Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹೊಸ ಕಾರ್ಮಿಕ ಸಂಹಿತೆಗಳಿಂದ ಕಾರ್ಮಿಕರ...

ಹೊಸ ಕಾರ್ಮಿಕ ಸಂಹಿತೆಗಳಿಂದ ಕಾರ್ಮಿಕರ ಶೋಷಣೆ : ಕ್ಲಿಪ್ಟನ್ ರೊಜಾರಿಯೊ

ವಾರ್ತಾಭಾರತಿವಾರ್ತಾಭಾರತಿ6 July 2025 11:14 PM IST
share
ಹೊಸ ಕಾರ್ಮಿಕ ಸಂಹಿತೆಗಳಿಂದ ಕಾರ್ಮಿಕರ ಶೋಷಣೆ : ಕ್ಲಿಪ್ಟನ್ ರೊಜಾರಿಯೊ

ಬೆಂಗಳೂರು : ಹೊಸ ಕಾರ್ಮಿಕ ಸಂಹಿತೆಗಳು ಶೋಷಣೆಯನ್ನು ಸಾಂಸ್ಥಿಕಗೊಳಿಸುವ ಮೂಲಕ ಕಾರ್ಮಿಕರ ಬದುಕನ್ನು ಹದಗೆಡಿಸುತ್ತವೆ ಎಂದು ಅಖಿಲ ಭಾರತ ಕೇಂದ್ರ ಕಾರ್ಮಿಕ ಸಂಘಗಳ ಮಂಡಳಿಯ (ಎಐಸಿಸಿಟಿಯು) ಉಪಾಧ್ಯಕ್ಷ ಕ್ಲಿಫ್ಟನ್ ಡಿ. ರೊಜಾರಿಯೊ ತಿಳಿಸಿದ್ದಾರೆ.

ರವಿವಾರ ನಗರದ ಗಾಂಧಿ ಭವನದಲ್ಲಿ ಸಾರ್ವಜನಿಕ ವಲಯದ ಉದ್ಯಮಗಳ (ಪಿಎಸ್‌ಯು)ಖಾಯಂ ಅಲ್ಲದ ಕಾರ್ಮಿಕರ ಜಂಟಿ ವೇದಿಕೆಯ ವತಿಯಿಂದ ಆಯೋಜಿಸಿದ್ದ ಹೊಸ ಕಾರ್ಮಿಕ ಸಂಹಿತೆ ಹಾಗೂ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ, ನಡೆದ ಸಮಾವೇಶದಲ್ಲಿ ಅವರು ಮಾತನಾಡಿದರು.

ಬಿಬಿಎಂಪಿ ಪೌರಕಾರ್ಮಿಕರ ಸಂಘದ ಕಾರ್ಯದರ್ಶಿ ಮಣಿಯಮ್ಮ ಮಾತನಾಡಿದರು.

ಸಮಾವೇಶದಲ್ಲಿ ಕರ್ನಾಟಕ ಜನರಲ್ ಲೇಬರ್ ಯೂನಿಯನ್ (ಐಟಿಐ ಘಟಕ) ಅಧ್ಯಕ್ಷ ಹೇಮಂತ್ ಕುಮಾರ್, ನಿಮ್ಹಾನ್ಸ್ ಪ್ರಗತಿಪರ ಕಾರ್ಮಿಕರ ಸಂಘದ ಅಧ್ಯಕ್ಷ ಶಿವಕುಮಾರ್, ಕರ್ನಾಟಕ ಜನರಲ್ ಲೇಬರ್ ಯೂನಿಯನ್ (ಐಟಿಐ ಘಟಕ) ಉಪಾಧ್ಯಕ್ಷ ಬಾಬು ವಿನೋದ್, ಎಚ್‌ಎಎಲ್ ಗುತ್ತಿಗೆ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಮತ್ತಿತರರು ಹಾಜರಿದ್ದರು.

ಸಮಾವೇಶದ ನಿರ್ಣಯಗಳು

ಹೊಸ ಕಾರ್ಮಿಕ ಸಂಹಿತೆಗಳನ್ನು ತಕ್ಷಣ ಹಿಂಪಡೆಯಬೇಕು. ಸರಕಾರಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಗುತ್ತಿಗೆ ಕಾರ್ಮಿಕ, ಹೊರಗುತ್ತಿಗೆ ಮತ್ತು ಸ್ಥಿರ-ಅವಧಿಯ ಉದ್ಯೋಗವನ್ನು ರದ್ದುಗೊಳಿಸಬೇಕು. ಕನಿಷ್ಠ ವೇತನವನ್ನು ತಕ್ಷಣ ಪರಿಷ್ಕರಿಸಿ ಮತ್ತು ತಿಂಗಳಿಗೆ 42,000 ರೂ. ಕನಿಷ್ಠ ವೇತನವನ್ನು ಘೋಷಿಸಬೇಕು. ಇಎಸ್‌ಐ ಕಾಯ್ದೆಯಡಿ 21 ಸಾವಿರ ರೂ. ಮಿತಿಯನ್ನು ತೆಗೆದುಹಾಕಿ ಎಲ್ಲ ಕಾರ್ಮಿಕರಿಗೆ ಇಎಸ್‌ಐ ಅನ್ನು ಖಚಿತಪಡಿಸಬೇಕು. ಎಲ್ಲ ಕಾರ್ಮಿಕರಿಗೆ ನ್ಯಾಯಯುತ ಮತ್ತು ಗೌರವಾನ್ವಿತ ಕೆಲಸದ ಪರಿಸ್ಥಿತಿಗಳನ್ನು ಖಚಿತಪಡಿಸಬೇಕು. ಮಹಿಳಾ ಕಾರ್ಮಿಕರಿಗೆ ಸುರಕ್ಷಿತ ಮತ್ತು ಸಮಗ್ರ ಕೆಲಸದ ವಾತಾವರಣವನ್ನು ಒದಗಿಸಬೇಕು ಎಂದು ಸರಕಾರಕ್ಕೆ ಒತ್ತಾಯಿಸಬೇಕು ಎಂದು ಸಮಾವೇಶದಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X