Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮಕ್ಕಳ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಬಾರದು...

ಮಕ್ಕಳ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಬಾರದು : ನಟ ಪ್ರಕಾಶ್ ರೈ

‘ಮಕ್ಕಳ ಲೋಕಕ್ಕೆ 14 ಪುಸ್ತಕಗಳು ಹಾಗೂ ಬಹುರೂಪಿ ಪುಸ್ತಕ ಕಿಟ್’ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ6 July 2025 11:20 PM IST
share
ಮಕ್ಕಳ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಬಾರದು : ನಟ ಪ್ರಕಾಶ್ ರೈ

ಬೆಂಗಳೂರು : ‘ವಿದ್ಯಾವಂತರನ್ನಾಗಿ ಮಾಡುವ ವೇಗದಲ್ಲಿ ಮಕ್ಕಳಿಗೆ ಹಿಂಸೆ ನೀಡುವುದು ತಪ್ಪಬೇಕು’ ಎಂದು ಬಹುಭಾಷಾ ನಟ ಹಾಗೂ ನಿರ್ದಿಗಂತದ ರೂವಾರಿ ಪ್ರಕಾಶ್ ರೈ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ ಬಹುರೂಪಿ ಪ್ರಕಾಶನ, ಪರಾಗ್, ನಿರ್ದಿಗಂತ ಹಾಗೂ ಇತರ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ‘ಮಕ್ಕಳ ಲೋಕಕ್ಕೆ 14 ಪುಸ್ತಕಗಳು ಹಾಗೂ ಬಹುರೂಪಿ ಪುಸ್ತಕ ಕಿಟ್’ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಮಕ್ಕಳನ್ನು ಬೆಳೆಸುವ ಸಂದರ್ಭದಲ್ಲಿ ಅವರ ಮುಗ್ಧ ಸ್ವಾತಂತ್ರ್ಯವನ್ನು ಪೋಷಕರು ಕಿತ್ತುಕೊಳ್ಳಬಾರದು. ತಂದೆ-ತಾಯಿ ತಮ್ಮ ಮಕ್ಕಳಲ್ಲಿ ಅತಿಯಾದ ಶಿಸ್ತನ್ನು ಮೂಡಿಸಲು ಹೋಗಿ ಅವರಲ್ಲಿನ ಕ್ರಿಯಾಶೀಲತೆ, ಸೃಜನಶೀಲತೆಗೆ ಅವಕಾಶ ಮಾಡಿಕೊಡದಿರುವುದು ಉತ್ತಮ ಬೆಳವಣಿಗೆಯಲ್ಲ ಎಂದು ಅವರು ತಿಳಿಸಿದರು.

ಮಕ್ಕಳ ಸ್ವಾತಂತ್ರ್ಯಕ್ಕೆ ಧಕ್ಕೆ ತರಬಾರದು. ಅವರ ಕನಸುಗಳೇನು ಎಂಬುದನ್ನು ಅರಿತು ಅದರಂತೆ ಬೆಳೆಯುವುದಕ್ಕೆ ಪ್ರೋತ್ಸಾಹ ನೀಡಬೇಕಾದ ಅವಶ್ಯಕತೆ ಇದೆ. ಮನುಷ್ಯ ನೈಸರ್ಗಿಕವಾಗಿ ಬೆಳವಣಿಗೆ ಸಾಧಿಸಿಲ್ಲ, ಬದಲಾಗಿ ನಿಯಂತ್ರಣಕ್ಕೊಳಪಟ್ಟು ಬೆಳೆಯುತ್ತಾ ಬಂದ ಎಂಬುದನ್ನು ನಾವು ಅರ್ಥೈಸಿಕೊಳ್ಳಬೇಕಾಗಿದೆ ಎಂದು ಪ್ರಕಾಶ್ ರಾಜ್ ವಿವರಿಸಿದರು.

