Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜಯಂತಿಗಳ ಮೂಲಕ ಇತಿಹಾಸ ತಿಳಿಸುವ ಕೆಲಸ :...

ಜಯಂತಿಗಳ ಮೂಲಕ ಇತಿಹಾಸ ತಿಳಿಸುವ ಕೆಲಸ : ಸಚಿವ ಶಿವರಾಜ್ ತಂಗಡಗಿ

ಕಿತ್ತೂರು ರಾಣಿಚೆನ್ನಮ್ಮ ಜಯಂತೋತ್ಸವ

ವಾರ್ತಾಭಾರತಿವಾರ್ತಾಭಾರತಿ23 Oct 2024 10:08 PM IST
share
ಜಯಂತಿಗಳ ಮೂಲಕ ಇತಿಹಾಸ ತಿಳಿಸುವ ಕೆಲಸ : ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಕಿತ್ತೂರು ರಾಣಿ ಚೆನ್ನಮ್ಮ ಯಾವುದೇ ಒಂದು ಸಮಾಜಕ್ಕೆ ಸೇರಿದವರಲ್ಲ. ಬದಲಾಗಿ ಎಲ್ಲ ಸಮಾಜಗಳನ್ನು ಕಟ್ಟುವ ಕೆಲಸ ಮಾಡಿದ ವೀರ ವನಿತೆಯಾಗಿದ್ದು, ಇಂತಹ ಮಹನೀಯರ ಜಯಂತಿ ಆಚರಣೆ ಮೂಲಕ ಇತಿಹಾಸವನ್ನು ಯುವ ಪೀಳಿಗೆಗೆ ತಿಳಿಸುವ ಕೆಲಸ ಮಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

ಬುಧವಾರ ಇಲ್ಲಿನ ಕನ್ನಡ ಭವನದ ಆವರಣದಲ್ಲಿ ಆಯೋಜಿಸಿದ್ದ ಕಿತ್ತೂರು ರಾಣಿಚೆನ್ನಮ್ಮ ಜಯಂತೋತ್ಸವದಲ್ಲಿ ಮಾತನಾಡಿದ ಅವರು, ಹೆಣ್ಣೊಬ್ಬಳು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬ ಪರಮಸತ್ಯವನ್ನು ಜಗತ್ತಿಗೆ ಸಾರಿದ ನಮ್ಮ ಕನ್ನಡ ಮಣ್ಣಿನ ಹೆಣ್ಣುಮಗಳು ಚೆನ್ನಮ್ಮ. ಅವರು ಎಂದೆಂದಿಗೂ ಕನ್ನಡದ ಹೆಣ್ಣುಮಕ್ಕಳ ಪ್ರತಿನಿಧಿಯಾಗಿ ಉಳಿದಿದ್ದಾರೆ ಎಂದರು.

ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟೀಷರ ಮೇಲೆ ವಿಜಯ ಸಾಧಿಸಿದ ಈ ಐತಿಹಾಸಿಕ ದಿನವನ್ನೇ ಕಿತ್ತೂರ ರಾಣಿ ಜಯಂತಿ ಆಗಿಯೂ ಆಚರಿಸಲು ನಿರ್ಧರಿಸಿ 2017ರಲ್ಲಿ ಕರ್ನಾಟಕ ಸರಕಾರ ಆದೇಶ ಹೊರಡಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಂದೂ ಮುಖ್ಯಮಂತ್ರಿಗಳಾಗಿದ್ದರು. ಅವರ ನಿರ್ದೇಶನದ ಮೇರೆಗೆ ಈ ಸಮಾರಂಭದ ಆಚರಣೆ ಮೊದಲಾಯಿತು. ಈ ವರ್ಷ ಇದಕ್ಕೆ ವಿಶೇಷವಾದ ಮಹತ್ವವಿದೆ. ಈ ವಿಜಯ ಸಾಧಿಸಿ ಇಂದಿಗೆ 200 ವರ್ಷಗಳು ಪೂರ್ಣಗೊಂಡಿದೆ ಎಂದು ಅವರು ಹೇಳಿದರು.

ರಾಣಿ ಚೆನ್ನಮ್ಮನವರ ಜೀವನವೇ ಅತ್ಯಂತ ರೋಚಕ, ಹೋರಾಟದ ಅಧ್ಯಾಯ. ಬೆಳಗಾವಿ ಜಿಲ್ಲೆಯ ಕಾಕತಿಯ ದೇಸಾಯಿಯವರ ಪುತ್ರಿಯಾಗಿ ಹುಟ್ಟಿದ ಚೆನ್ನಮ್ಮ, ಅಂದಿನ ಕಾಲದ ಎಲ್ಲ ಹೆಣ್ಣುಮಕ್ಕಳಂತೆ ಕೇವಲ ಅಡುಗೆ ಮನೆಗೆ ಮಾತ್ರವೇ ಮೀಸಲಾಗಿರಲಿಲ್ಲ. ತಂದೆಯ ಪ್ರೊತ್ಸಾಹದೊಂದಿಗೆ ಅಂದಿನ ಕಾಲಮಾನದಲ್ಲಿ ಕೇವಲ ಗಂಡುಮಕ್ಕಳ ವಿದ್ಯೆ ಎನಿಸಿಕೊಂಡಿದ್ದ ಕುದುರೆ ಸವಾರಿ, ಶಸ್ತ್ರಾಭ್ಯಾಸ, ರಾಜಕೀಯ ಶಿಕ್ಷಣ, ವೇದ-ಪುರಾಣ-ಇತಿಹಾಸಗಳ ಅಧ್ಯಯನಗಳಂತಹ ಶಿಕ್ಷಣವನ್ನೂ ಕರಗತ ಮಾಡಿಕೊಂಡಿದ್ದರು ಎಂದು ಅವರು ತಿಳಿಸಿದರು.

ಉದಾತ್ತ ಚಿಂತನೆಯ ಮೂಲಕ ಸಮಸಮಾಜದ ಸಾಕಾರಕ್ಕೆ ಮುನ್ನುಡಿಯನ್ನು ಅಂದೇ ಬರೆದಿದ್ದ ರಾಣಿ ಚೆನ್ನಮ್ಮನವರಂಥ ವೀರವನಿತೆಯರು ಹುಟ್ಟಿದ ಕನ್ನಡ ನಾಡು ಧನ್ಯ. ಇಂಥ ನಾಡಿನಲ್ಲಿ ಹುಟ್ಟಿದ ನಾವು ನೀವೆಲ್ಲರೂ ವೀರಮಾತೆಯ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ. ಈ ಮೂಲಕ ಸದಾ ಕಾಯಕವನ್ನು ಮಾಡುತ್ತಾ ನಮ್ಮ ಜೀವನವನ್ನು ಸಾರ್ಥಕಪಡಿಸಿಕೊಳ್ಳೋಣ ಎಂದು ಅವರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷ ಶಿವಾನಂದ ಕಾಶಪ್ಪನವರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳೆಮಲೆ, ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ, ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್, ನಾಟಕ ಅಕಾಡೆಮಿ ಅಧ್ಯಕ್ಷ ನಾಗರಾಜ್ ಮೂರ್ತಿ, ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X