Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದಲಿತರ ಮೇಲಿನ ದೌರ್ಜನ್ಯಗಳನ್ನು...

ದಲಿತರ ಮೇಲಿನ ದೌರ್ಜನ್ಯಗಳನ್ನು ಅಭಿವ್ಯಕ್ತಿಸುವ ಸಾಹಿತ್ಯ ಅಗತ್ಯ: ಪ್ರೊ.ಬರಗೂರು ರಾಮಚಂದ್ರಪ್ಪ

ದಲಿತ ಸಾಹಿತ್ಯ ಪರಿಷತ್‌ ವತಿಯಿಂದ ʼದಲಿತ ಸಾಹಿತ್ಯ ಸಮ್ಮೇಳನʼ

ವಾರ್ತಾಭಾರತಿವಾರ್ತಾಭಾರತಿ22 April 2025 11:09 PM IST
share
ದಲಿತರ ಮೇಲಿನ ದೌರ್ಜನ್ಯಗಳನ್ನು ಅಭಿವ್ಯಕ್ತಿಸುವ ಸಾಹಿತ್ಯ ಅಗತ್ಯ: ಪ್ರೊ.ಬರಗೂರು  ರಾಮಚಂದ್ರಪ್ಪ

ಬೆಂಗಳೂರು : ವರ್ತಮಾನದಲ್ಲಿ ದಲಿತರ ಮೇಲಿನ ದೌರ್ಜನ್ಯಗಳನ್ನು ಪ್ರತಿರೋಧಿಸುವ ಚಳವಳಿಗಳು ಹಾಗೂ ಅಭಿವ್ಯಕ್ತಿಸುವ ಸಾಹಿತ್ಯದ ಅಗತ್ಯವಿದೆ ಎಂದು ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.

ಮಂಗಳವಾರ ನಗರದ ಕನ್ನಡ ಭವನದಲ್ಲಿರುವ ನಯನ ಸಭಾಂಗಣದಲ್ಲಿ ದಲಿತ ಸಾಹಿತ್ಯ ಪರಿಷತ್ತು, ಬೆಂಗಳೂರು ಘಟಕದ ವತಿಯಿಂದ ನಡೆದ ಜಿಲ್ಲಾಮಟ್ಟದ ಪ್ರಥಮ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇವತ್ತಿಗೂ ದಲಿತರ ಮೇಲಿನ ದೌರ್ಜನ್ಯಗಳು ಕಡಿಮೆಯಾಗಿಲ್ಲ. ಮಹಿಳೆಯರ ಅತ್ಯಾಚಾರಗಳೂ ಕ್ಷೀಣಿಸಿಲ್ಲ. ಇದಕ್ಕೆ ತಕ್ಕ ನ್ಯಾಯ ಸಿಗುತ್ತಿಲ್ಲ ಎಂಬುದು ನೋವಿನ ಸಂಗತಿ ಎಂದರು.

ಈ ಹಿಂದೆ ಇದ್ದಂತಹ ದಲಿತ ಚಳವಳಿಗಳು, ಹೋರಾಟಗಳು ಈಗ ಒಡೆದು ಓಳಾಗಿವೆ. ಆದ್ದರಿಂದ ಸರಿಯಾದ ಪ್ರತಿರೋಧ, ಖಂಡನೆ ದೊರೆಯುತ್ತಿಲ್ಲ. ದಲಿತ ಚಳವಳಿಗಳಲ್ಲಿ ತಾತ್ವಿಕತೆ ಬರಬೇಕು, ಆಗ ಮಾತ್ರ ಹೋರಾಟ ಫಲ ಕಾಣಲು ಸಾಧ್ಯ. ಅಂಬೇಡ್ಕರ್ ಹೇಳಿದ ಸಹೋದರತ್ವ ಪರಿಕಲ್ಪನೆ ಇವತ್ತಿನ ದಲಿತ ಚಳವಳಿ, ಹೋರಾಟಗಳಲ್ಲಿ ಒಳಗೊಳ್ಳಬೇಕು. ಹೀಗಿದ್ದಾಗ ಬಂಡವಾಳಶಾಹಿ, ಪುರೋಹಿತಶಾಹಿ ಜಾಗೃತಗೊಂಡಿರುವ ಈ ಸನ್ನಿವೇಶದಲ್ಲಿ ಸಂಘಟಿತ ಪ್ರತಿರೋಧ ಸಾಧ್ಯವಾಗುತ್ತದೆ ಎಂದು ಪ್ರೊ.ಬರಗೂರು ರಾಮಚಂದ್ರಪ್ಪ ಹೇಳಿದರು.

ಅಸ್ಪೃಶ್ಯರಿಗೆ ಆದ ಅನುಭವ ಯಾವುದೇ ತಳ ಸಮುದಾಯಗಳಿಗೆ ಆಗಿಲ್ಲ. ಅರಿವಿನಿಂದ ಅಸ್ಪೃಶ್ಯತೆಯನ್ನು ಅರ್ಥ ಮಾಡಿಕೊಳ್ಳುವುದಕ್ಕೂ, ಅನುಭವದಿಂದ ಅಸ್ಪೃಶ್ಯತೆಯನ್ನು ಅರ್ಥ ಮಾಡಿಕೊಳ್ಳುವುದಕ್ಕೂ ಬಹಳ ವ್ಯತ್ಯಾಸವಿದೆ. ಹಾಗಾಗಿ ಅನುಭವ ಮತ್ತು ಅರಿವು ಇವೆರಡೂ ಸೇರಿ ಒಂದು ಸಂಘಟಿತ ಹೋರಾಟವನ್ನು ಕಟ್ಟಬೇಕಾಗಿದೆ ಎಂದು ಪ್ರೊ.ಬರಗೂರು ರಾಮಚಂದ್ರಪ್ಪ ಸಲಹೆ ನೀಡಿದರು.

ಏಕ ಭಾರತವು ಬಹುತ್ವ ಭಾರತವನ್ನು ಕೊಲ್ಲುತ್ತಿದೆ..!

ಬಂಡವಾಳಶಾಹಿ ಮತ್ತು ಬ್ರಾಹ್ಮಣಶಾಹಿ ಇವೆರಡೂ ದೇಶವನ್ನು ತನ್ನ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದೆ. ಇಂದು ದಲಿತರ ದೌರ್ಜನ್ಯ, ಹತ್ಯಾಕಾಂಡಗಳಿಗೂ ಸಿಗದಷ್ಟು ಪ್ರಚಾರ, ಪ್ರಾಮುಖ್ಯತೆ ಜನಿವಾರಕ್ಕೆ ಸಿಗುತ್ತಿರುವುದು ದುರಂತ. ಬಹುತ್ವದ ಪರಿಕಲ್ಪನೆಯ ಭಾರತವನ್ನು ಏಕ ಭಾರತವು ಕೊಲ್ಲುತ್ತಿದೆ. ಈ ನಿಟ್ಟಿನಲ್ಲಿ ನಾವು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ದಲಿತ ಹೋರಾಟಗಾರ ಮಾವಳ್ಳಿ ಶಂಕರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X