Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕಾಂಗ್ರೆಸ್ ಪಕ್ಷಕ್ಕೆ ವಿಶ್ವಾಸಾರ್ಹ...

ಕಾಂಗ್ರೆಸ್ ಪಕ್ಷಕ್ಕೆ ವಿಶ್ವಾಸಾರ್ಹ ನಾಯಕತ್ವ ಇಲ್ಲ: ಯಡಿಯೂರಪ್ಪ ಟೀಕೆ

ವಾರ್ತಾಭಾರತಿವಾರ್ತಾಭಾರತಿ11 April 2024 3:42 PM IST
share
ಕಾಂಗ್ರೆಸ್ ಪಕ್ಷಕ್ಕೆ ವಿಶ್ವಾಸಾರ್ಹ ನಾಯಕತ್ವ ಇಲ್ಲ: ಯಡಿಯೂರಪ್ಪ ಟೀಕೆ

ಬೆಂಗಳೂರು, ಎ.11: ಕಾಂಗ್ರೆಸ್ ಪಕ್ಷಕ್ಕೆ ವಿಶ್ವಾಸಾರ್ಹ ನಾಯಕತ್ವ ಇಲ್ಲ; ಜೊತೆಗೆ ಸರಕಾರದ ಸಾಧನೆಯ ಬೆಂಬಲವೂ ಇಲ್ಲದೆ ಕೇವಲ ಕೇಂದ್ರ ಸರಕಾರದ ಅನುದಾನದ ಬಗ್ಗೆ ಜನರ ದಾರಿ ತಪ್ಪಿಸಿ, ವಿವಾದ ಸೃಷ್ಟಿಸಿ ತನ್ಮೂಲಕ ಜನರ ಬೆಂಬಲ ಗಳಿಸುವ ಭ್ರಮೆಯಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಹೋಟೆಲ್ ಜಿ.ಎಂ. ರಿಜಾಯ್ಸ್ ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ನರೇಂದ್ರ ಮೋದಿಯವರ ಸರಕಾರದ 10 ವರ್ಷಗಳ ಸಾಧನೆಯ ಆಧಾರದ ಮೇಲೆ ಚುನಾವಣೆ ಎದುರಿಸುತ್ತಿದ್ದೇವೆ; ಲೋಕಸಭಾ ಚುನಾವಣೆ ನಡೆಯುತ್ತಿದೆ ಎಂಬುದನ್ನು ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಮರೆತಂತೆ ಕಾಣುತ್ತಿದೆ. ರಾಹುಲ್ ಗಾಂಧಿಯವರ ನಾಯಕತ್ವ ಸಂಪೂರ್ಣವಾಗಿ ವಿಫಲವಾಗಿದ್ದು, ಯಾರೊಬ್ಬರೂ ಸಹ ರಾಹುಲ್ ಗಾಂಧಿಯವರ ಹೆಸರು ಹೇಳಲು ಸಿದ್ಧವಿಲ್ಲದ ಪರಿಸ್ಥಿತಿ ಇದೆ ಎಂದು ವಿಶ್ಲೇಷಿಸಿದರು.

