Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯದ 21 ಪೊಲೀಸರಿಗೆ ರಾಷ್ಟ್ರಪತಿ ಪದಕ

ರಾಜ್ಯದ 21 ಪೊಲೀಸರಿಗೆ ರಾಷ್ಟ್ರಪತಿ ಪದಕ

ವಾರ್ತಾಭಾರತಿವಾರ್ತಾಭಾರತಿ25 Jan 2025 7:34 PM IST
share
ರಾಜ್ಯದ 21 ಪೊಲೀಸರಿಗೆ ರಾಷ್ಟ್ರಪತಿ ಪದಕ

ಬೆಂಗಳೂರು : ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಶ್ಲಾಘನೀಯ ಸೇವೆ ಸಲ್ಲಿಸಿದ ಇಬ್ಬರು ಡಿಐಜಿಪಿ ಹಾಗೂ ಕೆಎಸ್ಸಾಆರ್ಪಿಯ ಕಮಾಂಡೆಂಟ್ ಸೇರಿದಂತೆ ಒಟ್ಟು 21 ಪೊಲೀಸರಿಗೆ ಪ್ರಸ್ತುತ ಸಾಲಿನ ರಾಷ್ಟ್ರೀಯ ಪದಕ ಲಭಿಸಿದೆ.

ವಿಶಿಷ್ಟ ಸೇವಾ ಪದಕ ಗೌರವಕ್ಕೆ ಕೆಎಸ್ಸಾಆರ್ಪಿ ಡಿಐಜಿಪಿ ಬಸವರಾಜ ಶರಣಪ್ಪ ಜಿಳ್ಳೆ - ಡಿಐಜಿಪಿ, ಕೆಎಸ್ಸಾಆರ್ಪಿ ಕಮಾಂಡೆಂಟ್ ಹಂಝಾ ಹುಸೇನ್ ಭಾಜರಾಗಿದ್ದಾರೆ.

ಶ್ಲಾಘನೀಯ ಸೇವಾ ಪದಕ ಪುರಸ್ಕೃತರು :

ಡಿಸಿಆರ್‌ಇ ಡಿಐಜಿಪಿ ರೇಣುಕಾ ಕೆ.ಸುಕುಮಾರ್, ಪೊಲೀಸ್ ಪ್ರಧಾನ ಕಚೇರಿ ಎಐಜಿಪಿ ಡಾ.ಸಂಜೀವ್ ಎಂ.ಪಾಟೀಲ್, ಐಆರ್‌ಬಿ ಕಮಾಂಡೆಂಟ್ ಬಿ.ಎಂ.ಪ್ರಸಾದ್, ಕೆಎಸ್ಸಾಆರ್ಪಿ ಉಪ ಕಮಾಂಡೆಂಟ್ ಎನ್.ವೀರೇಂದ್ರ ನಾಯಕ್, ಸಿಸಿಬಿ ಎಸಿಪಿ ಡಿ.ಗೋಪಾಲ್ ಜೋಗಿನ, ಡಿವೈಎಸ್ಪಿ ಗೋಪಾಲಕೃಷ್ಣ ಬಿ.ಗೌಡರ್.

ಪೊಲೀಸ್ ಇನ್ಸ್‍ಪೆಕ್ಟರ್‌ಗಳಾದ ಎಚ್.ಗುರುಬಸವರಾಜ, ಎಚ್.ಜಯರಾಜ್, ಪ್ರದೀಪ್ ಬಿ.ಆರ್, ಮುಹಮ್ಮದ್ ಮುಕರ್ರಮ್, ವಸಂತ ಕುಮಾರ್ ಎಂ.ಎ ಹಾಗೂ ಎಎಸ್ಸೈಗಳಾದ ವಿ.ಜಿ.ಮಂಜುನಾಥ್, ಅಲ್ತಾಫ್ ಹುಸೇನ್ ಎನ್ ದಖನಿ, ಕೆಎಸ್ಸಾಆರ್ಪಿಯ ಆರ್‌ಎಚ್‍ಸಿ ಬಲೇಂದ್ರನ್.

ಸಿಎಚ್‍ಸಿ ಅರುಣ ಕುಮಾರ್, ಚಿಕ್ಕಮಗಳೂರಿನ ಡಿಪಿಒ ಸಿಎಚ್‍ಸಿ ನಯಾಝ್ ಅಂಜುಮ್, ಸಿಎಚ್‍ಸಿಗಳಾದ ಶ್ರೀನಿವಾಸ್ ಎಂ., ಶಿವಾನಂದ.ಬಿ, ಗುಪ್ತ ವಾರ್ತೆಯ ಹಿರಿಯ ಗುಪ್ತ ಸಹಾಯಕ, ಪಿ.ಎಂ.ಅಶ್ರಫ್ ಭಾಜನರಾಗಿದ್ದಾರೆ.

ಗೃಹ ದಳ: ಕರ್ನಾಟಕ ಗೃಹ ರಕ್ಷಕ ದಳ ಮತ್ತು ನಾಗರಿಕ ರಕ್ಷಣಾ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಆರು ಜನ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಇಬ್ಬರು ಅಧಿಕಾರಿಗಳು 2025ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ನೀಡಲಾಗುವ ರಾಷ್ಟ್ರಪತಿಗಳ ಪದಕಕ್ಕೆ, ಪಾತ್ರರಾಗಿದ್ದಾರೆ.

ವಿಜಯನಗರ ಗೃಹ ರಕ್ಷಕ ದಳದ ಹಿರಿಯ ಪ್ಲಾಟೂನ್ ಕಮಾಂಡರ್ ಗಿರೀಶ್ ಎಸ್‍ಎಂ., ಮೈಸೂರು ಜಿಲ್ಲೆಯ ಗೃಹ ರಕ್ಷಕ ದಳದ ಹಿರಿಯ ಪ್ಲಾಟೂನ್ ಕಮಾಂಡರ್ ನಿಂಗರಾಜು ಪಿ. ಹಾಗೂ ಕಂಪೆನಿ ಕ್ವಾಟರ್ ಮಾಸ್ಟರ್ ಸೆರ್‌ ಗಂಟ್ ಬಾಬುರಾವ್ ಬಿ.ಇ. , ಬೆಂಗಳೂರಿನ ನಾಗರೀಕ ರಕ್ಷಣಾ ಅಧಿಕಾರಿ ಕಮಾಂಡಿಂಗ್ ತರಬೇತಿ ವಿಭಾಗದ ಡಾ.ಮ್ಯಾಥ್ಯೂ ವರ್ಗೀಸ್ ಹಾಗೂ ಡಿವೀಜನಲ್ ವಾರ್ಡನ್‍ಗಳಾದ ಇಸ್ಮಾಯಿಲ್ ಮುಹಮ್ಮದ್ ಮಿರ್ಜಾ ಮತ್ತು ಮುಹಮ್ಮದ್ ಅಝೀಮುಲ್ಲಾ ಈ ಪದಕಕ್ಕೆ ಪಾತ್ರರಾಗಿದ್ದಾರೆ.

ಹಾಗೆಯೇ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಅಧಿಕಾರಿಗಳಾದ ಉಪನಿರ್ದೇಶಕರಾದ (ಅಗ್ನಿ ನಿಯಂತ್ರಣ) ಡಾ.ಯೂನಸ್ ಅಲಿ ಕೌಸರ್ ಹಾಗೂ ಉಪನಿರ್ದೇಶಕರಾದ (ಆಡಳಿತ) ತಿಪ್ಪೇಸ್ವಾಮಿ.ಜಿ ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ ವಿಶಿಷ್ಟ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ಪಾತ್ರರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X