Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಾಲ್ಮೀಕಿ ನಿಗಮದ ಹಗರಣ | ಎಸ್‌ಐಟಿ...

ವಾಲ್ಮೀಕಿ ನಿಗಮದ ಹಗರಣ | ಎಸ್‌ಐಟಿ ವಶಪಡಿಸಿಕೊಂಡ ಹಣದ ವಿವರ ನೀಡಿದ ಸಿಎಂ

ವಾರ್ತಾಭಾರತಿವಾರ್ತಾಭಾರತಿ19 July 2024 8:19 PM IST
share
ವಾಲ್ಮೀಕಿ ನಿಗಮದ ಹಗರಣ | ಎಸ್‌ಐಟಿ ವಶಪಡಿಸಿಕೊಂಡ ಹಣದ ವಿವರ ನೀಡಿದ ಸಿಎಂ

ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಸಂಬಂಧ ಎಸ್‍ಐಟಿ ಅಧಿಕಾರಿಗಳು ತನಿಖೆ ನಡೆಸಿದ್ದು, ಆ ತನಿಖೆಯ ಮೇಲೆ ಸರಕಾರಕ್ಕೆ ಸಂಪೂರ್ಣ ವಿಶ್ವಾಸವಿದೆ. 217 ವಿವಿಧ ಬ್ಯಾಂಕ್‍ಗಳ ಖಾತೆಗಳನ್ನು ಗುರುತಿಸಿ ಅವುಗಳಲ್ಲಿದ್ದ 13.72 ಕೋಟಿ ರೂ.ಹಣದ ವಹಿವಾಟು ಸ್ಥಗಿತಗೊಳಿಸಿದ್ದು, ಈ ಮೂಲಕ ಪ್ರಕರಣದಲ್ಲಿ ಒಟ್ಟು 85.25ಕೋಟಿ ರೂ.ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದ್ದಾರೆ.

ಶುಕ್ರವಾರ ವಿಧಾಶನಸಭೆಯ ಕಲಾಪದಲ್ಲಿ ವಾಲ್ಮೀಕಿ ನಿಗಮದ ಪ್ರಕರಣ ಸಂಬಂಧ ಸುದೀರ್ಘ ಉತ್ತರವನ್ನು ಮಂಡಿಸಿದ ಅವರು, ಸಿಟ್ ಅಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದು, ಈಗಾಗಲೇ ನಿಗಮದ ಖಾತೆಯಿಂದ ವರ್ಗಾವಣೆ ಆದ ಹಣವನ್ನು ವಾಪಸ್ ವಶಪಡಿಸಿಕೊಳ್ಳುವ ಕಾರ್ಯನಡೆಯುತ್ತಿದೆ ಎಂದರು.

ಈ ಪ್ರಕರಣದಲ್ಲಿ ಭಾಗಿಯಾಗಿರುವ ಸತ್ಯನಾರಾಯಣ ವರ್ಮಾ ಮತ್ತು ಇತರೆ ಆರೋಪಿಗಳು ಅಕ್ರಮವಾಗಿ ಬೇರೆ ವ್ಯಕ್ತಿಗಳ ಖಾತೆಗಳಿಗೆ ವರ್ಗಾಯಿಸಿದ್ದ 1.50 ಕೋಟಿ ರೂ. ಹಣವನ್ನು ಜನರೇ ವಾಪಾಸ್ ಕಟ್ಟಿದ್ದಾರೆ. ಆ ಹಣ ಸರಕಾರದಲ್ಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಲ್ಯಾಂಬೋರ್ಗಿನಿ ಕಾರು ಖರೀದಿಸಿದ್ದ ಆರೋಪಿ: ಆರೋಪಿ ಸತ್ಯನಾರಾಯಣ ವರ್ಮಾ ಲ್ಯಾಂಬೋರ್ಗಿನಿ ಉರಸ್ ಎಂಬ ಕಾರನ್ನು ಬಿಗ್‍ಬಾಯ್ಸ್ ಟಾಯ್ಸ್ ಲಿ.ಕಂಪೆನಿ ಮೂಲಕ ಖರೀದಿ ಮಾಡಿದ್ದ. ಈಗ ಆ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಂಪೆನಿಯು ಕಾರನ್ನು ವಾಪಸ್ ಪಡೆದು 3.31 ಕೋಟಿ ರೂ. ಹಣವನ್ನು ಸರಕಾರಕ್ಕೆ ಮರಳಿಸುವುದಾಗಿ ಸಂಬಂಧಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