2 ಕೋಟಿ ಉದ್ಯೋಗ ಕೊಟ್ಟಿದ್ದೀರಾ ಎಂದು ಕಾಂಗ್ರೆಸ್ ನವರು ಪದೇಪದೇ ಪ್ರಶ್ನೆ ಮಾಡುತ್ತಾರೆ. 2014ರಲ್ಲಿ 15.54 ಕೋಟಿ ಭವಿಷ್ಯ ನಿಧಿ ಖಾತೆ ಇತ್ತು. 2022ರಲ್ಲಿ ಇದರ ಸಂಖ್ಯೆ 22.5 ಕೋಟಿ ದಾಟಿದೆ. 7 ಕೋಟಿ ಹೊಸ ಉದ್ಯೋಗ ಸೇರ್ಪಡೆಯಾಗಿದೆ. 2014ರಲ್ಲಿ ಎಂಎಸ್ಎಂಇಗಳಲ್ಲಿ 5 ಕೋಟಿ ಉದ್ಯೋಗ ನೀಡಿದ್ದವು. 2022ರಲ್ಲಿ ಅದರ ಸಂಖ್ಯೆ 6.3 ಕೋಟಿ ದಾಟಿದೆ. ಬೆಂಗಳೂರಿನ ಎಚ್ಎಎಲ್ ಮುಚ್ಚುತ್ತಾರೆಂದು ಅಪಪ್ರಚಾರ ಮಾಡಿದರು. ಆದರೆ, ಇಂದು ಎಚ್ಎಎಲ್ 84 ಸಾವಿರ ಕೋಟಿ ಕಾರ್ಯಾದೇಶ ಪಡೆದಿದೆ. 50 ಸಾವಿರ ಕೋಟಿ ಕಾರ್ಯಾದೇಶ ಪಡೆಯಲು ಮಾತುಕತೆ ಹಂತದಲ್ಲಿದೆ ಎಂದು ವಿವರಿಸಿದರು. 23-24ರಲ್ಲಿ ದಾಖಲೆಯ 29 ಸಾವಿರ ಕೋಟಿ ರೂ. ಆದಾಯ ಗಳಿಸಿದೆ. ಎಚ್ಎಎಲ್ ಮುಚ್ಚುತ್ತಾರೆಂದು ಅಪಪ್ರಚಾರ ಮಾಡುತ್ತಿದ್ದ ರಾಹುಲ್ ಗಾಂಧಿಯವರು ಕ್ಷಮೆ ಕೇಳುತ್ತಾರಾ? ಅವರ ಬಳಿ ಡಿಕೆಶಿ ಕ್ಷಮೆ ಕೇಳಿಸ್ತಾರಾ ಎಂದು ಪ್ರಶ್ನಿಸಿದರು.

ಒಂದೇ ಒಂದು ಉದ್ಯೋಗ ನೀಡದೆ ದಾಖಲೆ

ಸಿದ್ದರಾಮಯ್ಯನವರ ಸರಕಾರ ಕಳೆದ 10 ತಿಂಗಳಿನಲ್ಲಿ ರಾಜ್ಯದಲ್ಲಿ ಎಷ್ಟು ಉದ್ಯೋಗ ಸೃಷ್ಟಿ ಮಾಡಿದೆ ಎಂದು ಅವರು ಪ್ರಶ್ನಿಸಿದರು. ಕೇವಲ ಎಂ.ಬಿ.ಪಾಟೀಲ್ ಮತ್ತು ಪ್ರಿಯಾಂಕ್ ಖರ್ಗೆ ಅವರ ಎಕ್ಸ್ ಖಾತೆಯಲ್ಲಿ ಉದ್ದಿಮೆ ಸ್ಥಾಪನೆ ಆಗಿದೆ. ಕಳೆದ 10 ತಿಂಗಳಿನಲ್ಲಿ ಒಂದೇ ಒಂದು ಉದ್ಯೋಗ ನೀಡದೆ ದಾಖಲೆ ಮಾಡಿದ್ದು, ಕಾಂಗ್ರೆಸ್ ಸರಕಾರದ ಸಾಧನೆ ಎಂದು ಯಡಿಯೂರಪ್ಪ ಅವರು ನುಡಿದರು.

ಮೂಲಭೂತ ಸೌಕರ್ಯದಲ್ಲಿ ಕಾಂಗ್ರೆಸ್ಸಿನ ಸಾಧನೆ ನಿರಾಶಾದಾಯಕ. ಯುಪಿಎ ತನ್ನ 10 ವರ್ಷಗಳ ಅವಧಿಯಲ್ಲಿ ಕರ್ನಾಟಕದಲ್ಲಿ ಕೇವಲ 1,252 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಿಸಿದೆ. 2014ರಿಂದ 2024ರ ಅವಧಿಯಲ್ಲಿ ಬಿಜೆಪಿ ಸರಕಾರ ನಿರ್ಮಿಸಿದ ಒಟ್ಟು ಹೆದ್ದಾರಿ 3,234 ಕಿಮೀ ಎಂದು ದಾಖಲೆಗಳೊಂದಿಗೆ ವಿವರಿಸಿದರು.

