ಎಸ್ಸಿ-ಎಸ್ಟಿ, ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ನೀಡಿದ ಪ್ರಮುಖ ಕೊಡುಗೆಗಳೇನು?; ಇಲ್ಲಿದೆ ಮಾಹಿತಿ
ಬೆಂಗಳೂರು: ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿಯಲ್ಲಿ 2024-25ನೆ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಗೆ 27,674 ಕೋಟಿರೂ. ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗೆ 11,447 ಕೋಟಿರೂ. ಗಳು ಸೇರಿದಂತೆಒಟ್ಟಾರೆ 39,121 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗಿದೆಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತುಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿಒಟ್ಟು 2,710 ಕೋಟಿರೂ. ಮೀಸಲು, 638 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಿಗೆ ಸೇರಿದಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣಕಾಮಗಾರಿ ನಡೆಸಲಾಗುವುದುಎಂದರು.
► 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆ ಪ್ರಾರಂಭ
► ಬಾಡಿಗೆಕಟ್ಟಡದಲ್ಲಿ ನಡೆಸಲಾಗುತ್ತಿರುವ 18 ವಿದ್ಯಾರ್ಥಿನಿಲಯಗಳಿಗೆ ಸ್ವಂತಕಟ್ಟಡ ನಿರ್ಮಾಣ
► ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 31 ಹೊಸ ಮೆಟ್ರಿಕ್ ನಂತರದ ವಸತಿನಿಲಯ ಮಂಜೂರು
► ಸಮಾಜಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತುಅಲ್ಪಸಂಖ್ಯಾತರಕಲ್ಯಾಣ ಇಲಾಖೆಗಳ ಅಡಿಯಲ್ಲಿಕಾರ್ಯನಿರ್ವಹಿಸುತ್ತಿರುವ ಸರಕಾರಿ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಸತಿ ನಿಲಯಗಳು, ಆಶ್ರಮ ಶಾಲೆಗಳು ಮತ್ತು ವಸತಿ ಶಾಲೆಗಳ ವಿದ್ಯಾರ್ಥಿಗಳ ಭೋಜನ ವೆಚ್ಚವನ್ನು ಪ್ರತಿ ವಿದ್ಯಾರ್ಥಿಗೆ ಪ್ರತಿ ಮಾಹೆಗೆ 100 ರೂ.ನಿಗಧಿ
► ಬೆಂಗಳೂರಿನಲ್ಲಿ 500 ಸಂಖ್ಯೆಯಒಂದು ನಿರಾಶ್ರಿತರ ಪರಿಹಾರಕೇಂದ್ರ ಪ್ರಾರಂಭಕ್ಕೆ10 ಕೋಟಿರೂ. ಮೀಸಲು
► ಎಸ್ಸಿ, ಎಸ್ಟಿ ಸಮುದಾಯಕ್ಕೆ ವಿರಳ ಮತ್ತು ದುಬಾರಿ ವೆಚ್ಚದ ಚಿಕಿತ್ಸಾ ಸೇವೆಗಳನ್ನು ಒದಗಿಸಲು 35 ಕೋಟಿರೂ. ವೆಚ್ಚದಲ್ಲಿ ಅoಡಿಠಿus ಈuಟಿಜ ಸ್ಥಾಪನೆ
► ದಲಿತ ಕವಿ, ಪದ್ಮಶ್ರೀ ಡಾ.ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಅಧ್ಯಯನ ಪೀಠ ಸ್ಥಾಪನೆ
ಪರಿಶಿಷ್ಟ ಪಂಗಡಗಳ ಕಲ್ಯಾಣ
► ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳ ಹೆಸರನ್ನು“ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು”ಎಂದು ಮರು ನಾಮಕರಣ ಮಾಡಲಾಗುವುದುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಪರಿಶಿಷ್ಟ ವರ್ಗಗಳ ಸರ್ವತೋಮುಖಅಭಿವೃದ್ಧಿಗಾಗಿರಾಜ್ಯದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲಾಗಿದ್ದು, ಈ ಸಚಿವಾಲಯಕ್ಕೆಅಗತ್ಯ ಹುದ್ದೆಗಳನ್ನು ಸೃಜಿಸಿ ಪ್ರಸ್ತುತಸಾಲಿನಿಂದಕಾರ್ಯಾರಂಭ ಮಾಡಲಾಗಿದೆಎಂದರು.
