Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮಾಜಿ ಪ್ರಧಾನಿ ದೇವೇಗೌಡರಿಗೆ ಜನ್ಮದಿನದ...

ಮಾಜಿ ಪ್ರಧಾನಿ ದೇವೇಗೌಡರಿಗೆ ಜನ್ಮದಿನದ ಸಂಭ್ರಮ | ಸಿಎಂ ಸಹಿತ ಗಣ್ಯರ ಶುಭ ಹಾರೈಕೆ

ವಾರ್ತಾಭಾರತಿವಾರ್ತಾಭಾರತಿ18 May 2025 6:04 PM IST
share
ಮಾಜಿ ಪ್ರಧಾನಿ ದೇವೇಗೌಡರಿಗೆ ಜನ್ಮದಿನದ ಸಂಭ್ರಮ | ಸಿಎಂ ಸಹಿತ ಗಣ್ಯರ ಶುಭ ಹಾರೈಕೆ

ಬೆಂಗಳೂರು : ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಎಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.

ರವಿವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ನಾಡಿನ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿಗಳು ಆದ ಎಚ್.ಡಿ.ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ಮತ್ತಷ್ಟು ಕಾಲ ತಮಗೆ ಉತ್ತಮ ಆರೋಗ್ಯ ಮತ್ತು ಆಯಸ್ಸನ್ನು ದೇವರು ಕರುಣಿಸಲೆಂದು ಹಾರೈಸುತ್ತೇನೆ’ ಎಂದು ಉಲ್ಲೇಖಿಸಿದ್ದಾರೆ.

ಪ್ರತಿಪಕ್ಷ ನಾಯಕ ಆರ್.ಅಶೋಕ್, ‘ದೇವೇಗೌಡರು ತಮ್ಮ ಸುಧೀರ್ಘ ರಾಜಕೀಯ ಅನುಭವ ಹಾಗೂ ಹೋರಾಟಗಳು, ಕ್ರಿಯಾಶೀಲತೆ ಎಲ್ಲರಿಗೂ ಮಾದರಿಯಾಗಿದೆ. ಭಗವಂತನು ತಮಗೆ ಉತ್ತಮ ಆಯುರಾರೋಗ್ಯ ಕರುಣಿಸಿ, ನಾಡಿನ ಅಭಿವೃದ್ಧಿಗೆ ಅತ್ಯಮೂಲ್ಯ ಮಾರ್ಗದರ್ಶನ ನೀಡುತ್ತಿರುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ‘ದೇವೇಗೌಡ ಅವರಿಗೆ 92ನೇ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಅವರ ದೀರ್ಘ ಸಾರ್ವಜನಿಕ ಸೇವೆಯಿಂದ ರೂಪುಗೊಂಡ ಅವರ ಅಪ್ರತಿಮ ಬುದ್ಧಿವಂತಿಕೆ ಮತ್ತು ಆಳವಾದ ದೃಷ್ಟಿಕೋನವನ್ನು ನಾವೆಲ್ಲರೂ ಗೌರವಿಸುತ್ತೇವೆ’ ಎಂದು ಹೇಳಿದ್ದಾರೆ.

‘ನನ್ನ ಶಕ್ತಿ, ನನ್ನ ಧೈರ್ಯ, ನನ್ನ ಸ್ಫೂರ್ತಿ ನನ್ನ ತಂದೆಯವರೇ ಆಗಿದ್ದಾರೆ. ಅವರ ಸಂಘರ್ಷದ ಹಾದಿ, ಸಾಧನೆ, ಸೇವಾ ತತ್ಪರತೆ ನನ್ನ ಮೇಲೆ ಅಗಾಧ ಪ್ರಭಾವ ಬೀರಿದೆ. ಇಡೀ ಬದುಕನ್ನು ರಾಷ್ಟ್ರಸೇವೆಗೆ ಸಮರ್ಪಿಸಿರುವ ಈ ಮಹಾನ್ ನಾಯಕನ ಕುಡಿಯಾಗಿ ಹುಟ್ಟಿರುವುದು ನನ್ನ ಸುಕೃತ. ಆ ಭಗವಂತ ನನ್ನ ತಂದೆಯವರಿಗೆ ಇನ್ನೂ ಹೆಚ್ಚಿನ ಆಯುರಾಗ್ಯ ಕರುಣಿಸಲಿ. ಸುದೀರ್ಘ ಕಾಲ ನಮಗೆಲ್ಲಾ ಮಾರ್ಗದರ್ಶನ ಮಾಡಿ, ಜನಸೇವೆ ಮಾಡುವ ಚೈತನ್ಯ ನೀಡಲಿ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.

ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ದೇವೇಗೌಡರು ತಮ್ಮ ಸುಧೀರ್ಘ ರಾಜಕೀಯ ಅನುಭವ ಹಾಗೂ ಹೋರಾಟಗಳು ನಾಡಿನ ಹಾಗೂ ದೇಶದ ಇತಿಹಾಸದಲ್ಲಿ ಮಹತ್ವದ ಹೆಜ್ಜೆ ಗುರುತುಗಳು, ವಯಸ್ಸು ಲೆಕ್ಕಿಸದ ರಾಜಕೀಯ ಕ್ರಿಯಾಶೀಲತೆ ಭವಿಷ್ಯದ ರಾಜಕಾರಣಿಗಳಿಗೆ ಸ್ಫೂರ್ತಿಯ ಸೆಲೆಯಾಗಿದೆ. ಗ್ರಾಮೀಣ ಜನರ ಬಗೆಗಿನ ನೈಜ ಕಾಳಜಿಯ ಕೊಡುಗೆಗಳು ಮಣ್ಣಿನ ಮಕ್ಕಳ ಪಾಲಿಗೆ ಚೈತನ್ಯ ತುಂಬಿದ ಸಮೃದ್ಧತೆಯ ಸಂಕೇತಗಳು’ ಎಂದು ತಿಳಿಸಿದ್ದಾರೆ.

ಗೌರವಾನ್ವಿತ ಮಾಜಿ ಪ್ರಧಾನಿಗಳಾದ ಶ್ರೀ @H_D_Devegowda ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಮ್ಮ ಸುಧೀರ್ಘ ರಾಜಕೀಯ ಅನುಭವ ಹಾಗೂ ಹೋರಾಟಗಳು, ಕ್ರಿಯಾಶೀಲತೆ ಎಲ್ಲರಿಗೂ ಮಾದರಿಯಾಗಿದೆ. ಭಗವಂತನು ತಮಗೆ ಉತ್ತಮ ಆಯುರಾರೋಗ್ಯ ಕರುಣಿಸಿ, ನಾಡಿನ ಅಭಿವೃದ್ಧಿಗೆ ಅತ್ಯಮೂಲ್ಯ ಮಾರ್ಗದರ್ಶನ ನೀಡುತ್ತಿರುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/aatnwH6WfK

— R. Ashoka (@RAshokaBJP) May 18, 2025

‘ನಾಡಿನ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನು ತಮಗೆ ಉತ್ತಮ ಆಯುರಾರೋಗ್ಯ ನೀಡಿ ಕಾಪಾಡಲಿ ಎಂದು ಶುಭ ಹಾರೈಸುತ್ತೇನೆ’

-ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ

‘ಹಿರಿಯ ರಾಜಕೀಯ ಧುರೀಣ, ಮುತ್ಸದ್ಧಿ ನೇತಾರ, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಆಶೀರ್ವಾದ ಸದಾ ತಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ’

-ಬಿ.ಎಸ್.ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X