ವೀರಶೈವ ಮಹಾಸಭಾದ ಹಿರಿಯ ಉಪಾಧ್ಯಕ್ಷರಾಗಿ ಈಶ್ವರ್ ಬಿ.ಖಂಡ್ರೆ ನೇಮಕ : ಶಾಮನೂರು

ಬೆಂಗಳೂರು : ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾ ಹಿರಿಯ ಉಪಾಧ್ಯಕ್ಷರನ್ನಾಗಿ ಅರಣ್ಯ ಸಚಿವ ಈಶ್ವರ್ ಬಿ.ಖಂಡ್ರೆ ಅವರನ್ನು ನೇಮಕ ಮಾಡಲಾಗಿದೆ ಎಂದು ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.
ಶುಕ್ರವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಮಹಾಸಭಾದ ಆಡಳಿತ ಮತ್ತು ಸಂಘಟನೆಯ ದೃಷ್ಟಿಯಿಂದ ಈಶ್ವರ ಖಂಡ್ರೆ ಅವರನ್ನು ಹಿರಿಯ ಉಪಾಧ್ಯಕ್ಷರನ್ನಾಗಿ ಸಭಾದ ಸಂವಿಧಾನ ದತ್ತವಾದ ಅಧಿಕಾರದಂತೆ ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Next Story





