ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ದಿನೇ ದಿನೇ ದರ್ಶನ್ ಅಂಡ್ ಗ್ಯಾಂಗ್ ನಡೆಸಿದ ಹೀನ ಕೃತ್ಯಗಳು ವಿಚಾರಣೆ ವೇಳೆ ಬೆಳಕಿಗೆ ಬರುತ್ತಿದೆ. ಕೃತ್ಯದಲ್ಲಿ ಬಂಧಿತನಾಗಿರುವ ಧನರಾಜ್ ಜೊತೆಗೆ ಆತನ ಸಹಚರರು ಎಲೆಕ್ಟ್ರಿಕಲ್ ಶಾಕ್ ನೀಡಿದ್ದರು ಎಂಬ ಸಂಗತಿ ಹೊರಬಿದ್ದಿದೆ.
ಪ್ರಕರಣದಲ್ಲಿ 9ನೇ ಆರೋಪಿಯಾಗಿರುವ ಧನರಾಜ್, ನಟ ದರ್ಶನ್ ಮನೆಯಲ್ಲಿ ಸಾಕುನಾಯಿಗಳನ್ನ ನೋಡಿಕೊಳ್ಳುತ್ತಿದ್ದ. ಇದಕ್ಕೂ ಮೊದಲು ಡಾಗ್ ಬ್ರಿಡಿಂಗ್ ಆಗಿದ್ದ. ದರ್ಶನ್ ಜೊತೆ ಆಪ್ತನಾದ ಬಳಿಕ ಈತನ ಮನೆಯಲ್ಲೆ ಕೆಲಸ ಮಾಡಿಕೊಂಡಿದ್ದ. ಧನರಾಜ್ ನನ್ನ ಬಂಧಿಸಿದ ಪೊಲೀಸ್ ವಿಚಾರಣೆಯಲ್ಲಿ ಹಲವು ವಿಷಯಗಳು ರಿವೀಲ್ ಆಗುತ್ತಿದೆ.
ಧನರಾಜ್ ಎಲೆಕ್ಟ್ರಿಕ್ ಶಾಕ್ ನೀಡುವ ಮೆಗ್ಗಾರ್ ಅನ್ನು ಹಲವಾರು ತಿಂಗಳಿಂದ ಇಟ್ಟುಕೊಂಡಿದ್ದ. ಫೈನಾನ್ಸ್ ಸರಿಯಾಗಿ ಕಟ್ಟದ ಹಲವರಿಗೆ ಬಂಧಿತ ಆರೋಪಿಯಾಗಿರುವ ವಿನಯ್, ಶೆಡ್ ನಲ್ಲಿ ಹಲ್ಲೆ ಮಾಡುತ್ತಿದ್ದ. ಈ ವೇಳೆ ಹಲ್ಲೆ ಮಾಡುವಾಗೆಲ್ಲಾ ಈ ಧನರಾಜು ಜೊತೆಗೆ ಇರುತ್ತಿದ್ದ. ಈ ಹಿಂದೆ ಹಲವಾರು ಜನರಿಗೆ ಹಲ್ಲೆ ಮಾಡುವಾಗ ಇದೇ ಮೆಗ್ಗಾರ್ ನಿಂದ ಶಾಕ್ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿನಿಮಾದಲ್ಲಿ ನಡೆಯುವ ರೀತಿ ಚೇರ್ ಗೆ ಕಟ್ಟಿ ಕೂರಿಸಿ ನಂತರ ಶಾಕ್ ನೀಡುತ್ತಿದ್ದರು. ಆರ್ ಆರ್ ನಗರ ಪೊಲೀಸ್ ಠಾಣೆ ಹಿಂಬಾಗದ ರಸ್ತೆಯಲ್ಲಿ ವಾಸವಾಗಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಇದುವರೆಗೂ ಒಟ್ಟು 17 ಮಂದಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.