Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ತಲಾದಾಯದಲ್ಲಿ ನಮ್ಮ ರಾಜ್ಯ ಪ್ರಥಮ...

ತಲಾದಾಯದಲ್ಲಿ ನಮ್ಮ ರಾಜ್ಯ ಪ್ರಥಮ ಸ್ಥಾನಕ್ಕೇರಲು ಗ್ಯಾರಂಟಿಗಳು ಕಾರಣ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ26 July 2025 9:55 PM IST
share
ತಲಾದಾಯದಲ್ಲಿ ನಮ್ಮ ರಾಜ್ಯ ಪ್ರಥಮ ಸ್ಥಾನಕ್ಕೇರಲು ಗ್ಯಾರಂಟಿಗಳು ಕಾರಣ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಮ್ಮ ರಾಜ್ಯವು ತಲಾದಾಯದಲ್ಲಿ ಇಡೀ ದೇಶದಲ್ಲಿ ಪ್ರಥಮ ಸ್ಥಾನಕ್ಕೇರಿದೆ. ಇದಕ್ಕೆ ಪ್ರಮುಖ ಕಾರಣ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿರುವುದು. ಕೊಳ್ಳುವ ಶಕ್ತಿ ಹೆಚ್ಚಾಗಲು ನಮ್ಮ ಗ್ಯಾರಂಟಿ ಯೋಜನೆಗಳು ಪ್ರಮುಖ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶನಿವಾರ ಈ ಸಂಬಂಧ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ಬಿಜೆಪಿಯವರಿಗೆ ಆರ್ಥಿಕತೆ ಅರ್ಥ ಆಗುವುದಿಲ್ಲ. ಅದಕ್ಕೆ ರಾಜ್ಯ ಸರಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ. ರಾಜಕೀಯ ಪ್ರೇರಿತ ಸುಳ್ಳುಗಳನ್ನು ಹೇಳಿ ರಾಜ್ಯದ ಜನರ ದಾರಿ ತಪ್ಪಿಸುವ ಯತ್ನ ಮಾಡಿದರೂ ರಾಜ್ಯದ ಜನತೆ ಯಾಮಾರುವುದಿಲ್ಲ ಎಂದು ಹೇಳಿದ್ದಾರೆ.

ಶಕ್ತಿ ಯೋಜನೆಯಡಿ ಮಹಿಳೆಯರು ಬಸ್‍ಗಳಲ್ಲಿ ಉಚಿತವಾಗಿ ಓಡಾಡಲು ಆರಂಭಿಸಿದ ಬಳಿಕ ಬೆಂಗಳೂರು, ಹುಬ್ಬಳ್ಳಿ-ಧಾರಾವಾಡದಲ್ಲಿ ಉದ್ಯೋಗಸ್ಥ ಮಹಿಳೆಯರ ಪ್ರಮಾಣ ಹೆಚ್ಚಾಗಿದೆ ಎಂದು ಸಸ್ಟೈನೇಬಲ್ ಮೊಬಿಲಿಟಿ ನೆಟ್‍ವರ್ಕ್ ನಡೆಸಿದ ಸಮೀಕ್ಷಾ ವರದಿ ಹೇಳಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಶಕ್ತಿ ಯೋಜನೆಯಿಂದಾಗಿ ಮಹಿಳೆಯರ ಔದ್ಯೋಗಿಕ ದರವು ಬೆಂಗಳೂರಿನಲ್ಲಿ ಶೇ.23 ಮತ್ತು ಹುಬ್ಬಳ್ಳಿ-ಧಾರಾವಾಡದಲ್ಲಿ ಶೇ.21ರಷ್ಟು ಏರಿಕೆಯಾಗಿರುವುದು ಅಧ್ಯಯನದಿಂದ ಬಹಿರಂಗವಾಗಿದೆ. ಮಹಿಳೆಯರಿಗೆ ಈ ಯೋಜನೆಯಿಂದಾಗಿ ಶೇ.30 ರಿಂದ ಶೇ.50ರಷ್ಟು ಖರ್ಚು ಕಡಿಮೆಯಾಗುತ್ತಿರುವುದಾಗಿ ಸ್ವತಃ ಅವರೇ ಸಮೀಕ್ಷೆಯ ವೇಳೆ ಹೇಳಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಹಿಳೆಯರಿಗೆ ಆರ್ಥಿಕ ಬಲ ತುಂಬಿ, ಅವರನ್ನು ಸ್ವಾವಲಂಬಿಯಾಗಿಸುವ ಉದ್ದೇಶದ ಈ ಯೋಜನೆಯ ಬಗೆಗೆ ಕೇಳಿಬಂದ ಟೀಕೆಗಳು, ವ್ಯವಸ್ಥಿತ ಅಪಪ್ರಚಾರ ಎಲ್ಲವೂ ಸಾಧನೆಯ ಮುಂದೆ ಮಂಡಿಯೂರಿದೆ ಎಂದು ಮುಖ್ಯಮಂತ್ರಿ ಹರ್ಷ ವ್ಯಕ್ತಪಡಿಸಿದ್ದಾರೆ.

ಅಂತರ್‍ರಾಷ್ಟ್ರೀಯ ಮಟ್ಟದಲ್ಲಿಯೂ ವ್ಯಾಪಕ ಪ್ರಶಂಸೆಗೆ ಒಳಗಾಗಿರುವ ನಮ್ಮ ಗ್ಯಾರಂಟಿ ಯೋಜನೆಗಳು ಇಂದು ನಾಡಿನ ಜನರ ತಲಾದಾಯ ಹೆಚ್ಚಿಸಿ, ಅವರ ಬದುಕಿಗೆ ಆರ್ಥಿಕ ಭದ್ರತೆ ಕಲ್ಪಿಸಿದೆ. ನಮ್ಮ ಯೋಜನೆಯೊಂದು ನಿರೀಕ್ಷೆಗೂ ಮೀರಿ ಸಾಧನೆ ಮಾಡಿದರೆ ನನಗೆ ಅದಕ್ಕಿಂತ ಹೆಚ್ಚು ಸಂತಸದ ವಿಷಯ ಬೇರೆ ಇಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X