Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಜೆಪಿಯವರು ಕೇಂದ್ರದ ವಿರುದ್ಧ...

ಬಿಜೆಪಿಯವರು ಕೇಂದ್ರದ ವಿರುದ್ಧ ಪ್ರತಿಭಟನೆ ಮಾಡಲಿ : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ1 April 2025 9:57 PM IST
share
ಬಿಜೆಪಿಯವರು ಕೇಂದ್ರದ ವಿರುದ್ಧ ಪ್ರತಿಭಟನೆ ಮಾಡಲಿ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಕೊನೆಗೂ ಬಿಜೆಪಿಯವರು ಬೆಲೆ ಏರಿಕೆಯ ಬಗ್ಗೆ ಮಾತನಾಡುವ ಮನಸ್ಸು ಮಾಡಿದ್ದು ಉತ್ತಮ ಬೆಳವಣಿಗೆ. ಬಿಜೆಪಿಯವರು ಅಸಲಿಗೆ ಪ್ರತಿಭಟನೆ ನಡೆಸಬೇಕಿರುವುದು ಕೇಂದ್ರ ಸರಕಾರದ ವಿರುದ್ಧ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಎಕ್ಸ್‌ ನಲ್ಲಿ ಪೋಸ್ಟ್ ಮಾಡಿದ ಅವರು, ಒಂದು ವರ್ಷದಲ್ಲಿ ಒಂದು ಸಾಮಾನ್ಯ ಸಸ್ಯಾಹಾರಿ ಊಟದ ಬೆಲೆ ಶೇ.57ರಷ್ಟು ದುಬಾರಿಯಾಗಿದೆ. ತರಕಾರಿ ಹಾಗೂ ಬೇಳೆ ಕಾಳುಗಳು ಸೇರಿದಂತೆ ಅಡುಗೆಗೆ ಸಂಬಂಧಿಸಿದ ವಸ್ತುಗಳ ಬೆಲೆಗಳು ಒಂದೂವರೆ ಪಟ್ಟು ಹೆಚ್ಚಾಗಿವೆ ಎಂದು ಹೇಳಿದ್ದಾರೆ.

ಪ್ರಸ್ತುತ ಕಚ್ಚಾ ತೈಲದ ಬೆಲೆ ಶೇ.34 ಇಳಿಕೆಯಾಗಿದೆ. ಆದರೆ ದೇಶದ ನಾಗರಿಕರಿಗೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ದುಬಾರಿ ಸುಂಕ, ತೆರಿಗೆಗಳನ್ನು ವಿಧಿಸಿ 36.58 ಲಕ್ಷ ಕೋಟಿ ರೂ. ವನ್ನು ಕೇಂದ್ರ ಸರಕಾರ ಸಂಗ್ರಹಿಸಿದೆ. ಆರೋಗ್ಯ ಕ್ಷೇತ್ರದ ಹಣದುಬ್ಬರ ಶೇ.14 ಹೆಚ್ಚಿದೆ, ಸಾಮಾನ್ಯ ಔಷಧಗಳ ಬೆಲೆಯೂ ಅಧಿಕವಾಗಿ ಹೆಚ್ಚಳವಾಗಿದೆ. ಜೀವ ವಿಮೆ, ಆರೋಗ್ಯ ವಿಮೆಗಳ ಮೇಲೂ ಶೇ.18 ಜಿಎಸ್‍ಟಿ ಹೇರಲಾಗಿದೆ. ಮೊದಲ ಬಾರಿಗೆ ಕೃಷಿ ಉತ್ಪನ್ನಗಳಿಗೂ ಜಿಎಸ್‍ಟಿ ಹಾಕಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕೊನೆಗೂ ಬಿಜೆಪಿಯವರು ಬೆಲೆ ಏರಿಕೆಯ ಬಗ್ಗೆ ಮಾತನಾಡುವ ಮನಸು ಮಾಡಿದ್ದು ಉತ್ತಮ ಬೆಳವಣಿಗೆ!
ಬಿಜೆಪಿಯವರು ಅಸಲಿಗೆ ಮಾತನಾಡಬೇಕಿರುವುದು ಜನಾಕ್ರೋಶ ಪ್ರತಿಭಟನೆ ನಡೆಸಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ.

- ಕಳೆದ ಒಂದು ವರ್ಷದಲ್ಲಿ ಒಂದು ಸಾಮಾನ್ಯ ಸಸ್ಯಾಹಾರಿ ಊಟದ ಬೆಲೆ 57%ನಷ್ಟು ದುಬಾರಿಯಾಗಿದೆ.

- ತರಕಾರಿ ಹಾಗೂ ಬೇಳೆ ಕಾಳುಗಳು…

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) April 1, 2025

ಎಪ್ರಿಲ್‍ನಿಂದ ಎಟಿಎಂ ಶುಲ್ಕಗಳನ್ನೂ ಏರಿಸುತ್ತಿದೆ ಕೇಂದ್ರ ಸರಕಾರ. 2018ರಿಂದ 2024ರವರೆಗೆ ಕನಿಷ್ಠ ಠೇವಣಿ ನಿರ್ವಹಿಸದ ದಂಡವಾಗಿ ಬಡ ಜನರಿಂದ 43,500 ಕೋಟಿ ರೂ. ಹಣ ಲೂಟಿಗೈದಿದೆ. ಅಕ್ಕಿ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆಯಲ್ಲಿ ಶೇ.70 ರಿಂದ ಶೇ.80ನಷ್ಟು ದುಪ್ಪಟಾಗಿವೆ ಎಂದು ಹೇಳಿದ್ದಾರೆ.

100 ಕೋಟಿಗೂ ಅಧಿಕ ಭಾರತೀಯರಿಗೆ ಅಗತ್ಯ ಸೇವೆಗಳಿಗೆ ಖರ್ಚು ಮಾಡಲಾಗದಷ್ಟು ಖರೀದಿ ಸಾಮಥ್ರ್ಯ ಕುಸಿದಿದೆ ಎಂದು ಬ್ಲೂಮ್ ವರದಿ ಮಾಡಿದೆ. ಟೋಲ್ ದರ ಏರಿಕೆಯು ಭಾರತೀಯರನ್ನು ಕಂಗಾಲಾಗಿಸಿದೆ. ಗ್ಯಾಸ್ ಸಿಲಿಂಡರ್ ದರ ಜನರನ್ನು ಒಲೆ ಹಚ್ಚದೆಯೇ ಸುಡುತ್ತಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರಕಾರದ ಕಳಪೆ ಆರ್ಥಿಕ ನೀತಿಯಿಂದಾಗಿ ಹಣದುಬ್ಬರವು ಗಣನೀಯ ಏರಿಕೆಯಾಗಿದೆ, ಇದಕ್ಕೆ ಸರಿ ಹೊಂದಿಸಲು ಅನಿವಾರ್ಯವಾಗಿ ನಮ್ಮ ಸರಕಾರ ಕೆಲವೊಂದಿಷ್ಟು ಬೆಲೆಗಳನ್ನು ಪರಿಷ್ಕರಿಸಿದೆ. ಆದರೆ ಅದಕ್ಕೆ ಮೂಲ ಕಾರಣ ಕೇಂದ್ರ ಸರಕಾರ. ಬಿಜೆಪಿ ನಾಯಕರು ಜನರ ಎದೆಗೆ ಕಿವಿಗೊಟ್ಟರೆ ಆ ಆಕ್ರೋಶ ಕೇಳಿಸಲಿದೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X