1.21ಕೋಟಿ ರೂ.ಬೆಂಝ್ ಕಾರು ಖರೀದಿ: ಇದೇ ಸತ್ಯನಾರಾಯಣ ವರ್ಮಾ 1.21ಕೋಟಿ ರೂ.ಗೂ ಹೆಚ್ಚು ಬೆಲೆಬಾಳುವ ಬೆಂಝ್ ಕಾರನ್ನು ಖರೀದಿಸಿದ್ದು, ಈ ಬಗ್ಗೆ ತನಿಖೆಯಲ್ಲಿ ಗೊತ್ತಾದ ಬಳಿಕ ಎಸ್‌ಐಟಿ ಅಧಿಕಾರಿಗಳು ಈ ಕಾರನ್ನು ವಶಕ್ಕೆ ಪಡೆದಿದ್ದಾರೆ. ಈ ಕಾರನ್ನೂ ಮರಳಿ ಕಂಪೆನಿಗೆ ನೀಡಿ ಅದರ ಮೌಲ್ಯವನ್ನು ವಾಪಸ್ ಪಡೆಯುವ ಪ್ರಕ್ರಿಯೆ ಚಾಲನೆಯಲ್ಲಿದೆ. ಅಲ್ಲದೆ, ಅಕ್ರಮವಾಗಿ ವರ್ಗಾವಣೆಯಾಗಿದ್ದ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ(ರತ್ನಾಕರ್ ಬ್ಯಾಂಕ್) ನಿಗಮದ ಖಾತೆಗೆ 5 ಕೋಟಿ ರೂ.ಮರಳಿಸಿರುತ್ತಾರೆ ಎಂದು ಸಿದ್ದರಾಮಯ್ಯ ವಿವರಿಸಿದರು.

ಯೂನಿಯನ್ ಬ್ಯಾಂಕ್‍ನಿಂದ ಅಕ್ರಮವಾಗಿ ಹಣ ವರ್ಗಾವಣೆಯಾಗಿದ್ದ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 46.00 ಕೋಟಿಗೂ ಹೆಚ್ಚು ಹಣ ರತ್ನಾಕರ್ ಬ್ಯಾಂಕ್ ಲಿ.ನಲ್ಲಿದೆ. ಈ ಹಣವನ್ನು ನಮ್ಮ ಎಸ್‌ಐಟಿ ಅಧಿಕಾರಿಗಳ ತಂಡವು ಸ್ಥಗಿತಗೊಳಿಸಿರುತ್ತದೆ. ಅದನ್ನು ಹಿಂಪಡೆಯುವ ಪ್ರಕ್ರಿಯೆ ಪ್ರಾರಂಭಿಸಲಾಗುತ್ತಿದೆ. ಈ ಮೂಲಕ ಪ್ರಕರಣದಲ್ಲಿ ಒಟ್ಟಾರೆ 85,25,07,698 ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.

ಯಾರಿಂದ ಎಷ್ಟೆಷ್ಟು ವಶಕ್ಕೆ?:

ಸತ್ಯನಾರಾಯಣ ವರ್ಮಾ- 8,21 ಕೋಟಿ ರೂ.

ಪದ್ಮನಾಭ ಜೆ.ಜಿ.- 3. 62 ಕೋಟಿ ರೂ.

ಪದ್ಮನಾಭ ಜೆ.ಜಿ - 30 ಕೋಟಿ ರೂ.

ನಾಗೇಶ್ವರ ರಾವ್ - 1.49 ಕೋಟಿ ರೂ.

ಚಂದ್ರಮೋಹನ್ - 30 ಕೋಟಿ ರೂ.

ಜಿ.ಕೆ. ಜಗದೀಶ್ - 12.50 ಕೋಟಿ ರೂ.

ಸತ್ಯನಾರಾಯಣ ವರ್ಮಾ - 3.10 ಕೋಟಿ ರೂ.

ಸತ್ಯನಾರಾಯಣ ವರ್ಮಾ - 24 ಕೋಟಿ ರೂ.

ಚಂದ್ರಮೋಹನ್ - 9 -207 ಗ್ರಾಂ ಚಿನ್ನ, ಮೌಲ್ಯ- 13.50 ಕೋಟಿ ರೂ.

ಜಿ.ಕೆ. ಜಗದೀಶ್ - 10- 47.6 ಗ್ರಾಂ ಚಿನ್ನ, ಮೌಲ್ಯ- 3.09 ಕೋಟಿ ರೂ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X