ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಂದೂಡಿಕೆ

ಬೆಂಗಳೂರು, ಮೇ 10: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ನಿಧನದ ಹಿನ್ನೆಲೆಯಲ್ಲಿ ನಾಳೆ(ಮೇ 11) ನಿಗದಿಯಾಗಿದ್ದ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಲಾಗಿದೆ.
ಬಾಗಲಕೋಟೆ ಕ್ಷೇತ್ರದ ಎಚ್.ವೈ.ಮೇಟಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಾಲಗಕೋಟೆ ಹಾಗೂ ದಾವಣಗೆರೆ ಕ್ಷೇತ್ರದಿಂದ ಆಯ್ಕೆಯಾಗಿರುವ ಉಮೇಶ ಮೇಟಿ ಹಾಗೂ ಸಮರ್ಥ್ ಶಾಮನೂರು ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಕಾರ್ಯದರ್ಶಿ ವಿಶಾಲಾಕ್ಷಿ ತಿಳಿಸಿದ್ದಾರೆ.
Next Story




