ಬೆಂಗಳೂರು | ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಇಬ್ಬರ ಬಂಧನ
ಬೆಂಗಳೂರು : ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ನಂತರ ನ್ಯಾಯಾಲಯಕ್ಕೆ ಹಾಜರಾಗದೇ ಮನೆ ಖಾಲಿ ಮಾಡಿಕೊಂಡು ಪರಾರಿಯಾಗಿದ್ದ ಇಬ್ಬರನ್ನು ಇಲ್ಲಿನ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಬಂಧನಕ್ಕೆ ಒಳಗಾದ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿ, ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಗೊತ್ತಿದ್ದರೂ ಸಹ ಹಾಜರಾಗದೇ ಠಾಣೆಯಲ್ಲಿ ನೀಡಿರುವ ವಿಳಾಸವನ್ನು ಖಾಲಿ ಮಾಡಿಕೊಂಡು ಹೋಗಿದ್ದರು.
ಈ ಪ್ರಕರಣದ ಅರೋಪಿಗಳನ್ನು ಪತ್ತೆ ಹಚ್ಚಿದ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಈ ಪೈಕಿ ಒಬ್ಬ ಮೂರು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಮತ್ತೊಬ್ಬ ಎರಡು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Next Story