ಜೆಡಿಎಸ್ ಪಕ್ಷದ ಮುಖ್ಯ ಸಚೇತಕರಾಗಿ ಹರೀಶ್ ಗೌಡ ನೇಮಕ

ಬೆಂಗಳೂರು : ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ಗೌಡ ಅವರನ್ನು ಜೆಡಿಎಸ್ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ.
ಈ ಕುರಿತು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ಬಾಬು ಅವರು ಜಿ.ಡಿ.ಹರೀಶ್ಗೌಡ ಅವರನ್ನು ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಿರುವ ಬಗ್ಗೆ ವಿ ಪತ್ರ ಬರೆದಿದ್ದಾರೆ. ನಮ್ಮ ಪಕ್ಷದ ಮುಖ್ಯ ಸಚೇತಕರಿಗೆ ಸೂಕ್ತ ಸ್ಥಾನಮಾನದ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಲು ಅವರು ಪತ್ರದಲ್ಲಿ ಕೋರಿದ್ದಾರೆ.
Next Story





