Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಉದ್ಯಮದ ಸಹಭಾಗಿತ್ವದಿಂದ ಭಾರತವನ್ನು ಎಐ...

ಉದ್ಯಮದ ಸಹಭಾಗಿತ್ವದಿಂದ ಭಾರತವನ್ನು ಎಐ ಆಧಾರಿತ ಉತ್ಪನ್ನ ರಾಷ್ಟ್ರವನ್ನಾಗಿ ರೂಪಿಸೋಣ : ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ23 July 2026 9:40 PM IST
share
ಉದ್ಯಮದ ಸಹಭಾಗಿತ್ವದಿಂದ ಭಾರತವನ್ನು ಎಐ ಆಧಾರಿತ ಉತ್ಪನ್ನ ರಾಷ್ಟ್ರವನ್ನಾಗಿ ರೂಪಿಸೋಣ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಭಾರತವನ್ನು ಕೃತಕ ಬುದ್ಧಿಮತ್ತೆ(ಎಐ) ಆಧಾರಿತ ಜಾಗತಿಕ ಉತ್ಪನ್ನ ರಾಷ್ಟ್ರವನ್ನಾಗಿ ರೂಪಿಸಲು ಸರಕಾರ, ಉದ್ಯಮ ಮತ್ತು ಶೈಕ್ಷಣಿಕ ಸಂಸ್ಥೆಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕಾಗಿದೆ ಎಂದು ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಕರೆ ನೀಡಿದ್ದಾರೆ.

ಗುರುವಾರ ನಗರದಲ್ಲಿ ನಡೆದ ‘22ನೇ ಸಿಐಐ ಇನೋವೇಷನ್ ಸಮ್ಮೇಳನ’ದಲ್ಲಿ ಮಾತನಾಡಿದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯವು ದೇಶದ ಮಾಹಿತಿ ತಂತ್ರಜ್ಞಾನ ಹಾಗೂ ನವೋದ್ಯಮ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ಮುಂದಿನ ಹಂತದ ಬೆಳವಣಿಗೆಯು ಕೇವಲ ತಂತ್ರಜ್ಞಾನ ಅಭಿವೃದ್ಧಿಗೆ ಸೀಮಿತವಾಗಿರದೆ, ಪ್ರತಿಭೆ, ಸಂಶೋಧನೆ, ಉದ್ಯಮಶೀಲತೆ, ಜಾಗತಿಕ ಸಹಭಾಗಿತ್ವ ಮತ್ತು ಜವಾಬ್ದಾರಿಯುತ ಕೃತಕ ಬುದ್ಧಿಮತ್ತೆಯ ಬಳಕೆಯ ಮೇಲೆ ಅವಲಂಬಿತವಾಗಿರಲಿದೆ ಎಂದರು.

ಭಾರತವನ್ನು ಎಐ ಆಧಾರಿತ ಉತ್ಪನ್ನ ರಾಷ್ಟ್ರವನ್ನಾಗಿ ರೂಪಿಸಲು ಸರಕಾರ, ಉದ್ಯಮ ಮತ್ತು ಶಿಕ್ಷಣ ಸಂಸ್ಥೆಗಳು ಪ್ರತ್ಯೇಕವಾಗಿ ಕೆಲಸ ಮಾಡುವ ಕಾಲ ಮುಗಿದಿದೆ. ರಾಜ್ಯವು ಆರಂಭದಿಂದಲೂ ಸಹಭಾಗಿತ್ವದ ಮಾದರಿಯಲ್ಲಿ ನವೋದ್ಯಮವನ್ನು ಉತ್ತೇಜಿಸುತ್ತಿದೆ. ಸರಕಾರದ ಪಾತ್ರ ಕೇವಲ ನೀತಿಗಳನ್ನು ರೂಪಿಸುವುದಲ್ಲ, ಉದ್ಯಮ, ಸಂಶೋಧಕರು ಮತ್ತು ನವೋದ್ಯಮಿಗಳೊಂದಿಗೆ ಕೈಜೋಡಿಸಿ ಪ್ರತಿಭೆ, ಸಂಶೋಧನೆ, ಸ್ಟಾರ್ಟ್‍ಅಪ್‍ಗಳು ಹಾಗೂ ಜವಾಬ್ದಾರಿಯುತ ಎಐ ಬೆಳವಣಿಗೆಗೆ ಅನುಕೂಲಕರ ಪರಿಸರ ನಿರ್ಮಿಸುವುದಾಗಿದೆ ಎಂದು ಅವರು ತಿಳಿಸಿದರು.

ಸಂಶೋಧನಾ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಮತ್ತು ಕೈಗಾರಿಕೆಗಳ ನಡುವಿನ ಸಹಯೋಗವನ್ನು ಮತ್ತಷ್ಟು ಬಲಪಡಿಸುವ ಮೂಲಕ ಉತ್ಕೃಷ್ಟತಾ ಕೇಂದ್ರಗಳ ಸಾಮರ್ಥ್ಯ ವನ್ನು ವಿಸ್ತರಿಸಲಾಗುತ್ತಿದೆ. ಪ್ರಸ್ತಾವಿತ ಎಐ ವಿಶ್ವವಿದ್ಯಾಲಯದ ಮೂಲಕ ಜವಾಬ್ದಾರಿಯುತ ಎಐ ಶಿಕ್ಷಣ, ಸಂಶೋಧನೆ ಹಾಗೂ ಕೈಗಾರಿಕೆಯ ಅಗತ್ಯಗಳಿಗೆ ಹೊಂದುವ ಪಠ್ಯಕ್ರಮಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರಕಾರ ಆದ್ಯತೆ ನೀಡುತ್ತಿದೆ ಎಂದು ಅವರು ತಿಳಿಸಿದರು.

ಉದ್ಯಮ ವಲಯವು ಕೇವಲ ಹೂಡಿಕೆ ಮಾಡುವುದಕ್ಕಷ್ಟೇ ಸೀಮಿತವಾಗದೆ, ಸ್ಟಾರ್ಟ್‍ಅಪ್‍ಗಳಿಗೆ ಮಾರ್ಗದರ್ಶನ ನೀಡುವುದು, ಶಿಕ್ಷಣ ಸಂಸ್ಥೆಗಳನ್ನು ದತ್ತು ಪಡೆದು ಕೌಶಲ್ಯಾಭಿವೃದ್ಧಿಗೆ ಕೈಜೋಡಿಸುವುದು, ಉತ್ಕೃಷ್ಟತಾ ಕೇಂದ್ರಗಳಲ್ಲಿ ಪಾಲುದಾರರಾಗುವುದು ಹಾಗೂ ಸಂಶೋಧನೆ ಮತ್ತು ಉತ್ಪನ್ನ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಸಚಿವರು ಕರೆ ನೀಡಿದರು.

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X