Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿಮರ್ಶೆಗೆ ಇರುವ ಪ್ರಧಾನ ಅಗತ್ಯವೆಂದರೆ,...

ವಿಮರ್ಶೆಗೆ ಇರುವ ಪ್ರಧಾನ ಅಗತ್ಯವೆಂದರೆ, ಅದು ಚಲನೆಗೆ ಕಾರಣವಾಗಬೇಕು: ಶಿವಸುಂದರ್

ಬಹುವಚನ ಸಾಹಿತ್ಯ ವಿಮರ್ಶೆಯ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ14 Jun 2025 11:43 PM IST
share
ವಿಮರ್ಶೆಗೆ ಇರುವ ಪ್ರಧಾನ ಅಗತ್ಯವೆಂದರೆ, ಅದು ಚಲನೆಗೆ ಕಾರಣವಾಗಬೇಕು: ಶಿವಸುಂದರ್

ಬೆಂಗಳೂರು : ವಿಮರ್ಶೆಗೆ ಇರುವ ಪ್ರಧಾನವಾದ ಅಗತ್ಯವೆಂದರೆ, ಅದು ಚಲನೆಗೆ ಕಾರಣವಾಗಬೇಕು. ವಿಮರ್ಶೆ ಮಿತಿಯನ್ನು ಗುರುತಿಸಬೇಕು. ಮಿತಿಯನ್ನು ಮೀರುವ ದಾರಿ ತೋರಿಸುವ ರೀತಿಯಲ್ಲಿ ಇರಬೇಕು ಎಂದು ಅಂಕಣಕಾರ ಶಿವಸುಂದರ್ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ನಗರದ ಸುಚಿತ್ರಾ ಫಿಲಂ ಸೊಸೈಟಿಯಲ್ಲಿ ನಡೆದ ಬಹುವಚನ ಸಾಹಿತ್ಯ ವಿಮರ್ಶೆಯ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಮರ್ಶೆಯನ್ನು ಪ್ರಶ್ನಿಸುವುದು ಎಂದು ಅರ್ಥ ಮಾಡಿಕೊಳೋಣ. ಸಾಹಿತ್ಯದಲ್ಲಿ ಬರುವ ಬದಲಾವಣೆಗಳು ಕೂಡ ಸಮಾಜದಲ್ಲಿ ಆಗುವ ಒಟ್ಟು ಬದಲಾವಣೆಯ ಭಾಗವೇ ಆಗಿರುತ್ತೆ ಎಂದು ನಾನು ಗ್ರಹಿಸಿದ್ದೇನೆ ಎಂದು ತಿಳಿಸಿದರು.

ಕನ್ನಡಿಗರು ಕೂಡ ಸುಳ್ಳು ಹೇಳುತ್ತಿರುವ ಸಂದರ್ಭದಲ್ಲಿ ನಾವಿದ್ದೇವೆ. ಕನ್ನಡಿಗರು ಪರಾಕು ಸರಕುಗಳಾಗಿದ್ದಾರೆ. ಈ ಸಂದರ್ಭದಲ್ಲಿ ವಿಮರ್ಶೆಯ ಅಗತ್ಯವೇನು? ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು. ಅಧಿಕಾರ ಎನ್ನುವುದು ಏಕರೂಪವಾಗಿರುವುದರಿಂದ ನಮ್ಮ ಚಳವಳಿ, ಬರಹ, ಸಾಹಿತ್ಯ ಕೃತಿಗಳು ಈಗಾಗಲೇ ಸ್ಥಾಪಿತವಾಗಿರುವ ಅಧಿಕಾರದ ನೆಲೆಗಳನ್ನು ಗುರುತಿಸಬೇಕು. ಬಯಲು ಮಾಡಬೇಕು. ಅದನ್ನು ಬದಲಿಸುವುದಕ್ಕೆ ಮಾರ್ಗಗಳನ್ನು ಸೂಚಿಸಬೇಕು ಎಂದು ಹೇಳಿದರು.

ಕನ್ನಡ ಭಾಷಾ ತಜ್ಞ ಕೆ.ವಿ.ನಾರಾಯಣ ಮಾತನಾಡಿ, ಕನ್ನಡ ಸಾಹಿತ್ಯ ವಿಮರ್ಶೆ ಕ್ಷೇತ್ರದಲ್ಲಿರುವ ಖಾಲಿತನವನ್ನು ಕುರಿತು ಇಂದು ಮಾತನಾಡುತ್ತಿದ್ದೇವೆ. ಬಹುವಚನ ಸಾಹಿತ್ಯ ವಿಮರ್ಶೆ ಪತ್ರಿಕೆಯನ್ನು ಪ್ರಾರಂಭಿಸಿರುವ ಉದ್ದೇಶ ಕೂಡ ಕನ್ನಡ ವಿಮರ್ಶೆಯ ಖಾಲಿತನವನ್ನು ಪೂರ್ಣಗೊಳಿಸಲು ಎಂದು ತಿಳಿಸಿದರು.

ಕನ್ನಡ ವಿಮರ್ಶೆ ಕ್ಷೇತ್ರದಲ್ಲಿ ಅನೇಕ ಆತಂಕಗಳಿವೆ. ಕನ್ನಡ ಸಾಹಿತ್ಯಕ್ಕೆ ದೀರ್ಘ ಇತಿಹಾಸವಿದ್ದರೂ, ಕನ್ನಡ ವಿಮರ್ಶೆಗೆ ದೀರ್ಘವಾದ ಇತಿಹಾಸ ಇಲ್ಲ. ಪಿ.ಲಂಕೇಶ್, ಎ.ಆರ್.ಕೃಷ್ಣಶಾಸ್ತ್ರಿ, ದ.ರಾ.ಬೇಂದ್ರೆ ಅವರದು ಸಾಹಿತ್ಯದ ಸಿದ್ಧಾಂತಗಳು ಬೇರೆ ಬೇರೆ, ಆದರೆ ವಿಮರ್ಶೆಯ ಪರಿಕರಗಳು ಬೇರೆ ಬೇರೆ ಅಲ್ಲ ಎಂದು ಹೇಳಿದರು.

ಸಾಹಿತ್ಯ ಕೃತಿಗಳ ಜವಾಬ್ಧಾರಿ ಏನು? ಅದನ್ನು ವಿಮರ್ಶೆ ಹೇಗೆ ಹೇಳ ಬೇಕೆಂದರೆ, ಪ್ರತಿಯೊಬ್ಬ ಓದುಗರಿಗೆ ಲೋಕವನ್ನು ಗ್ರಹಿಸಲು ಬೇಕಾದ ಪರ್ಯಾಯ ಪರಿಕರಗಳನ್ನು ಒದಗಿಸುವಂತೆ ಇರಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕವಯಿತ್ರಿ ಮಮತಾ ಸಾಗರ, ಲೇಖಕಿ ಶ್ರೀದೇವಿ ಕಳಸದ, ಕರ್ಕಿ ಕೃಷ್ಣಮೂರ್ತಿ, ದಾದಾಪೀರ್ ಜೈಮನ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X