Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕ್ಷೇತ್ರ ಮರುವಿಂಗಡಣೆಯನ್ನು ಶಾಶ್ವತವಾಗಿ...

ಕ್ಷೇತ್ರ ಮರುವಿಂಗಡಣೆಯನ್ನು ಶಾಶ್ವತವಾಗಿ ರದ್ದುಗೊಳಿಸಬೇಕು : ಜಾಗೃತ ಕರ್ನಾಟಕ

ವಾರ್ತಾಭಾರತಿವಾರ್ತಾಭಾರತಿ3 April 2025 8:26 PM IST
share
ಕ್ಷೇತ್ರ ಮರುವಿಂಗಡಣೆಯನ್ನು ಶಾಶ್ವತವಾಗಿ ರದ್ದುಗೊಳಿಸಬೇಕು : ಜಾಗೃತ ಕರ್ನಾಟಕ

ಬೆಂಗಳೂರು : ಸಂವಿಧಾನವನ್ನು ಬದಲಿಸಲು ಅಗತ್ಯವಿರುವ ಮೂರನೇ ಎರಡು ಬಹುಮತವನ್ನು ಪಡೆದುಕೊಳ್ಳುವುದಕ್ಕಾಗಿಯೇ, ಬಿಜೆಪಿ ಪಕ್ಷವು ‘ಕ್ಷೇತ್ರ ಮರುವಿಂಗಡಣೆ’ ಮಾಡುವುದಕ್ಕೆ ಹೊರಟಿರುವುದು. ಹೀಗಾಗಿ ಈ ಲೋಕಸಭಾ ಕ್ಷೇತ್ರಗಳ ದೇಶವ್ಯಾಪಿ ಕ್ಷೇತ್ರ ಮರುವಿಂಗಡಣೆಯನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಜಾಗೃತ ಕರ್ನಾಟಕ ಆಗ್ರಹಿಸಿದೆ.

ಗುರುವಾರ ನಗರದ ಗಾಂಧಿ ಭವನದಲ್ಲಿ ಜಾಗೃತ ಕರ್ನಾಟಕದ ವತಿಯಿಂದ ಆಯೋಜಿಸಿದ್ದ ದುಂಡುಮೇಜಿನ ಸಭೆಯಲ್ಲಿ ತೆಗೆದುಕೊಂಡು ತೀರ್ಮಾಣಗಳನ್ನು ತಿಳಿಸಿದ ಸಂಚಾಲಕ ಮುತ್ತುರಾಜು, ಕ್ಷೇತ್ರ ಮರುವಿಂಗಡಣೆಯನ್ನು ಎರಡು ಬಾರಿ ಬೇರೆ ಬೇರೆ ರಾಜಕೀಯ ಪಕ್ಷಗಳ ನೇತೃತ್ವದ ಕೇಂದ್ರ ಸರಕಾರಗಳು 25 ವರ್ಷಗಳ ಕಾಲ ಮುಂದೂಡಿದ್ದವು. ಈ ಅಸಮಾನ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳು ಹಾಗೂ ಇನ್ನಿತರ ಕೆಲವು ರಾಜ್ಯಗಳ ಪ್ರಾತಿನಿಧ್ಯ ಗಣನೀಯವಾಗಿ ಕಡಿಮಯಾಗಲಿದೆ ಎಂದು ಹೇಳಿದರು.

ಕ್ಷೇತ್ರ ಮರುವಿಂಗಡಣೆಯು ದೇಶದ ಒಕ್ಕೂಟ ವ್ಯವಸ್ಥೆಯ ಸ್ವರೂಪವನ್ನೇ ಬದಲಿಸಲಿದೆ. ದೇಶದಲ್ಲಿ ಹತ್ತು ಹಲವು ರೀತಿಯ ಕ್ಷೋಭೆಗೆ ಕಾರಣವಾಗಲಿದೆ. ಒಕ್ಕೂಟ ತತ್ವವು ಈ ದೇಶದ ಹುಟ್ಟಿಗೆ ಕಾರಣವಾದ ಸ್ವಾತಂತ್ರ್ಯ ಆಂದೋಲನ ಮತ್ತು ಸಂವಿಧಾನದ ಮೂಲ ಆಶಯಗಳ ಭಾಗ. ಅದರಲ್ಲಿ ರಾಜಿ ಮಾಡಿಕೊಳ್ಳುವ ಯಾವುದೇ ಸರಕಾರ ಅಥವಾ ಪಕ್ಷದ ಧೋರಣೆಯು ದೇಶದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಅಪಾಯವಿದೆ. ಸಂವಿಧಾನದ ಮೂಲ ಆಶಯಗಳ ಭಾಗವಾಗಿರುವ ಒಕ್ಕೂಟ ತತ್ವದ ವಿರುದ್ಧ ಈ ಮರುವಿಂಗಡಣೆಯ ಪ್ರಸ್ತಾಪ ಇದೆ ಎಂದು ಮುತ್ತುರಾಜು ತಿಳಿಸಿದರು.

