Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮುಂದಿನ ಶೈಕ್ಷಣಿಕ ವರ್ಷದಿಂದ...

ಮುಂದಿನ ಶೈಕ್ಷಣಿಕ ವರ್ಷದಿಂದ ಫಿಸಿಯೋಥೆರಪಿ, ಆಕ್ಯುಪೇಷನಲ್ ಥೆರಪಿ ಪ್ರವೇಶಕ್ಕೆ NEET ಪರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ14 Jan 2026 6:42 PM IST
share
ಮುಂದಿನ ಶೈಕ್ಷಣಿಕ ವರ್ಷದಿಂದ ಫಿಸಿಯೋಥೆರಪಿ, ಆಕ್ಯುಪೇಷನಲ್ ಥೆರಪಿ ಪ್ರವೇಶಕ್ಕೆ NEET ಪರೀಕ್ಷೆ

ಬೆಂಗಳೂರು : ಫಿಸಿಯೋಥೆರಪಿ ಹಾಗೂ ಆಕ್ಯುಪೇಷನಲ್ ಥೆರಪಿ ವಿಭಾಗಗಳ ಪದವಿ ಕೋರ್ಸ್‌ಗಳಿಗೆ 2026–27ರ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಅರ್ಹತಾ–ಪ್ರವೇಶ ಪರೀಕ್ಷೆ (NEET) ಮೂಲಕವೇ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಕರ್ನಾಟಕ ಸ್ಟೇಟ್ ಅಲೈಡ್ ಆಂಡ್ ಹೆಲ್ತ್‌ಕೇರ್ ಕೌನ್ಸಿಲ್ ತಿಳಿಸಿದೆ.

ಶುಕ್ರವಾರ ಪ್ರಕಟಿಸಿದ ಪ್ರಕಟನೆಯಲ್ಲಿ ಕೌನ್ಸಿಲ್ ಅಧ್ಯಕ್ಷ ಪ್ರೊ.ಯು.ಟಿ.ಇಫ್ತಿಕಾರ್ ಅಲಿ ಫರೀದ್, ರಾಷ್ಟ್ರೀಯ ಅಲೈಡ್ ಮತ್ತು ಹೆಲ್ತ್‌ಕೇರ್ ಪ್ರೊಫೆಶನ್ಸ್ ಆಯೋಗ (NCAHP), ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ನೀಡಿರುವ ಸೂಚನೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಅಧಿಸೂಚನೆಯಂತೆ, NCAHP ಅಲೈಡ್ ಮತ್ತು ಹೆಲ್ತ್‌ಕೇರ್ ಪದವಿಗೆ ಸಂಬಂಧಿಸಿದಂತೆ ವರ್ಗವಾರು ಪ್ರವೇಶ ಮಾನದಂಡಗಳನ್ನು ಅಂತಿಮಗೊಳಿಸಿದ್ದು, ಅವುಗಳನ್ನು 2026–27ರ ಶೈಕ್ಷಣಿಕ ವರ್ಷದಿಂದ ಜಾರಿಗೊಳಿಸುವಂತೆ ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ ತಿಳಿಸಿದೆ.

ಮಾರ್ಗಸೂಚಿಗಳ ಪ್ರಕಾರ, ವರ್ಗ–3ರ ಅಡಿಯಲ್ಲಿ ವರ್ಗೀಕರಿಸಲಾದ ಬ್ಯಾಚುಲರ್ ಆಫ್ ಫಿಸಿಯೋಥೆರಪಿ (ಬಿಪಿಟಿ) ಹಾಗೂ ವರ್ಗ–6ರ ಅಡಿಯಲ್ಲಿ ವರ್ಗೀಕರಿಸಲಾದ ಬ್ಯಾಚುಲರ್ ಆಫ್ ಆಕ್ಯುಪೇಷನಲ್ ಥೆರಪಿ (ಬಿಒಟಿ) ಕೋರ್ಸ್‌ಗಳಿಗೆ ಪ್ರವೇಶವನ್ನು ಕಡ್ಡಾಯವಾಗಿ NEET ಮೂಲಕವೇ ನಡೆಸಬೇಕು. ಈ ಪ್ರವೇಶ ಪ್ರಕ್ರಿಯೆ ನ್ಯಾಷನಲ್ ಕಮಿಷನ್ ಫಾರ್ ಅಲೈಡ್ ಆಂಡ್ ಹೆಲ್ತ್‌ಕೇರ್ ಪ್ರೊಫೆಶನ್ಸ್ ಆಕ್ಟ್ 2021ರ ನಿಯಮಾವಳಿಗಳಿಗೆ ಅನುಗುಣವಾಗಿರುತ್ತದೆ.

ವಿಶ್ವವಿದ್ಯಾಲಯಗಳು, ಖಾಸಗಿ ವಿವಿಗಳು ಹಾಗೂ ಡೀಮ್ಡ್–ಟು–ಬಿ ವಿವಿಗಳ ಕುಲಪತಿಗಳು ಪರಿಷ್ಕೃತ ಪ್ರವೇಶ ವಿಧಾನವನ್ನು ಗಮನಿಸಬೇಕು ಎಂದು ಕೌನ್ಸಿಲ್ ಸೂಚಿಸಿದೆ. ಜೊತೆಗೆ, ಕಾಲೇಜುಗಳು, ಅಧ್ಯಾಪಕ ವೃಂದ ಹಾಗೂ ಈ ಕೋರ್ಸ್‌ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಲ್ಲಿ ಈ ಮಾಹಿತಿಯನ್ನು ವ್ಯಾಪಕವಾಗಿ ಪ್ರಸಾರ ಮಾಡುವಂತೆ ಕೌನ್ಸಿಲ್ ಮನವಿ ಮಾಡಿದೆ.

ಇದಲ್ಲದೆ, 2026–27 ಶೈಕ್ಷಣಿಕ ವರ್ಷದಿಂದ NCAHP ನಿಗದಿಪಡಿಸಿರುವ ಪ್ರವೇಶ ಪ್ರಕ್ರಿಯೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Tags

PhysiotherapyOccupational TherapyNEET
share
ವಾರ್ತಾಭಾರತಿ
ವಾರ್ತಾಭಾರತಿ
Next Story
X