Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಾಲ್ಕು ಹಂತದಲ್ಲಿ ಕುಂದು-ಕೊರತೆ ಕೋಶ...

ನಾಲ್ಕು ಹಂತದಲ್ಲಿ ಕುಂದು-ಕೊರತೆ ಕೋಶ ರಚಿಸಿ ಅಧಿಸೂಚನೆ ಹೊರಡಿಸಿದ ಶಾಲಾ ಶಿಕ್ಷಣ ಇಲಾಖೆ

ವಾರ್ತಾಭಾರತಿವಾರ್ತಾಭಾರತಿ9 March 2025 8:56 PM IST
share
ನಾಲ್ಕು ಹಂತದಲ್ಲಿ ಕುಂದು-ಕೊರತೆ ಕೋಶ ರಚಿಸಿ ಅಧಿಸೂಚನೆ ಹೊರಡಿಸಿದ ಶಾಲಾ ಶಿಕ್ಷಣ ಇಲಾಖೆ

ಬೆಂಗಳೂರು : ಅನಗತ್ಯವಾಗಿ ವಿವಿಧ ನ್ಯಾಯಾಲಯಗಳಲ್ಲಿ ದಾವೆ ದಾಖಲಿಸುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯು ನಾಲ್ಕು ಹಂತದಲ್ಲಿ ಕುಂದು ಕೊರತೆ ಕೋಶವನ್ನು ರಚನೆ ಮಾಡಲಾಗಿದ್ದು, ಮನವಿ, ದೂರು ಮತ್ತು ಅರ್ಜಿಗಳನ್ನು ಇಲಾಖೆಯ ವಿವಿಧ ಹಂತಗಳಲ್ಲಿಯೇ ಇತ್ಯರ್ಥಪಡಿಸುವಂತೆ ಇಲಾಖೆಯ ಆಯುಕ್ತ ಡಾ. ಕೆ.ವಿ. ತ್ರಿಲೋಕ್ ಚಂದ್ರ ಸೂಚನೆ ನೀಡಿದ್ದಾರೆ.

ಈ ಕುರಿತು ಅಧಿಸೂಚನೆ ಹೊರಡಿಸಿರುವ ಅವರು, ಇಲಾಖೆಯ ಕ್ರಮಗಳಿಂದ ಬಾಧಿತರಾಗುವ ಇಲಾಖೆಯ ನೌಕರರಿಗೆ ಹಾಗೂ ಖಾಸಗಿ ಅನುದಾನಿತ, ಅನುದಾನರಹಿತ ಶಾಲೆಗಳ ನೌಕರರು ಹಾಗೂ ಶಾಲಾ ಆಡಳಿತ ಮಂಡಳಿಗಳು ಲಿಖಿತ ರೂಪದಲ್ಲಿ ಸಮರ್ಥನೀಯ ದಾಖಲೆಗಳೊಂದಿಗೆ ತಮ್ಮ ಅಹವಾಲುಗಳನ್ನು ಇಲಾಖೆಯ ಕುಂದು ಕೊರತೆ ಕೋಶಕ್ಕೆ ಸಲ್ಲಿಸಿ ಪರಿಹಾರ ಕಂಡುಕೊಳ್ಳುವುದು ಸೂಕ್ತವಾಗಿದೆ ಎಂದಿದ್ದಾರೆ.

ತಾಲ್ಲೂಕು ಕುಂದು ಕೊರತೆ ಕೋಶ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಛೇರಿಯ ವ್ಯವಸ್ಥಾಪಕರು ಹಾಗೂ ಒರ್ವ ಅಧೀಕ್ಷಕರನ್ನು ಒಳಗೊಂಡಂತೆ ರಚಿಸಲಾಗುವ ತಾಲ್ಲೂಕು ಹಂತದ ಕುಂದು ಕೊರತೆ ಕೋಶವು ಮನವಿ/ಅರ್ಜಿ ಸ್ವೀಕೃತವಾದ 7 ದಿನಗಳೊಳಗೆ ನಿಯಮಾನುಸಾರ ಪರಿಶೀಲಿಸಿ ಮನವಿ/ ಅರ್ಜಿಯನ್ನು ಇತ್ಯರ್ಥಪಡಿಸಿ ಮನವಿದಾರರಿಗೆ ಸೂಕ್ತ ಸವಿವರವಾದ ಹಿಂಬರಹ ನೀಡಲು ಕ್ರಮವಹಿಸಬೇಕು. ಸಂಬಂಧಿಸಿದ ಬಾಧಿತರು ತಾಲ್ಲೂಕು ಹಂತದಲ್ಲಿ ತೆಗೆದುಕೊಂಡ ಕ್ರಮದ ಬಗ್ಗೆ ಸಹಮತಿ ಇಲ್ಲದಿದ್ದಲ್ಲಿ ಜಿಲ್ಲಾ ಕುಂದು ಕೊರತೆ ಕೋಶವನ್ನು ಲಿಖಿತ ಮೇಲ್ಮನವಿಯೊಂದಿಗೆ ಸಂಪರ್ಕಿಸಬಹುದು.