ಕರ್ನಾಟಕದಲ್ಲಿ ಅಸ್ತಿತ್ವದಲ್ಲಿರುವ ಎಲ್ಲ ರಾಜಕೀಯ ಪಕ್ಷಗಳು ಕ್ಷೇತ್ರ ಮರುವಿಂಗಡಣೆಯ ಕುರಿತು ಇರುವ ತಮ್ಮ ನಿಲುವನ್ನು ಬಹಿರಂಗವಾಗಿ ಸ್ಪಷ್ಟಪಡಿಸಬೇಕು. ರಾಜ್ಯದ ಜನತೆಯು ಈ ವಿಚಾರದಲ್ಲಿ ಒಗ್ಗಟ್ಟಾಗಿ ಹೋರಾಡುವ ಅಗತ್ಯವಿದೆ. ಕ್ಷೇತ್ರ ಮರುವಿಂಗಡಣೆಯ ಮಾಹಿತಿ ಮತ್ತು ಸೀಟುಗಳನ್ನು ಹೆಚ್ಚಿಸಿ, ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯದ ಪ್ರಮಾಣ ತಗ್ಗಿಸುವ ಹುನ್ನಾರ ಎಲ್ಲರಿಗೂ ತಿಳಿಸುವ ಅಗತ್ಯವೂ ಇದೆ ಎಂದರು.

ಮೊದಲ ಹಂತದಲ್ಲಿ ರಾಜ್ಯದ ಜನಪ್ರತಿನಿಧಿಗಳು, ಅದರಲ್ಲೂ ಲೋಕಸಭಾ ಸದಸ್ಯರು, ಸಾಹಿತಿಗಳು, ಹೋರಾಟಗಾರರು, ಧಾರ್ಮಿಕ ಮುಖಂಡರು, ಸಮುದಾಯಗಳ ಮುಖಂಡರು ಎಲ್ಲರೂ ಕೇಂದ್ರ ಸರಕಾರಕ್ಕೆ ಪತ್ರ ಬರೆದು ತಮ್ಮ ವಿರೋಧವನ್ನು ದಾಖಲಿಸಬೇಕು. ಅದಕ್ಕಾಗಿ ಒಂದು ಮನವಿ ಪತ್ರದ ಮುಖಾಂತರ ಅಂಥವರನ್ನು ಭೇಟಿ ಮಾಡಿ ಪತ್ರ ಬರೆಯಲು ಒತ್ತಾಯಿಸಲಿದ್ದೇವೆ. ರಾಜ್ಯದ ಎಲ್ಲೆಡೆ ವಿಧಾನಸಭಾ ಕ್ಷೇತ್ರವಾರು ಕಾರ್ಯಕ್ರಮಗಳನ್ನು ಸಂಘಟಿಸಲೂ ಸಮಾನ ಮನಸ್ಕರು ಒಗ್ಗೂಡಿ ಪ್ರಯತ್ನ ಮಾಡಲಿದ್ದೇವೆ ಎಂದು ಮುತ್ತುರಾಜು ಮಾಹಿತಿ ನೀಡಿದರು.

ದುಂಡು ಮೇಜಿನ ಸಭೆಯಲ್ಲಿ ದಲಿತ ಮುಖಂಡ ಬಸವರಾಜ್ ಕೌತಾಳ್, ಡಾ.ಸುನೀಲ್ ಕುಮಾರ್ ಡಿ.ಆರ್., ಪತ್ರಕರ್ತರಾದ ಡಿ.ಉಮಾಪತಿ, ಜಾಗೃತ ಕರ್ನಾಟಕದ ಡಾ.ವಾಸು ಎಚ್.ವಿ., ಬಿ.ಸಿ.ಬಸವರಾಜು, ರಾಜಶೇಖರ್ ಅಕ್ಕಿ, ಸುಹೇಲ್ ಅಹಮದ್, ಸ್ವಾತಿ, ಸಾಮಾಜಿಕ ಹೋರಾಟಗಾರರಾದ ನಗರಗೆರೆ ರಮೇಶ್, ಆದರ್ಶ್ ಅಯ್ಯರ್, ರಮೇಶ್ ಬೆಲ್ಲಂಕೊಂಡ, ವಕೀಲ ಎಚ್.ಮಹದೇವಸ್ವಾಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X