನ ಮೂಲಭೂತ ಪರಿಕಲ್ಪನೆಗಳನ್ನು ಪರಿಚಯಿಸಲಾಗುತ್ತಿದೆ. ಇದು ಬ್ರಹ್ಮಾಂಡದ ಮೂಲ ಸ್ವರೂಪದ ಬಗ್ಗೆ ಮಕ್ಕಳಲ್ಲಿ ಕುತೂಹಲವನ್ನು ಮೂಡಿಸಲಿದೆ. ಅದೇ ಸಮಯದಲ್ಲಿ, ನಾವು ಪರಿಸರ ವಿಜ್ಞಾನಕ್ಕೆ ಒತ್ತು ನೀಡುತ್ತಿದ್ದೇವೆ. ಇದು ದೇಶದಲ್ಲೇ ಮೊದಲ ಬಾರಿಗೆ ಜಾರಿಯಾಗುತ್ತಿರುವ ವಿನೂತನ ಉಪಕ್ರಮವಾಗಿದ್ದು, ಇದರಲ್ಲಿ ಮಕ್ಕಳು ತರಗತಿ ಕೊಠಡಿಯಿಂದ ಹೊರಬಂದು, ತಮ್ಮ ಸುತ್ತಮುತ್ತಲಿನ ಸ್ಥಳೀಯ ಸಸ್ಯ ಮತ್ತು ಪ್ರಾಣಿ ಸಂಕುಲದ ಬಗ್ಗೆ ಪ್ರಾಯೋಗಿಕ ಜ್ಞಾನ ಪಡೆಯಲಿದ್ದಾರೆ. ಎಳೆಯ ವಯಸ್ಸಿನಲ್ಲೇ ಮಕ್ಕಳ ಮನಸ್ಸಿನಲ್ಲಿ ಸುಸ್ಥಿರತೆ ಮತ್ತು ಪರಿಸರ ಕಾಳಜಿಯನ್ನು ಬಿತ್ತುವುದು ನಮ್ಮ ಗುರಿಯಾಗಿದೆ," ಎಂದು ಹೇಳಿದರು.

ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್ ಧರ್ಮಸಿಂಗ್, "ನಾವು ಮಕ್ಕಳನ್ನು ಎಳೆಯ ವಯಸ್ಸಿನಲ್ಲೇ ಭವಿಷ್ಯಕ್ಕೆ ಸಿದ್ಧಗೊಳಿಸಬೇಕು. ಮೊದಲ ಹಂತದಲ್ಲಿ, ಈ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ ಒಟ್ಟು 41 ಶಾಲೆಗಳಲ್ಲಿ ಈ ಲ್ಯಾಬ್‌ಗಳನ್ನು ಪ್ರಾರಂಭಿಸುತ್ತಿದ್ದೇವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲೂ ನಗರದ ವಿದ್ಯಾರ್ಥಿಗಳಿಗೆ ಸಮಾನವಾದ ವೈಜ್ಞಾನಿಕ ಮನೋಭಾವ ಮತ್ತು ಅವಕಾಶಗಳು ದೊರೆಯಬೇಕು ಎಂಬುದು ನಮ್ಮ ಆಶಯ," ಎಂದು ತಿಳಿಸಿದ್ದಾರೆ.

ಈಗಾಗಲೆ ಕೆಕೆಆರ್‌ಡಿಬಿ ಕಾರ್ಯದರ್ಶಿಗಳು ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರಿಗೆ ಪತ್ರದ ಮೂಲಕ (ದಿನಾಂಕ: 10.12.2025) 41 ಕರ್ನಾಟಕ ಪಬ್ಲಿಕ್ ಶಾಲೆಗಳ (KPS) ಪಟ್ಟಿಯನ್ನು ಅಂತಿಮಗೊಳಿಸುವಂತೆ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X