Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸರಕಾರಿ ಜಾಹೀರಾತಿನಲ್ಲಿ ಡಿಸಿಎಂ...

ಸರಕಾರಿ ಜಾಹೀರಾತಿನಲ್ಲಿ ಡಿಸಿಎಂ ಡಾ.ಪರಮೇಶ್ವರ್ ಫೋಟೋ ಮಾಯ, ಏನಾಯಿತು ಕಾಂಗ್ರೆಸ್‍ನ ಅಹಿಂದ ಜಪ : ಪ್ರಹ್ಲಾದ್ ಜೋಶಿ

ವಾರ್ತಾಭಾರತಿವಾರ್ತಾಭಾರತಿ14 Jun 2026 6:56 PM IST
share
ಸರಕಾರಿ ಜಾಹೀರಾತಿನಲ್ಲಿ ಡಿಸಿಎಂ ಡಾ.ಪರಮೇಶ್ವರ್ ಫೋಟೋ ಮಾಯ, ಏನಾಯಿತು ಕಾಂಗ್ರೆಸ್‍ನ ಅಹಿಂದ ಜಪ : ಪ್ರಹ್ಲಾದ್ ಜೋಶಿ

ಬೆಂಗಳೂರು : ‘ಅಹಿಂದ' ಮಂತ್ರ ಜಪಿಸುತ್ತಿದ್ದ ಕಾಂಗ್ರೆಸ್ ಇದೀಗ ಅದಕ್ಕೆ ತದ್ವಿರುದ್ಧವಾಗಿ ವರ್ತಿಸುತ್ತಿದೆ. ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯವನ್ನು ಕಡೆಗಣಿಸುವ ಮತ್ತು ಅದೇ ‘ದಲಿತ ವಿರೋಧಿ ನೀತಿ' ಮುಂದುವರಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ.

ರವಿವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ರಾಜ್ಯ ಸರಕಾರದ ಅಧಿಕೃತ ಜಾಹೀರಾತುಗಳಲ್ಲಿ ಹಿರಿಯ ದಲಿತ ನಾಯಕ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಹೆಸರು ಕೈಬಿಡುವ ಮೂಲಕ ಕಾಂಗ್ರೆಸ್ ಸರಕಾರವು ದಲಿತ ನಾಯಕರನ್ನು ಅಪಮಾನಿಸುವ ಸಂಸ್ಕೃತಿಯನ್ನು ಪ್ರದರ್ಶಿಸಿದೆ ಎಂದು ಆರೋಪಿಸಿದ್ದಾರೆ.

ಅಹಿಂದ ಸಿದ್ಧಾಂತದಡಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರ ಪರ ಹೋರಾಡುವುದಾಗಿ ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷ ಸದಾ ಈ ಸಮುದಾಯಗಳ ನಾಯಕರನ್ನು ನಿರ್ಲಕ್ಷಿಸುತ್ತಲೇ ಬಂದಿದೆ. ರಾಜ್ಯ ಸರಕಾರ ಮತ್ತು ಸಿಎಂ ಡಿ.ಕೆ.ಶಿವಕುಮಾರ್ ಪದೇ ಪದೇ ದಲಿತ, ಅಹಿಂದ ನಾಯಕರನ್ನು ಕಡೆಗಣಿಸುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

‘ಹಸಿರು ಬೆಂಗಳೂರು’ ಉಪಕ್ರಮವನ್ನು ಉತ್ತೇಜಿಸುವ ಇತ್ತೀಚಿನ ಸರಕಾರಿ ಜಾಹೀರಾತಿನಿಂದಲೂ ಉಪಮುಖ್ಯಮಂತ್ರಿ ಅವರನ್ನು ಹೊರಗಿಡಲಾಗಿದೆ. ಆದರೆ, ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಕೃಷ್ಣ ಭೈರೇಗೌಡ ಅವರಿನ್ನೂ ವಹಿಸಿಕೊಳ್ಳದೇ ಇದ್ದರೂ ಜಾಹೀರಾತುಗಳಲ್ಲಿ ‘ಬೆಂಗಳೂರು ನಗರಾಭಿವೃದ್ಧಿ ಸಚಿವ’ರಾಗಿ ತೋರಿಸಲಾಗಿದೆ. ಸರಕಾರದ ಈ ವ್ಯತಿರಿಕ್ತ ನಿಲುವು ಏನನ್ನು ತೋರುತ್ತದೆ? ಎಂದು ಜೋಶಿ ಪ್ರಶ್ನಿಸಿದ್ದಾರೆ.

ಈ ಹಿಂದೆ ಡಾ.ಬಿ.ಆರ್.ಅಂಬೇಡ್ಕರ್, ಬಾಬುಜಗಜೀವನ್ ರಾಮ್ ಮತ್ತು ಸೀತಾರಾಮ್ ಕೇಸರಿ ಅವರಂತಹ ನಾಯಕರಿಗೆ ಅಗೌರವ ತೋರಿದ್ದ ಕಾಂಗ್ರೆಸ್, ಇದೀಗ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಮತ್ತು ಡಾ.ಜಿ.ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿತು. ಸರಕಾರಿ ಜಾಹೀರಾತಿನಲ್ಲಿ ಕಡೆಗಣಿಸುತ್ತಿದ್ದು, ಹಳೇ ರಾಜಕೀಯ ಚಳಿಯನ್ನೇ ಮುಂದುವರೆಸಿದೆ ಎಂದು ಜೋಶಿ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಅವರ ಅವಧಿಯಲ್ಲಿ ಡಿಸಿಎಂ ಫೋಟೋವನ್ನು ಸರಕಾರಿ ಜಾಹೀರಾತುಗಳಲ್ಲಿ ನಿಯಮಿತವಾಗಿ ಸೇರಿಸಲಾಗುತ್ತಿತ್ತು. ಆದರೆ, ಡಿ.ಕೆ.ಶಿವಕುಮಾರ ಆಡಳಿತ ಅದಕ್ಕೆ ತದ್ವಿರುದ್ಧವಾಗಿದೆ. ಉದ್ದೇಶಪೂರ್ವಕವಾಗಿ ಡಾ.ಪರಮೇಶ್ವರ್ ಅವರನ್ನು ಹೊರಗಿಟ್ಟಂತಿದೆ. ಇದು ಸಮಗ್ರ ಪ್ರಾತಿನಿಧ್ಯವನ್ನು ಪ್ರಶ್ನಿಸುವಂತಿದೆ ಎಂದು ಜೋಶಿ ಕಿಡಿಕಾರಿದ್ದಾರೆ.

Tags

Prahlad Joshi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X