ಜಿಲ್ಲಾ ಕುಂದು ಕೊರತೆ ಕೋಶ: ಇಲಾಖೆಯ ಜಿಲ್ಲಾ ಉಪನಿರ್ದೇಶಕ(ಆಡಳಿತ) ಅಧ್ಯಕ್ಷತೆಯಲ್ಲಿ ಕಛೇರಿಯ ಸಹಾಯಕರು ಹಾಗೂ ಸಂಬಂಧಿಸಿದ ವಿಭಾಗದ ಅಧೀಕ್ಷಕರನ್ನು ಒಳಗೊಂಡಂತೆ ರಚಿಸಲಾಗುವ ಜಿಲ್ಲಾ ಹಂತದ ಕುಂದು ಕೊರತೆ ಕೋಶವು ಮನವಿ ಸ್ವೀಕೃತವಾದ 7 ದಿನಗಳೊಳಗೆ ನಿಯಮಾನುಸಾರ ಮನವಿ/ಅರ್ಜಿಯನ್ನು ಇತ್ಯರ್ಥಪಡಿಸಲು ಕ್ರಮವಹಿಸಿ ಮನವಿದಾರರಿಗೆ ಸೂಕ್ತ ಹಿಂಬರಹ ನೀಡಲು ಕ್ರಮವಹಿಸಬೇಕು. ಬಾಧಿತರು ಜಿಲ್ಲಾ ಹಂತದಲ್ಲಿ ತೆಗೆದುಕೊಂಡ ಕ್ರಮದ ಬಗ್ಗೆ ಸಹಮತಿ ಇಲ್ಲದಿದ್ದಲ್ಲಿ ವಿಭಾಗೀಯ ಕುಂದು ಕೊರತೆ ಕೋಶವನ್ನು ಲಿಖಿತ ಮೇಲ್ಮನವಿಯೊಂದಿಗೆ ಸಂಪರ್ಕಿಸಬಹುದು.

ವಿಭಾಗೀಯ ಕುಂದು ಕೊರತೆ ಕೋಶ: ವಿಭಾಗೀಯ ಸಹ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಕಛೇರಿಯ ಸಹಾಯಕ ನಿರ್ದೇಶಕರು ಹಾಗೂ ಸಂಬಂಧಿಸಿದ ಅಧೀಕ್ಷಕರನ್ನು ಒಳಗೊಂಡಂತೆ ರಚಿಸಲಾಗುವ ವಿಭಾಗೀಯ ಕುಂದು ಕೊರತೆ ಕೋಶವು ಮನವಿ ಸ್ವೀಕೃತವಾದ 7 ದಿನಗಳೊಳಗೆ ನಿಯಮಾನುಸಾರ ಮನವಿ/ಅರ್ಜಿಯನ್ನು ಇತ್ಯರ್ಥಪಡಿಸಲು ಕ್ರಮವಹಿಸಿ ಮನವಿದಾರರಿಗೆ ಸೂಕ್ತ ಹಿಂಬರಹ ನೀಡಲು ಕ್ರಮವಹಿಸಬೇಕು. ಬಾಧಿತರು ವಿಭಾಗೀಯ ಸಹ ನಿರ್ದೇಶಕರ ಕ್ರಮದ ಬಗ್ಗೆ ಸಹಮತಿ ಇಲ್ಲದಿದ್ದಲ್ಲಿ ಆಯುಕ್ತಾಲಯದ ಕುಂದು ಕೊರತೆ ಕೋಶಕ್ಕೆ ಲಿಖಿತ ಪುನರ್ ಪರಿಶೀಲನಾ ಮೇಲ್ಮನವಿ ಸಲ್ಲಿಸಬಹುದು.

