Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಯಾವುದೇ ಆಮಿಷಕ್ಕೆ ಬಲಿಯಾಗದೆ ಹೋರಾಡಿದ...

ಯಾವುದೇ ಆಮಿಷಕ್ಕೆ ಬಲಿಯಾಗದೆ ಹೋರಾಡಿದ ರೈತರಿಗೆ ಸಿಕ್ಕ ಗೆಲುವು: ಪ್ರಕಾಶ್ ರಾಜ್

ದೇವನಹಳ್ಳಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಟ್ಟ ಸರಕಾರ

ವಾರ್ತಾಭಾರತಿವಾರ್ತಾಭಾರತಿ15 July 2025 3:48 PM IST
share
ಯಾವುದೇ ಆಮಿಷಕ್ಕೆ ಬಲಿಯಾಗದೆ ಹೋರಾಡಿದ ರೈತರಿಗೆ ಸಿಕ್ಕ ಗೆಲುವು: ಪ್ರಕಾಶ್ ರಾಜ್

ಬೆಂಗಳೂರು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ನಿರ್ಧಾರವನ್ನು ರಾಜ್ಯ ಸರಕಾರ ಕೈಬಿಟ್ಟಿರುವುದು ರೈತರ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ರೈತರನ್ನು ಬೆಂಬಲಿಸಿ ಹೋರಾಟದಲ್ಲಿ ಭಾಗಿಯಾಗಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್ ಬಣ್ಣಿಸಿದ್ದಾರೆ.

ಭೂಸ್ವಾಧೀನ ಅಧಿಸೂಚನೆಯನ್ನು ರದ್ದು ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ ಬಗ್ಗೆ ಮಾತನಾಡಿದ ಪ್ರಕಾಶ್ ರಾಜ್, ಇದು ಭೂಮಿ ಮಾರುವುದಿಲ್ಲ, ರೈತನಾಗಿ ಉಳಿಯುತ್ತೇವೆ ಎಂದು ನಿರಂತರವಾಗಿ ಹೋರಾಡಿದ ರೈತರ ಗೆಲುವು. ಇದೊಂದು ಐತಿಹಾಸಿಕ ಚಳವಳಿ ಎಂದು ಹೇಳಿದರು.

ಯಾವುದೇ ಸರಕಾರ ಜನರ ಸಮಸ್ಯೆಗೆ ಸ್ಪಂದಿಸಬೇಕಾದಾಗ ಅದು ನಮ್ಮದಲ್ಲದ ಹೋರಾಟವಾದರೂ, ಎಲ್ಲೋ ಮೂಲೆಯಲ್ಲಿ ಯಾರೋ ಒಬ್ಬರು ಹೋರಾಡುತ್ತಿದ್ದರೆ ಅವರ ಜೊತೆ ಇಡೀ ಜನರು ಬೆಂಬಲವಾಗಿ ನಿಂತಾಗ ಸರಕಾರಗಳು ಕೇಳಿಸಿಕೊಳ್ಳುತ್ತದೆ ಅನ್ನುವ ಕಾರಣಕ್ಕೆ ಇದು ಐತಿಹಾಸಿಕ ಗೆಲುವು ಎಂದವರು ವಿವರಿಸಿದರು.

ಯಾವುದೇ ಆಮಿಷಗಳಿಗೆ ಬಲಿಯಾಗದೆ ಮೂರು ವರ್ಷಗಳ ಕಾಲ ತಮ್ಮ ಭೂಮಿ ಸರಕಾರದ ಸ್ವಾಧೀನವಾಗದಂತೆ ತಡೆದ ರೈತರ ಹೋರಾಟ ವಿಶೇಷವಾದದ್ದು. ಯಾವುದೇ ಅನ್ಯಾಯ ನಡೆದಾಗ ಅನ್ಯಾಯಕ್ಕೆ ಒಳಗಾದವರು ಕೂಗುತ್ತಿದ್ದರೆ ಅವರನ್ನು ಬೇಗನೆ ದಮನ ಮಾಡುತ್ತಾರೆ. ತುಂಬಾ ದಿನ ಅಳುತ್ತಾ ನಿಲ್ಲುವುದಕ್ಕೂ ಅವರಿಗೆ ಆಗುವುದಿಲ್ಲ. ಆದರೆ ಅನ್ಯಾಯಕ್ಕೆ ಒಳಗಾದ ವ್ಯಕ್ತಿ ಅಳುತ್ತಾ ನಿಂತಿದ್ದಾಗ ಅವರ ಜೊತೆ ಇನ್ನೊಬ್ಬ ನಿಂತುಕೊಂಡರೆ ಚಳವಳಿ ಗೆಲ್ಲುತ್ತದೆ ಅನ್ನುವ ಸಂದೇಶ ಇಲ್ಲಿ ಮುಖ್ಯವಾಗುತ್ತದೆ. ಸಮಾಜದ ಪ್ರಜ್ಞೆಗೆ ಬಹಳ ದೊಡ್ಡ ಜಯ ಇದು. ಹೋರಾಟಗಳು ಬೆಳೆಯಲು. ಅಂತಹ ಹೋರಾಟಗಳಿಗೆ ಇದು ನಾಂದಿಯಾಗಲಿ ಎಂದವರು ಹೇಳಿದರು.

ಸಿದ್ದರಾಮಯ್ಯ ಜನಪರ ನಾಯಕ ಎಂಬುದು ಸಾಬೀತು ಮಾಡಿದ್ದಾರೆ

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜನಪರವಾದ ಕಾಳಜಿಯಿದೆ. ಕೊನೆಗೂ ಅವರು ಜನಪರ ನಾಯಕ ಎಂಬುದನ್ನು ಸಾಬೀತು ಮಾಡಿದ್ದಾರೆ. ಅದರ ಜೊತೆಗೆ ರೈತರ ಕೂಗು ಕೇಳಿಸಿಕೊಳ್ಳಲೂ ಅವರು ಮೂರು ವರ್ಷ ತೆಗೆದುಕೊಂಡರು ಎಂಬುದನ್ನೂ ನಾವು ಗಮನಿಸಬೇಕಾಗಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರಕಾಶ್ ರಾಜ್ ಪ್ರತಿಕ್ರಿಯಿಸಿದರು.

ಅಧಿಕಾರದಲ್ಲಿ ಯಾರೇ ಬಂದರೂ, ಎಷ್ಟೇ ಸಜ್ಜನರಾಗಿದ್ದರೂ ನಾಗರಿಕ ಸಮಾಜ ಪ್ರಶ್ನಿಸುವ ಶಕ್ತಿಯನ್ನು ಪಡೆದುಕೊಂಡಾಗ ಮಾತ್ರ ಅವರು ಸಜ್ಜನರಾಗಿರಲು ಸಾಧ್ಯ. ಇಲ್ಲದಿದ್ದರೆ ಅಧಿಕಾರ ಅವರನ್ನೂ ಸಜ್ಜನರಾಗಿರಲು ಬಿಡುವುದಿಲ್ಲ. ಬಹುಶಃ ಸಜ್ಜನರಿಗೆ ಕೂಡಾ ನಾವು ಬಲ ಕೊಡಬೇಕು ಎಂಬುದು ರೈತರ ಈ ಹೋರಾಟದಿಂದ ಸಾಬೀತಾಗಿದೆ ಎಂದು ಪ್ರಕಾಶ್ ರಾಜ್ ನುಡಿದರು.

Tags

Devanahalli ʼPrakash Raj
share
ವಾರ್ತಾಭಾರತಿ
ವಾರ್ತಾಭಾರತಿ
Next Story
X