ಮಾದಕ ದ್ರವ್ಯ ವಿರೋಧಿ ದಿನಾಚರಣೆ ಪ್ರಯುಕ್ತ ಜಾಗೃತಿ ಕಾರ್ಯಕ್ರಮ
ಬೆಂಗಳೂರು: ಯಾರಬ್ ನಗರ ಸಅದಿಯ್ಯಾ ಇಸ್ಲಾಮಿಕ್ ಸ್ಟೂಡೆಂಟ್ಸ್ ಯೂನಿಯನ್ ಇದರ ವತಿಯಿಂದ ಜೂನ್ 26ರಂದು ಮಾದಕ ದ್ರವ್ಯ ವಿರೋಧಿ ದಿನಾಚರಣೆ ಪ್ರಯುಕ್ತ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ವಿದ್ಯಾಸಂಸ್ಥೆಯ ಉಪನ್ಯಾಸಕ ಪಝುಲ್ ರಹ್ಮಾನ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸಿದರು. ಪ್ರಾಂಶುಪಾಲ ಲತೀಪ್ ಸಅದಿ ಸಮಾರಂಭ ಉದ್ಘಾಟಿಸಿದರು.
ಬನಶಂಕರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪ್ರವೀಣ್ ಹೊಸೂರು ವಿಷಯ ಮಂಡಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಮುಹಮ್ಮದ್ ಇಸ್ಮಾಯಿಲ್ ಹಝ್ರತ್, ಪೊಲೀಸ್ ಅಧಿಕಾರಿ ವಿಶ್ವನಾಥ್ ಎಂ. ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸ್ಟೂಡೆಂಟ್ ಯೂನಿಯನ್ ಕನ್ವೀನರ್ ಜುನೈದ್ ಬೋಳಂತೂರು ಸ್ವಾಗತಿಸಿದರೆ, ಕಾರ್ಯದರ್ಶಿ ಶಬಿನ್ ಮಿರ್ಶದ್ ಅಭಿನಂದನೆ ಸಲ್ಲಿಸಿದರು.
Next Story