ಆಯುಕ್ತಾಲಯದ ಕುಂದು ಕೊರತೆ ಕೋಶ: ಆಯುಕ್ತಾಲಯದ ವ್ಯಾಪ್ತಿಯ ಜಂಟಿ ನಿರ್ದೇಶಕರು / ನಿರ್ದೇಶಕರ ಅಧ್ಯಕ್ಷತೆಯಲ್ಲಿ ಕಛೇರಿಯ ಉಪ ನಿರ್ದೇಶಕರು ಹಾಗೂ ಸಂಬಂಧಿಸಿದ ವಿಭಾಗದ ಹಿರಿಯ ಸಹಾಯಕ ನಿರ್ದೇಶಕರನ್ನು / ಸಹಾಯಕ ನಿರ್ದೇಶಕರನ್ನು ಒಳಗೊಂಡಂತೆ ಸಂದರ್ಭಾನುಸಾರ ರಚಿಸಲಾಗುವ ಕುಂದು ಕೊರತೆ ಕೋಶವು ಮನವಿ ಸ್ವೀಕೃತವಾದ 30 ದಿನಗಳೊಳಗೆ ಆದ್ಯತೆಯ ಮೇರೆಗೆ ಇಲಾಖೆಯ ನಿಯಮಗಳ ಚೌಕಟ್ಟಿನಲ್ಲಿ ಮತ್ತು ಸರಕಾರದ ಮಾರ್ಗಸೂಚಿಗಳು ಹಾಗೂ ಚಾಲ್ತಿಯಲ್ಲಿರುವ ನಿಯಮಗಳನ್ನು ಆಧರಸಿ ಸೂಕ್ತ ಆದೇಶ ಹೊರಡಿಸಬೇಕು.

ಶಿಕ್ಷಣ ಇಲಾಖೆಗೆ ಸಂಬಂಧಿಸಿ ವಿವಿಧ ನ್ಯಾಯಾಲಯಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಪರಿಶೀಲಿಸಲಾಗಿದ್ದು, ಸುಮಾರು 568 ಪ್ರಕರಣಗಳು ಬಾಕಿಯಿದೆ. ಸುಮಾರು 1,131 ಪ್ರಕರಣಗಳಲ್ಲಿ ತೀರ್ಪು ಸ್ವೀಕೃತವಾಗಿದೆ. ಹೀಗಾಗಿ ವಿವಿಧ ಹಂತದ ನ್ಯಾಯಾಲಯ ಪ್ರಕರಣಗಳನ್ನು ಕಾಲಮಿತಿಯೊಳಗೆ ನಿರ್ವಹಿಸಲು, ಇತ್ಯರ್ಥಪಡಿಸಲು ಇಲಾಖೆ ಜಿಲ್ಲಾ ಉಪನಿರ್ದೇಶಕರಿಗೆ(ಆಡಳಿತ) ಇಲಾಕೆಯ ಆಯುಕ್ತ ಡಾ. ಕೆ.ವಿ. ತ್ರಿಲೋಕ್ ಚಂದ್ರ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.

ನ್ಯಾಯಾಲಯ ಪ್ರಕರಣಗಳ ಸಮರ್ಪಕ ನಿರ್ವಹಣೆ ಸಂಬಂಧ ಜಿಲ್ಲಾ ಉಪನಿರ್ದೇಶಕ(ಆಡಳಿತ) ಕಛೇರಿಯಲ್ಲಿನ ಸಹಾಯಕರನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಬೇಕು. ನೋಡಲ್ ಅಧಿಕಾರಿಗಳು ಚಾಲ್ತಿಯಲ್ಲಿರುವ ಇಲಾಖೆಯ ಕಾಯ್ದೆ, ನಿಯಮಗಳ ಚೌಕಟ್ಟಿನಲ್ಲಿ ಉತ್ತರಗಳನ್ನು ಸಿದ್ದಪಡಿಸಿ, ವಕೀಲರ ಸಮನ್ವಯದೊಂದಿಗೆ ಪ್ರಕರಣಕ್ಕೆ ಅಗತ್ಯವಿರುವ ಕ್ರಮಗಳನ್ನು ನಿರ್ವಹಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X