Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದೇವೇಗೌಡರು ಬಿಜೆಪಿ, ನರೇಂದ್ರ ಮೋದಿಯ...

ದೇವೇಗೌಡರು ಬಿಜೆಪಿ, ನರೇಂದ್ರ ಮೋದಿಯ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ ಟೀಕೆ

ವಾರ್ತಾಭಾರತಿವಾರ್ತಾಭಾರತಿ16 Feb 2025 12:06 PM IST
share
ದೇವೇಗೌಡರು ಬಿಜೆಪಿ, ನರೇಂದ್ರ ಮೋದಿಯ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ ಟೀಕೆ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೇಂದ್ರದಲ್ಲಿ ಯಾವ ಪಕ್ಷದ ಸರಕಾರ ಇದ್ದರೂ ಮುಲಾಜಿಗೆ ಬೀಳದೆ ಕರ್ನಾಟಕದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ದನಿ ಎತ್ತುತ್ತಾ ಬಂದವರು. ಆದರೆ ಇದೀಗ ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದ್ದರೂ ದೇವೇಗೌಡರು ಬಿಜೆಪಿ ಮತ್ತು ನರೇಂದ್ರ ಮೋದಿಯವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ, ಹಿಂದೆಲ್ಲ ರಾಜ್ಯದ ಹಿತಾಸಕ್ತಿ ರಕ್ಷಣೆಯ ಪ್ರಶ್ನೆ ಎದುರಾದಾಗ ರಾಜ್ಯಕ್ಕೆ ನ್ಯಾಯ ಕೊಡಲು ನೀವು ಹೋರಾಟ ನಡೆಸಿದ್ದೀರಿ. ಆದರೆ ಇತ್ತೀಚೆಗೆ ನೀವು ಮತ್ತು ನಿಮ್ಮ ಪಕ್ಷ ಕೇಂದ್ರ ಸರಕಾರದ ವಕ್ತಾರರಂತೆ ಪಕ್ಷಪಾತೀಯಾಗಿ ವರ್ತಿಸುತ್ತಿದೆ. ಕೇಂದ್ರ ಸಂಪುಟದಲ್ಲಿ ಮಗನನ್ನು ಸಚಿವನನ್ನಾಗಿ ಮಾಡಲು ಗೌಡರು ಇಷ್ಟೊಂದು ರಾಜಿ ಮಾಡಿಕೊಳ್ಳುವ ಅಗತ್ಯವಿತ್ತೇ? ಎಂದು ಜನ ಪ್ರಶ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

'ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹೇಳಿಕೆಯನ್ನು ನಾನು ಸಂಪೂರ್ಣ ಸ್ವಾಗತಿಸುತ್ತೇನೆ. ವೈಯಕ್ತಿಕವಾಗಿ ಇದು ನನ್ನ ಅಭಿಪ್ರಾಯವಾಗಿದ್ದು, ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎನ್ನುವುದನ್ನು ಹಿರಿಯರಾದ ದೇವೇಗೌಡರ ಗಮನಕ್ಕೆ ತರಬಯಸುತ್ತೇನೆ' ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಹತ್ತು ದಿನಗಳ ಅವಧಿಯಲ್ಲಿ 15,000 ಕ್ಯುಸೆಕ್ಸ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು 2016ರ ಸೆಪ್ಟಂಬರ್ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿದಾಗ ಉದ್ಭವವಾದ ಬಿಕ್ಕಟ್ಟಿನ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ನಾನು ನಿಮ್ಮ ಮನೆಗೆ ಬಂದು ಕೈಹಿಡಿದು ಕರೆದುಕೊಂಡು ಬಂದು ಸರ್ವಪಕ್ಷಗಳ ಸಭೆ ನಡೆಸಿದ್ದೆ ಸಿದ್ದರಾಮಯ್ಯ ನೆನಪಿಸಿದ್ದಾರೆ.

ನೀರಾವರಿ ವಿಚಾರದಲ್ಲಿ ನ್ಯಾಯಪಕ್ಷಪಾತಿಯಾಗಿ ಕರ್ನಾಟಕದ ಹಿತಾಸಕ್ತಿಯ ರಕ್ಷಣೆ ಮಾಡಬೇಕಾಗಿದ್ದ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸತತವಾಗಿ ಕನ್ನಡಿಗರ ಹಿತವನ್ನು ಬಲಿಗೊಡಲು ಹೊರಟಿರುವುದನ್ನು ದೇವೇಗೌಡರಿಗೆ ನಾನು ಬಿಡಿಸಿ ಹೇಳಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.