ಕಲಬುರ್ಗಿ- ಬೀದರ್ ರೈಲು ಮಾರ್ಗ ಮೋದಿ ಸರಕಾರದ ಅವಧಿಯಲ್ಲಿ ಪೂರ್ಣಗೊಂಡಿದೆ. ಮಲ್ಲಿಕಾರ್ಜುನ ಖರ್ಗೆಯವರು ಸ್ವತಃ ರೈಲ್ವೆ ಸಚಿವರಾಗಿದ್ದರೂ ಅದನ್ನು ಪೂರ್ಣ ಮಾಡಲು ಆಗಿರಲಿಲ್ಲ ಎಂದು ತಿಳಿಸಿದರು. ಕರ್ನಾಟಕದ ಶೇ 95 ರೈಲು ಮಾರ್ಗಗಳ ವಿದ್ಯುದೀಕರಣವಾಗಿದೆ. ರೈಲ್ವೆ ಯೋಜನೆಯಲ್ಲಿ ಹಿಂದೆ ಬಿದ್ದಿದ್ದ ಕರ್ನಾಟಕವು ಈಗ ಭರದಿಂದ ಇತರ ರಾಜ್ಯಗಳ ಸಮನಾಗಿ ಅಭಿವೃದ್ಧಿ ಹೊಂದುತ್ತಿದೆ. ಇಂದು 6 ವಂದೇ ಭಾರತ್ ರೈಲುಗಳ ಸೇವೆ ರಾಜ್ಯದಲ್ಲಿ ದೊರಕುತ್ತಿದೆ. ರಾಜ್ಯದ 4 ಕೋಟಿ ಜನರಿಗೆ ಗರೀಬಿ ಕಲ್ಯಾಣ ಯೋಜನೆಯಡಿ ಉಚಿತ ಪಡಿತರವನ್ನು ಕಳೆದ 4 ವರ್ಷಗಳಿಂದ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ರಾಜ್ಯ ಸರಕಾರ ಆಶ್ವಾಸನೆ ನೀಡಿದ 10 ಕೆಜಿ ಅಕ್ಕಿಯಲ್ಲಿ ಒಂದು ಕಾಳು ಅಕ್ಕಿಯನ್ನೂ ನೀಡದೆ ಇರುವುದು ಅವರ ಸಾಧನೆ. ರಾಜ್ಯದ 54 ಲಕ್ಷ ರೈತರಿಗೆ ಕೇಂದ್ರ ಸರಕಾರದ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ವರ್ಷಕ್ಕೆ 6 ಸಾವಿರ ನೀಡಲಾಗುತ್ತಿದೆ. ನಾನು ಮುಖ್ಯಮಂತ್ರಿ ಆಗಿದ್ದಾಗ 4 ಸಾವಿರ ಸೇರಿಸಿ ಕೊಡುತ್ತಿದ್ದೆ. ಈಗ 4 ಸಾವಿರ ನಿಲ್ಲಿಸಿದ್ದು, ಈ ಸರಕಾರ ದಿವಾಳಿ ಆಗಿರುವುದನ್ನು ಸ್ಪಷ್ಟವಾಗಿ ಕಾಣುತ್ತಿದ್ದೇವೆ ಎಂದು ಟೀಕಿಸಿದರು.

ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೊಡುವ ಮತವು ಆಂತರಿಕ ಸುರಕ್ಷತೆಗೆ ಅಪಾಯವನ್ನು ತಂದೊಡ್ಡಲಿದೆ. ಆದರೆ, ಮೋದಿ ಅವರ ನಾಯಕತ್ವ, ಗ್ಯಾರಂಟಿ, ಸದೃಢ ಸುರಕ್ಷಿತ ಭಾರತಕ್ಕೆ ಮತ್ತು ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಜನತೆ ಬಿಜೆಪಿ ಮತ್ತು ಎನ್ಡಿಎ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್, ರಾಜ್ಯದ ಮಾಜಿ ಸಚಿವ ಭೈರತಿ ಬಸವರಾಜ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X