ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ : ಮಹೇಶ್ವರ್ ರಾವ್

ಮಹೇಶ್ವರ್ ರಾವ್
ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶನಿವಾರ ವಚ್ರ್ಯುವಲ್ ಸಭೆಯಲ್ಲಿ ಮಾತನಾಡಿದರ ಅವರು, ನಗರದಲ್ಲಿ ಈಗಾಗಲೇ ಸಮೀಕ್ಷಾ ಕಾರ್ಯ ಆರಂಭವಾಗಿದ್ದು, ಆಯಾ ವಲಯ ವ್ಯಾಪ್ತಿಯಲ್ಲಿ ಅದಕ್ಕೆ ವೇಗ ನೀಡಿ ಶೀಘ್ರಗತಿಯಲ್ಲಿ ಪೂರ್ಣಗೊಳಿಸಬೇಕು ಎಂದರು.
ಪರಿಶಿಷ್ಟ ಜಾತಿ, ಉಪ ಜಾತಿ ಸಮಗ್ರ ಸಮೀಕ್ಷೆಗೆ ಒಳಪಡುವವರು ಆಧಾರ್/ಪಡಿತರ ಚೀಟಿ ನೀಡಿ ನೋಂದಣಿ ಮಾಡಿಕೊಂಡ ನಂತರ ಅವರ ಮತ್ತು ಕುಟುಂಬದವರ ವೈಯಕ್ತಿಕ ವಿವರ ಒದಗಿಸಬೇಕಾಗುತ್ತದೆ. ಕುಟುಂಬದ ಸದಸ್ಯರ ವಿವರ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ, ಸರಕಾರಿ ಸವಲತ್ತುಗಳು, ಮೂಲಸೌಕರ್ಯಗಳು ಸೇರಿ ಸಮಗ್ರ ಮಾಹಿತಿಯನ್ನು ಒದಗಿಸಬೇಕಿರುತ್ತದೆ ಎಂದು ಅವರು ತಿಳಿಸಿದರು.
ಹಾಗೆಯೇ ನಗರದ 28 ವಿಧಾನ ಸಭಾಕ್ಷೇತ್ರಗಳು ಬರಲಿದ್ದು, ಸಮೀಕ್ಷೆಯನ್ನು ನಡೆಸಲು ಸುಮಾರು 7,856 ಮಂದಿಯನ್ನು ಗಣತಿದಾರರಗಿ ನೇಮಕ ಮಾಡಲಾಗಿದೆ. ನಗರದಲ್ಲಿ ಈಗಾಗಲೇ 13,796 ಪರಿಶಿಷ್ಟ ಜಾತಿಯ ಮನೆಗಳಿಗೆ ಹಾಗೂ 3,99,200 ಪರಿಶಿಷ್ಟ ಜಾತಿಯಲ್ಲದ ಮನೆಗಳಿಗೆ ಭೇಟಿ ನೀಡಿ ದತ್ತಾಂಶ ಸಂಗ್ರಹಿಸಳಾಗಿದೆ ಎಂದು ಅವರು ಹೇಳಿದರು.
ಬಿಬಿಎಂಪಿಗೆ ಪ್ರತ್ಯೇಕ ಸರ್ವರ್ ವ್ಯವಸ್ಥೆ: ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ 28 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಪ್ರತ್ಯೇಖ ಸರ್ವರ್ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.
-ಮಹೇಶ್ವರ್ ರಾವ್, ಬಿಬಿಎಂಪಿ ಮುಖ್ಯ ಆಯುಕ್ತ