Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಾರ್ವಜನಿಕರಿಗೆ ಪೊಲೀಸ್ ಸಂಬಂಧಿತ...

ಸಾರ್ವಜನಿಕರಿಗೆ ಪೊಲೀಸ್ ಸಂಬಂಧಿತ ವಿಚಾರಗಳ ಬಗ್ಗೆ ಮಾರ್ಗದರ್ಶನ ಅಗತ್ಯ : ವಝೀರ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ10 May 2025 11:57 PM IST
share
ಸಾರ್ವಜನಿಕರಿಗೆ ಪೊಲೀಸ್ ಸಂಬಂಧಿತ ವಿಚಾರಗಳ ಬಗ್ಗೆ ಮಾರ್ಗದರ್ಶನ ಅಗತ್ಯ : ವಝೀರ್ ಅಹ್ಮದ್

ಬೆಂಗಳೂರು : ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ಹೆಚ್ಚಿನ ಅರಿವು, ಸಲಹೆ, ಮಾರ್ಗದರ್ಶನ ಪಡೆದುಕೊಳ್ಳುವುದು ಅಗತ್ಯ. ಇದರಿಂದ, ಸಂಕಷ್ಟದ ಸಂದರ್ಭವನ್ನು ಸಮರ್ಥವಾಗಿ ಎದುರಿಸಲು ಸಹಕಾರಿಯಾಗುತ್ತದೆ ಎಂದು ನಿವೃತ್ತ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಮುಹಮ್ಮದ್ ವಝೀರ್ ಅಹ್ಮದ್ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ಇಂದಿರಾ ನಗರದ ಮಸ್ಜಿದೇ ಉಮ್ಮುಲ್ ಹಸ್ನೈನ್‌ನಲ್ಲಿ ಸಾರ್ವಜನಿಕರಿಗೆ ಪೊಲೀಸ್ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಲಹೆ, ಮಾರ್ಗದರ್ಶನ ನೀಡಲು ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಸೀದಿಯ ಅಧ್ಯಕ್ಷ ಅಬ್ದರ್ರಹ್ಮಾನ್ ಖಾನ್ ಉತ್ತಮ ಕೆಲಸ ಮಾಡುತ್ತಿದ್ದಾರೆ. ಪೊಲೀಸ್ ಸಂಬಂಧಿತ ವಿಚಾರಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಇಂದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭವಿಷ್ಯದ ದಿನಗಳಲ್ಲಿಯೂ ಈ ಕಾರ್ಯಕ್ರಮ ಮುಂದುವರಿಸಲಾಗುವುದು ಎಂದು ವಝೀರ್ ಅಹ್ಮದ್ ಹೇಳಿದರು.

ಯಾರಿಗಾದರೂ ಸಲಹೆ, ಸೂಚನೆಗಳು ಬೇಕಾದಲ್ಲಿ ಮಸೀದಿಯ ಕಚೇರಿಯಲ್ಲಿ ಅಂತಹವರ ಹೆಸರು, ದೂರವಾಣಿ ಸಂಖ್ಯೆ ಹಾಗೂ ಸಮಸ್ಯೆಯನ್ನು ಬರೆಸಿಕೊಳ್ಳುವಂತೆ ತಿಳಿಸಲಾಗಿದೆ. ಪ್ರತಿ ತಿಂಗಳು ಅಥವಾ 15 ದಿನಗಳಿಗೊಮ್ಮೆ ಈ ರೀತಿಯ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ. ಮಸೀದಿ ಆಡಳಿತ ಸಮಿತಿ ಮೂಲಕ ಒಂದು ಒಳ್ಳೆಯ ಪ್ರಯತ್ನ ಮಾಡಲಾಗಿದೆ. ಇದು ಬಡವರಿಗೆ ತುಂಬಾ ಅನುಕೂಲವಾಗಲಿದೆ. ಬೇರೆ ಮಸೀದಿಗಳಿಗೂ ಇದೊಂದು ಮಾದರಿ ಕಾರ್ಯಕ್ರಮ ಆಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಮಸೀದಿಯ ಅಧ್ಯಕ್ಷ ಅಬ್ದರ್ರಹ್ಮಾನ್ ಖಾನ್ ಮಾತನಾಡಿ, ನಮ್ಮ ಮಸೀದಿಯ ಮಾಜಿ ಅಧ್ಯಕ್ಷ ಝಿಯಾವುಲ್ಲಾ ಖಾನ್ ಅವರು ಸಮಾಜಕ್ಕೆ ಯಾವ ರೀತಿ ಸೇವೆ ಮಾಡಬೇಕು ಎಂದು ನಮಗೆ ಮಾದರಿ ನೀಡಿ ಹೋಗಿದ್ದಾರೆ. ಅವರ ಸೇವೆಯ ಹಾದಿಯನ್ನು ನಾವು ಮುನ್ನಡೆಸುತ್ತಿದ್ದೇವೆ. ನಿವೃತ್ತ ಎಡಿಜಿಪಿ ವಝೀರ್ ಅಹ್ಮದ್ ಅವರನ್ನು ಕರೆಸಿ ಸಾರ್ವಜನಿಕರಿಗೆ ಮಾರ್ಗದರ್ಶನ ನೀಡಲು ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.

ಜೊತೆಗೆ, ಲಂಡನ್‌ನಿಂದ ಎಫ್.ಆರ್.ಸಿ.ಎಸ್ ಪದವಿ ಪಡೆದಿರುವ ಓರ್ವ ಮಹಿಳಾ ವೈದ್ಯೆಯನ್ನು ಸಂಪರ್ಕಿಸಿ ಚರ್ಚೆ ನಡೆಸಿದ್ದೇವೆ. ಅವರು ಸಂಜೆ ವೇಳೆ ನಮ್ಮ ಮಸೀದಿಯ ಕಚೇರಿಯಲ್ಲಿ ಮಹಿಳೆಯರಿಗೆ ಉಚಿತವಾಗಿ ಆರೋಗ್ಯ ಸಂಬಂಧಿತ ಸಲಹೆಗಳನ್ನು ನೀಡಲಿದ್ದಾರೆ. ಮಸೀದಿ ಆವರಣವನ್ನು ಕೇವಲ ಪ್ರಾರ್ಥನೆಗೆ ಸೀಮಿತಗೊಳಿಸದೆ, ಜನ ಸಾಮಾನ್ಯರಿಗೆ ಸೇವೆ ಒದಗಿಸುವ ತಾಣವನ್ನಾಗಿ ಮಾಡುವ ಬಯಕೆ ಇದೆ ಎಂದು ಅಬ್ದರ್ರ ಹ್ಮಾನ್ ಖಾನ್ ಹೇಳಿದರು.

ಈ ಸಂದರ್ಭದಲ್ಲಿ ಮಸ್ಜಿದೇ ಉಮ್ಮುಲ್ ಹಸ್ನೈನ್‌ನ ಖಜಾಂಚಿ ಸುಹೇಲ್ ಲಾಲಾಮಿಯಾ, ಸದಸ್ಯ ಜಲಾಲುದ್ದೀನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X