Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಭಾರತವು ಆರ್ಥಿಕತೆಯಲ್ಲಿ ಗಮನಾರ್ಹ ಸದೃಢತೆ...

ಭಾರತವು ಆರ್ಥಿಕತೆಯಲ್ಲಿ ಗಮನಾರ್ಹ ಸದೃಢತೆ ಸಾಧಿಸಿದೆ : ಪಿಯೂಷ್ ಗೋಯಲ್

ವಾರ್ತಾಭಾರತಿವಾರ್ತಾಭಾರತಿ5 July 2025 10:00 PM IST
share
ಭಾರತವು ಆರ್ಥಿಕತೆಯಲ್ಲಿ ಗಮನಾರ್ಹ ಸದೃಢತೆ ಸಾಧಿಸಿದೆ : ಪಿಯೂಷ್ ಗೋಯಲ್

ಬೆಂಗಳೂರು: ನಾವೀನ್ಯತೆ, ಉದ್ಯಮಶೀಲತೆ ಮತ್ತು ದೃಢವಾದ ನೀತಿ ಬೆಂಬಲದಿಂದ ಕೋವಿಡ್ ನಂತರದ ಭಾರತದ ಆರ್ಥಿಕತೆಯು ಗಮನಾರ್ಹ ಸದೃಢತೆಯನ್ನು ಸಾಧಿಸಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಪ್ರತಿಪಾದಿಸಿದರು.

ಶನಿವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಭಾರತ ಸರಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ ಹಾಗೂ ಭಾರತೀಯ ಕೈಗಾರಿಕಾ ಒಕ್ಕೂಟ(ಸಿಐಐ)ದ ಸಹಭಾಗಿತ್ವದಲ್ಲಿ ಉದ್ಯಮದ ಮುಖಂಡರು, ನವೋದ್ಯಮಗಳು ಮತ್ತು ಡೀಪ್ ಟೆಕ್ ನಾವೀನ್ಯಕಾರರ ಜೊತೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆರಂಭಿಕ ಮತ್ತು ಬೆಳವಣಿಗೆಯ ಹಂತದ ಡೀಪ್ ಟೆಕ್ ನವೋದ್ಯಮಗಳನ್ನು ಬೆಂಬಲಿಸುವ 10 ಸಾವಿರ ಕೋಟಿ ರೂ.ಗಳ ‘ನವೋದ್ಯಮಗಳಿಗಾಗಿ ಫಂಡ್ ಆಫ್ ಫಂಡ್ಸ್’ ಅನ್ನು ಪ್ರಾರಂಭಿಸುವಲ್ಲಿ ಸರಕಾರದ ಪ್ರಯತ್ನಗಳನ್ನು ವಿವರಿಸಿದ ಅವರು, ಇದೇ ವೇಳೆ ಖಾಸಗಿ ವಲಯದ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ದೀರ್ಘಾವಧಿ, ಕಡಿಮೆ ವೆಚ್ಚದ ಬಂಡವಾಳವನ್ನು ಒದಗಿಸುವ 1 ಲಕ್ಷ ಕೋಟಿ ರೂ.ಗಳ ‘ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ನಾವೀನ್ಯತೆ’ ಯೋಜನೆಯ ಬಗ್ಗೆಯೂ ತಿಳಿಸಿದರು.

ಎಲೆಕ್ಟ್ರಾನಿಕ್ಸ್, ಉತ್ಪಾದನೆ, ಔಷಧ ಹಾಗೂ ಜವಳಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುಣಮಟ್ಟ, ವಿನ್ಯಾಸ ಮತ್ತು ಸ್ಪರ್ಧಾತ್ಮಕತೆಯ ಸುಧಾರಣೆಗಳಿಂದ ಪ್ರೇರಿತವಾದ ‘ಮೇಡ್ ಇನ್ ಇಂಡಿಯಾ' ಉತ್ಪನ್ನಗಳಿಗೆ ಜಾಗತಿಕವಾಗಿ ಖ್ಯಾತಿ ಹೆಚ್ಚುತ್ತಿದೆ. ಇದು ಭಾರತದ ಬೆಳೆಯುತ್ತಿರುವ ಆರ್ಥಿಕ ಸ್ಥಾನಮಾನಕ್ಕೆ ಸಾಕ್ಷಿಯಾಗಿದೆ ಎಂದು ಪಿಯೂಷ್ ಗೋಯಲ್ ಹೇಳಿದರು.

ವ್ಯಾಪಾರ ಸ್ನೇಹಿ ವಾತಾವರಣವನ್ನು ಬೆಳೆಸುವ ನಿಟ್ಟಿನಲ್ಲಿ ನಿಯಂತ್ರಕ ಚೌಕಟ್ಟುಗಳನ್ನು ಸರಾಗಗೊಳಿಸುವ ಪ್ರಾಮುಖ್ಯತೆ, ಪೇಟೆಂಟ್ ಗಳು ಮತ್ತು ಟ್ರೇಡ್ ಮಾರ್ಕ್ ಗಳಿಗೆ ಸಂಬಂಧಿಸಿದ ಪ್ರಕ್ರಿಯೆಯನ್ನು ತ್ವರಿತಗೊಳಿಸುವ ಪ್ರಾಮುಖ್ಯತೆಯ ಬಗ್ಗೆಯೂ ಅವರು ಮಾತನಾಡಿದರು.

ಈ ಅಧಿವೇಶನದಲ್ಲಿ ಪ್ರಮುಖ ನವೋದ್ಯಮಗಳ ಸಂಸ್ಥಾಪಕರು, ಉದ್ಯಮದ ನಾಯಕರು, ಡೀಪ್ ಟೆಕ್ ಆವಿಷ್ಕಾರಕರು, ಸಾಹಸೋದ್ಯಮ ಬಂಡವಾಳಶಾಹಿಗಳು ಮತ್ತು ಶೈಕ್ಷಣಿಕ ಪ್ರತಿನಿಧಿಗಳು ಸೇರಿದಂತೆ 100ಕ್ಕೂ ಹೆಚ್ಚು ಪ್ರಮುಖ ಪಾಲುದಾರರು ಭಾಗವಹಿಸಿದ್ದರು.

ಸಂವಾದದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್, ಉದ್ಯಮ ವಲಯದ ದಿಗ್ಗಜರಾದ ಕ್ರಿಸ್ ಗೋಪಾಲಕೃಷ್ಣನ್, ಕಿರಣ್ ಮಜುಂದಾರ್ ಶಾ, ಗೀತಾಂಜಲಿ ಕಿರ್ಲೋಸ್ಕರ್ ಮತ್ತು ಡಾ.ದೇವಿ ಪ್ರಸಾದ್ ಶೆಟ್ಟಿ, ಸಿಐಐ ಅಧ್ಯಕ್ಷ ಕಮಲ್ ಬಾಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X