ಇಂದಿನ ಕಾಲಮಾನದಲ್ಲಿ ಸಾಂಸ್ಕೃತಿಕವಾಗಿ ಮಕ್ಕಳು ಬೆರೆಯುವಂತಹ ಅವಕಾಶ ಕಲ್ಪಿಸಬೇಕಿದೆ. ಈ ನಿಟ್ಟಿನಲ್ಲಿ ಕೆಲ ವರ್ಷಗಳಿಂದ ಮಕ್ಕಳನ್ನು ‘ಶಿಕ್ಷಣದಲ್ಲಿ ರಂಗಭೂಮಿ’ ಎಂಬ ಪರಿಕಲ್ಪನೆಯಡಿ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗುವಂತೆ ಮಾಡುತ್ತಿರುವುದು ಉತ್ತಮ ಕೆಲಸವಾಗಿದೆ ಎಂದು ಅವರು ತಿಳಿಸಿದರು.

ಬಹುರೂಪಿ ಸಂಸ್ಥಾಪಕ ಜಿ.ಎನ್.ಮೋಹನ್ ಮಾತನಾಡಿ, ಮಕ್ಕಳ ಸಾಹಿತ್ಯ ಪುಸ್ತಕಗಳ ಆಕಾರ, ಕ್ರಿಯಾಶೀಲತೆಗಳನ್ನೇ ಕಾನೂನು ಉಲ್ಲಂಘನೆ ಎಂದು ಸಾರ್ವಜನಿಕ ಹಾಗೂ ಇತರ ಗ್ರಂಥಾಲಯಗಳು ಭಾವಿಸುತ್ತಿವೆ. ಇಂಥ ಕ್ಷುಲ್ಲಕ ವಿಚಾರಕ್ಕೆ ಪುಸ್ತಕಗಳನ್ನೇ ಕೊಳ್ಳುವುದಿಲ್ಲ. ಇದು ಬದಲಾಗದಿದ್ದಲ್ಲಿ ಮಕ್ಕಳಲ್ಲಿ ಓದಿನ ಅಭಿರುಚಿ ಬೆಳೆಯುವುದು ಅಸಾಧ್ಯ ಎಂದು ಅಭಿಪ್ರಾಯಪಟ್ಟರು.

ಲೇಖಕ ಅಬ್ದುಲ್ ರೆಹಮಾನ್ ಪಾಷಾ ಮಾತನಾಡಿದರು. ಏಕಲವ್ಯ ಪ್ರಕಾಶನದ ಲಕ್ಷ್ಮೀ ಕರುಣಾಕರನ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ನದಿಯ ಹುಲಿ, ಅಪ್ಪುಕುಟ್ಟನನ್ನು ತೂಗುವುದು ಹೇಗೆ?, ಪಯಣಿಸುವ ಬೀಜಗಳು, ಅಯ್ಯೋ ಕಕ್ಕ...!, ಆದಿಲ್ ಮಾತಾಡಿದರೆ ಪದಗಳು ಕುಣಿಯುತ್ತವೆ, ನನ್ ಹೆಸ್ರೇ ಸಿನ್ನಮಾನ್, ಒಂದು ಬಕ್ಕೆಟ್ಟಿನಲ್ಲಿ ಸಮುದ್ರ, ಮೀನು ಸಾರು, ಕಟ್ ಪೀಸ್ ಕುಮಾರ, ಬೂ!, ಡಾ.ಬಿ.ಆರ್.ಅಂಬೇಡ್ಕರ್ ಇಲ್ಲ್ಯೂಸ್ಟ್ರೇಟೆಡ್, ಚಿಟ್ಟಿ, ಶಾಲೆಯಲ್ಲಿ ನನ್ನಜ್ಜ, ಹಾಗೂ ಅಮ್ಮ ಮತ್ತು ನಾನು ಎಂಬ ಹದಿನಾಲ್ಕು ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು.

ಈ ವೇಳೆ ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿ ಡಾ. ನೆಲ್ಲುಕುಂಟೆ ವೆಂಕಟೇಶ್, ಮಕ್ಕಳ ಗ್ರಂಥಾಲಯ ತಜ್ಞ ತೇಜಸ್ವಿ ಶಿವಾನಂದ್, ಟಾಟಾ ಟ್ರಸ್ಟ್‌ನ ವಿವೇಕ್ ಬಿ.ಜಿ, ಬಹುರೂಪಿ ಶ್ರೀಜಾ ವಿ.ಎನ್. ಹಾಗೂ ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X