Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪೊಲೀಸ್ ಕಾನ್‍ಸ್ಟೇಬಲ್ ನೇಮಕಾತಿ ಪರೀಕ್ಷೆ...

ಪೊಲೀಸ್ ಕಾನ್‍ಸ್ಟೇಬಲ್ ನೇಮಕಾತಿ ಪರೀಕ್ಷೆ ಯಶಸ್ವಿ: ಶೇ.78ಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರು

ವಾರ್ತಾಭಾರತಿವಾರ್ತಾಭಾರತಿ20 Sept 2026 9:05 PM IST
share
ಪೊಲೀಸ್ ಕಾನ್‍ಸ್ಟೇಬಲ್ ನೇಮಕಾತಿ ಪರೀಕ್ಷೆ ಯಶಸ್ವಿ: ಶೇ.78ಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರು

ಬೆಂಗಳೂರು : ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‍ಆರ್‍ಪಿ) ಪಡೆಯ ಕಾನ್‍ಸ್ಟೇಬಲ್ ಹುದ್ದೆಗಳ ಭರ್ತಿಗೆ ರವಿವಾರ(ಸೆ.20) ನಡೆದ ಲಿಖಿತ ಪರೀಕ್ಷೆಯು ಯಶಸ್ವಿಯಾಗಿ ಮುಕ್ತಾಯಗೊಂಡಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ತಿಳಿಸಿದೆ.

ಮಿಕ್ಕುಳಿಕೆ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದಗಳ ಒಟ್ಟು 2,314 ಹುದ್ದೆಗಳಿಗಾಗಿ ಈ ನೇಮಕಾತಿ ಪರೀಕ್ಷೆ ನಡೆಸಲಾಗಿದೆ. ಈ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮಿಕ್ಕುಳಿಕೆ ವೃಂದದ ಒಟ್ಟು 1,42,912 ಅಭ್ಯರ್ಥಿಗಳ ಪೈಕಿ 1,12,125 ಅಂದರೆ ಶೇ.78ರಷ್ಟು ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅದೇ ರೀತಿ, ಕಲ್ಯಾಣ ಕರ್ನಾಟಕ ವೃಂದದ 38,332 ಪೈಕಿ 32,694 ಅಂದರೆ ಶೇ.85ರಷ್ಟು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಕೆಇಎ ಮಾಹಿತಿ ನೀಡಿದೆ.

ಮಿಕ್ಕುಳಿದ ವೃಂದದ ಪರೀಕ್ಷೆಯು ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳ ಒಟ್ಟು 333 ಕೇಂದ್ರಗಳಲ್ಲಿ ಬೆಳಗ್ಗೆ 10:30ಕ್ಕೆ ನಡೆದಿದೆ. ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ನಿಗದಿಯಾಗಿದ್ದ ಪರೀಕ್ಷೆಯು ನಾಲ್ಕು ಜಿಲ್ಲೆಗಳ 85 ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆದಿದೆ ಎಂದು ಕೆಇಎ ತಿಳಿಸಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಲೋಪಗಳು ನಡೆಯದಂತೆ ತೀವ್ರ ನಿಗಾ ವಹಿಸಲು ಕೆಇಎ ಕಚೇರಿಯಲ್ಲಿ ವಿಶೇಷ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿತ್ತು. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹಾಗೂ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಕಮಾಂಡ್ ಸೆಂಟರ್‍ನಲ್ಲಿ ಖುದ್ದು ಉಪಸ್ಥಿತರಿದ್ದು, ಪರೀಕ್ಷಾ ಪ್ರಕ್ರಿಯೆಗಳ ಮೇಲೆ ನಿರಂತರ ನಿಗಾ ವಹಿಸಿದ್ದರು.

Tags

Police constable
share
ವಾರ್ತಾಭಾರತಿ
ವಾರ್ತಾಭಾರತಿ
Next Story
X