► 1 ರಿಂದ 5ನೆ ತರಗತಿವರೆಗೆಕಾರ್ಯನಿರ್ವಹಿಸುತ್ತಿರುವ ಎಲ್ಲ ಶಾಲೆಗಳಲ್ಲಿ 6ನೆತರಗತಿಆರಂಭ
► 100 ಸಂಖ್ಯಾಬಲದ ಬಾಲಕ, ಬಾಲಕಿಯರ 14 ವಿದ್ಯಾರ್ಥಿನಿಲಯ ಪ್ರಾರಂಭ
► ಐಐಎಸ್ಸಿ, ಐಐಟಿ ಸೇರಿದಂತೆಇನ್ನಿತರೆ6 ರಿಂದ 12 ತಿಂಗಳ ಅವಧಿಯ ವೃತ್ತಿಪರತರಬೇತಿ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡಗಳ 200 ಇಂಜಿನಿಯರಿಂಗ್ ಪದವೀಧರರಿಗೆ 15,000 ರೂ.ಶಿಷ್ಯ ವೇತನ
► ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ, ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ 25,000 ರೂ., ಶಿಷ್ಯವೇತನ
► ಪರಿಶಿಷ್ಟ ಪಂಗಡದಕೊರಗ, ಜೇನುಕುರುಬ, ಯರವ, ಕಾಡುಕುರುಬ, ಸೋಲಿಗ, ಗೊಂಡ, ಸಿದ್ದಿ, ಮಲೈಕುಡಿ, ಕುಡಿಯ, ಹಸಲರು, ಗೌಡಲು, ಬೆಟ್ಟಕುರುಬ, ಹಕ್ಕಿ-ಪಿಕ್ಕಿ, ಇರುಳಿಗ, ರಾಜಗೊಂಡ ಹರಿಣಿಶಿಕಾರಿ ಮುಂತಾದ 23 ಅಲೆಮಾರಿ, ಅರೆಅಲೆಮಾರಿಸಮುದಾಯಗಳ ಸಮಗ್ರಅಭಿವೃದ್ಧಿಗಾಗಿಏಕಲವ್ಯ ಮಾದರಿಯ ಪ್ರತಿ ವಸತಿ ಶಾಲೆಯಲ್ಲಿ 20 ಸೀಟುಗಳನ್ನು ಮೀಸಲಿರಿಸಿ, ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ನೀಡಿ ನೇರ ಪ್ರವೇಶ
ಹಿಂದುಳಿದ ವರ್ಗಗಳ ಕಲ್ಯಾಣ
► ಜಿಲ್ಲಾ ಕೇಂದ್ರಗಳಲ್ಲಿ 100 ಸಂಖ್ಯಾಬಲದ ಮೆಟ್ರಿಕ್ ನಂತರದ 75 ಬಾಲಕರ ಮತ್ತು 75 ಬಾಲಕಿಯರ ವಸತಿನಿಲಯ ಪ್ರಾರಂಭ
► ಪ್ರಸ್ತುತಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹಾಗೂ ಮೊರಾರ್ಜಿದೇಸಾಯಿ ವಸತಿ ಶಾಲೆ, ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಒದಗಿಸಲು200 ಕೋಟಿರೂ. ವೆಚ್ಚ
► ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣಇಲಾಖೆಯ 30 ವಿದ್ಯಾರ್ಥಿನಿಲಯಗಳಿಗೆ 4 ಕೋಟಿ ರೂ.ಗಳ ಘಟಕ ವೆಚ್ಚದಲ್ಲಿ ಸ್ವಂತಕಟ್ಟಡ ನಿರ್ಮಾಣ
► ಹಿಂದುಳಿದ ವರ್ಗಗಳ ಕಲ್ಯಾಣಇಲಾಖೆಯಡಿಕಾರ್ಯನಿರ್ವಹಿಸುತ್ತಿರುವಆಶ್ರಮ ಶಾಲೆಗಳಿಗೆ “ಡಿ.ದೇವರಾಜು ಅರಸು” ವಸತಿ ಶಾಲೆಗಳೆಂದು ಮರುನಾಮಕರಣ