ಮಹದಾಯಿ ಜಲಾನಯನ ಪ್ರದೇಶದ ಕಳಸಾ ನಾಲೆ ಯೋಜನೆಯ ರೂ.995.30 ಕೋಟಿ ವೆಚ್ಚದ ವಿಸ್ತೃತ ಯೋಜನಾ ವರದಿ (ಡಿಪಿಆರ್ )ಗೆ 2023ರ ಮಾರ್ಚ್ ನಲ್ಲಿಯೇ ಅನುಮೋದನೆ ನೀಡಲಾಗಿದೆ. ಈ ಯೋಜನೆಗೆ ಅಗತ್ಯವಿರುವ ಭೂಮಿಯಲ್ಲಿ 26,925 ಹೆಕ್ಟೇರ್ ಅರಣ್ಯಪ್ರದೇಶದ ಸ್ವಾಧೀನ ಪ್ರಕ್ರಿಯೆ ಗೋವಾ ರಾಜ್ಯದ ಆಕ್ಷೇಪದ ಕಾರಣದಿಂದಾಗಿ ಕುಂಟುತ್ತಾ ಸಾಗಿದೆ. ಪ್ರಸಕ್ತ ಈ ಪ್ರಕ್ರಿಯೆ ರಾಷ್ಟ್ರೀಯ ವನ್ಯಜೀವಿ ಮಂಡಳಿ (ಎನ್ ಬಿಡಬ್ಯುಎಲ್ ) ಮತ್ತು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ ಟಿಸಿಎ)ದ ಪರಿಶೀಲನೆಯಲ್ಲಿದೆ. ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರ ಅನುಮೋದನೆ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟೀಕರಣ ನೀಡಿರುವ ಕಾರಣ ಶೀಘ್ರವಾಗಿ ಈ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕಾಗಿದೆ.

ಬಂಡೂರಿ ನಾಲೆ ತಿರುವು ಯೋಜನೆಗೆ ಅಗತ್ಯವಿರುವ 28 ಹೆಕ್ಟೇರ್ ಅರಣ್ಯಗ ಪ್ರದೇಶದ ಸ್ವಾಧೀನಕ್ಕಾಗಿ 2024ರ ಆಗಸ್ಟ್ ನಲ್ಲೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಬೇಡಿಕೆಗೆ ಸಂಬಂಧಿಸಿದ ಇತರ ಪ್ರಕ್ರಿಯೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣಗೊಳಿಸಲಾಗಿದ್ದು ಈ ನದಿ ತಿರುವು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡುವುದಷ್ಟೇ ಬಾಕಿ ಉಳಿದಿದೆ.

ಕೃಷ್ಣಾ ಜಲವಿವಾದ ನ್ಯಾಯಮಂಡಳಿ ಕರ್ನಾಟಕಕ್ಕೆ 173 ಟಿಎಂಸಿ ನೀರಿನ ಪಾಲನ್ನು ನೀಡಿ 2010ರಲ್ಲಿಯೇ ಐತೀರ್ಪು ನೀಡಿದೆ. ಈ ನೀರಿನ ಪಾಲಿನಲ್ಲಿ 130 ಟಿಎಂಸಿಯನ್ನು ಬಳಸಿಕೊಂಡು ಉತ್ತರ ಕರ್ನಾಟಕದ ಏಳು ಜಿಲ್ಲೆಗಳಿಗೆ ನೀರುಣಿಸುವ ರೂ.51,148 ಸಾವಿರ ವೆಚ್ಚದ ಮೂರನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಸಿದ್ಧವಾಗಿದೆ. ಆದರೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಯಲ್ಲಿರುವ ಪ್ರತಿವಾದಿ ರಾಜ್ಯಗಳ ಆಕ್ಷೇಪಣಾ ಅರ್ಜಿಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರ ನ್ಯಾಯ ಮಂಡಳಿಯ ಐತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸಲು ನಿರಾಕರಿಸುತ್ತಾ ಬಂದಿದೆ. ಈ ಯೋಜನೆಯ ಅನಿವಾರ್ಯವನ್ನು ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಿಕೊಟ್ಟು ಶೀಘ್ರವಾಗಿ ಐ ತೀರ್ಪನ್ನು ಗೆಝೆಟ್ ನಲ್ಲಿ ಪ್ರಕಟಿಸಿದರೆ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕೆಂಬ ಪ್ರಸ್ತಾವವನ್ನು ಸಲ್ಲಿಸಲು ಅನುಕೂಲವಾಗುತ್ತದೆ.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದರೆ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆಯ ಬರಪೀಡಿತ ಪ್ರದೇಶಗಳಿಗೆ ವರದಾನವಾಗಲಿದೆ. ಈ ಘೋಷಣೆಯ ಪ್ರಸ್ತಾವಕ್ಕೆ ಸಾರ್ವಜನಿಕ ಹೂಡಿಕೆ ಸಮಿತಿ ಈಗಾಗಲೇ ಅಂಗೀಕಾರ ನೀಡಿದೆ. ಆದರೆ ಕೇಂದ್ರ ಸರಕಾರ ಮೀನಾಮೇಷ ಎಣಿಸುತ್ತಾ ಕೂತಿದೆ.

ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಪೂರೈಕೆ ಮತ್ತು 400 ಮೆಗಾವಾಟ್ ವಿದ್ಯುತ್ ಉತ್ಪಾದನೆಗಾಗಿಯೇ ಮೇಕೆದಾಟು ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆಯ ವಿವರಗಳೆಲ್ಲ ನಿಮಗೆ ಬಾಯಿಪಾಠದಲ್ಲಿರಬಹುದು. ಈ ಯೋಜನೆಗೆ ದೇವೇಗೌಡರು ಕೇಂದ್ರ ಸರಕಾರದಿಂದ ಅನುಮತಿ ದೊರಕಿಸಿಕೊಟ್ಟರೆ ಬೆಂಗಳೂರು ನಿವಾಸಿಗಳು ಸದಾ ನಿಮಗೆ ಋಣಿಯಾಗಿರುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಕೃಷ್ಣಾ ಮತ್ತು ಕಾವೇರಿ ನದಿಗಳ ಜೋಡಣೆಯ ನೀರಾವರಿ ಯೋಜನೆಯ ಬಗ್ಗೆ ನಿಮ್ಮ ಕಳಕಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ. ಈ ವಿಷಯದಲ್ಲಿ ನೀವು ನಡೆಸುವ ಹೋರಾಟಕ್ಕೆ ನಾನು ಮತ್ತು ಡಿ.ಕೆ.ಶಿವಕುಮಾರ್ ಮಾತ್ರವಲ್ಲ ಸಮಸ್ತ ಕರ್ನಾಟಕ ನಿಮ್ಮ ಜೊತೆ ಇರುತ್ತದೆ. ಆದರೆ ಹೊಸ ನೀರಾವರಿ ಯೋಜನೆಗಳನ್ನು ಪ್ರಾರಂಭಿಸುವ ಮೊದಲು ಅಪೂರ್ಣ ಸ್ಥಿತಿಯಲ್ಲಿರುವ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ನಿಮ್ಮ ಸಹಕಾರ ಇರಲಿ ಎಂದು ಮನವಿ ಮಾಡಿಕೊಳ್ಳು್ತ್ತಿದ್ದೇನೆ.

ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಸರಮಾಲೆಯನ್ನು ಸದ್ಯ ನೀರಾವರಿ ಕ್ಷೇತ್ರಕ್ಕಷ್ಟೇ ಸೀಮಿತಗೊಳಿಸುತ್ತಿದ್ದೇನೆ. ಇನ್ನು ತೆರಿಗೆ ಹಂಚಿಕೆ, ಪ್ರಕೃತಿ ವಿಕೋಪ ಪರಿಹಾರ, ಕುಡಿಯುವ ನೀರು ಪೂರೈಕೆ, ರೈಲ್ವೆ ಯೋಜನೆಗಳ ವಿಚಾರದಲ್ಲಿಯೂ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕವನ್ನು ಶತ್ರು ರಾಜ್ಯದಂತೆ ನಡೆಸಿಕೊಳ್ಳುತ್ತಿದೆ. ಈ ವಿಚಾರಗಳು ಕೂಡಾ ನಿಮಗೆ ಗೊತ್ತಿರುವುದರಿಂದ ಸಂಸತ್ ನಲ್ಲಿ ಈ ಬಗ್ಗೆ ನೀವು ದನಿ ಎತ್ತುತ್ತೀರಿ ಎಂದು ರಾಜ್ಯದ ಜನರು ನಿರೀಕ್ಷಿಸಿದ್ದರು.

ಕೇಂದ್ರದಲ್ಲಿ ಯಾವ ಪಕ್ಷದ ಸರಕಾರ ಇದ್ದರೂ ನೀವು ಮುಲಾಜಿಗೆ ಬೀಳದೆ ಕರ್ನಾಟಕದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ದನಿ ಎತ್ತುತ್ತಾ ಬಂದವರು. ಆ ಮುತ್ಸದ್ದಿ ದೇವೇಗೌಡರನ್ನು ಕಾಣಲು ಕನ್ನಡಿಗರು ಬಯಸುತ್ತಿದ್ದಾರೆ. ಆದರೆ ಈಗಿನ ದೇವೇಗೌಡರು ಬಿಜೆಪಿ ಮತ್ತು ನರೇಂದ್ರ ಮೋದಿಯವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ.

ದೈಹಿಕವಾಗಿ ನೀವು ಸ್ವಲ್ಪ ಕುಗ್ಗಿದಂತೆ ಕಂಡರೂ ಮಾನಸಿಕವಾಗಿ ನೀವಿನ್ನೂ ದೃಢವಾಗಿದ್ದೀರಿ. ದಯವಿಟ್ಟು ಈಗಲಾದರೂ ಪಕ್ಷ ರಾಜಕಾರಣವನ್ನು ಮೀರಿ ಒಬ್ಬ ಮುತ್ಸದ್ದಿ ನಾಯಕನ ರೀತಿಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗೆ ಮುಂದಾಗಬೇಕೆಂದು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಈ ನಿಟ್ಟಿನಲ್ಲಿ ನೀವು ಮಾಡುವ ಪ್ರಯತ್ನಕ್ಕೆ ನಮ್ಮ ಸರಕಾರದ ಸಂಪೂರ್ಣ ಬೆಂಬಲ ಇದೆ. ಏಳು ಕೋಟಿ ಕನ್ನಡಿಗರೂ ನಿಮ್ಮ ಜೊತೆಯಲ್ಲಿ ಇರುತ್ತಾರೆ ಎಂಬ ಭರವಸೆಯೂ ನನಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X