Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಭಾರತ ಏಕವಚನವಲ್ಲ, ಬಹುವಚನ :...

ಭಾರತ ಏಕವಚನವಲ್ಲ, ಬಹುವಚನ : ಪ್ರೊ.ಬರಗೂರು ರಾಮಚಂದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ17 May 2026 11:33 PM IST
share
ಭಾರತ ಏಕವಚನವಲ್ಲ, ಬಹುವಚನ : ಪ್ರೊ.ಬರಗೂರು ರಾಮಚಂದ್ರಪ್ಪ
‘ಕೊರಚ ಮಾತುಕತೆ’ ಮತ್ತು ಇಂಗ್ಲಿಷ್‌ ಅನುವಾದವಾದ ‘ದಿ ಕೊರಚಾಸ್ ಆಫ್ ಕರ್ನಾಟಕ’ ಕೃತಿಗಳ ಲೋಕಾರ್ಪಣೆ

ಬೆಂಗಳೂರು : ಭಾರತ ಏಕ ವಚನವಲ್ಲ. ಬಹು ವಚನವಾಗಿದೆ. ಬಹು ವಚನದ ಭಾರತದ ಒಳಗಡೆ ಬಹುಭಾಷೆ, ಬಹು ಸಂಸ್ಕೃತಿಯನ್ನು ನಾವು ಕಾಣಬಹುದು ಎಂದು ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.

ರವಿವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನೇಗಿಲ ಯೋಗಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ‘ಕೊರಚ ಮಾತುಕತೆ’ ಮತ್ತು ಇಂಗ್ಲಿಷ್‌ ಅನುವಾದವಾದ ‘ದಿ ಕೊರಚಾಸ್ ಆಫ್ ಕರ್ನಾಟಕ’ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತವು ಬಹು ಭಾಷೆ, ಸಂಸ್ಕೃತಿ, ಪದ್ಧತಿ, ಆಚಾರ-ವಿಚಾರವನ್ನು ಹೊಂದಿದೆ. ಆದುದರಿಂದ ಭಾರತವು ಏಕವಚನವಲ್ಲ, ಬಹುವಚನವಾಗಿದೆ. ಇಲ್ಲಿನ ಬುಡಕಟ್ಟು, ಅಲೆಮಾರಿ ಜನರ ಆಚಾರ-ವಿಚಾರ ಹಾಗೆಯೇ ಉಳಿಯುತ್ತದೆಯೇ. ನಾಗರಿಕತೆಗೆ ತಮ್ಮನ್ನು ತೆರೆದುಕೊಳ್ಳುತ್ತಾರೆಯೇ, ಅಸ್ಮಿತೆಯನ್ನು ಉಳಿಸಿಕೊಳ್ಳುತ್ತಾರೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ ಎಂದು ಬರಗೂರು ರಾಮಚಂದ್ರಪ್ಪ ತಿಳಿಸಿದರು.

ಜಗತ್ತಿನಲ್ಲಿ ಪ್ರಸ್ತುತ 6,703 ಭಾಷೆಗಳಿವೆ. ಆದರೆ ಅರ್ಧ ಜಗತ್ತು ಕೇವಲ 10 ಬಾಷೆಗಳನ್ನು ಮಾತ್ರ ವ್ಯವಹಾರಕ್ಕೆ ಬಳಸುತ್ತದೆ. ಈಗಾಗಲೇ 30 ಸಾವಿರ ಭಾಷೆಗಳು ನಶಿಸಿವೆ. ಬಳಸದೇ ಹೋದರೆ ಭಾಷೆ ಉಳಿಯುವುದಿಲ್ಲ, ಅಳಿಯುತ್ತಾ ಹೋಗುತ್ತದೆ ಎಂದು ಅವರು ತಿಳಿಸಿದರು.

ಕೆಲವು ಭಾಷೆಗಳನ್ನು ಆಯಾ ಸಮುದಾಯದಲ್ಲೂ ಬಳಸುತ್ತಿಲ್ಲ. ಮುಖ್ಯವಾಹಿನಿಯ ಜೀವನಕ್ಕೆ ಅತಿ ಮುಖ್ಯವಾದ ಈ ಸಣ್ಣ ಸಣ್ಣ ಸಮುದಾಯಗಳು ಪ್ರವೇಶ ಮಾಡುವ ಅನಿವಾರ್ಯವಾದ ಸಾಮಾಜಿಕ, ಆರ್ಥಿಕ ವಿಕಾಸ ನಮ್ಮಲ್ಲಿ ಉಂಟಾಗುತ್ತಿದೆ ಎಂದು ಬರಗೂರು ತಿಳಿಸಿದರು.

ನಮ್ಮಲ್ಲಿ ಊರಂಚಿನಲ್ಲಿ, ಕಾಡಂಚಿನಲ್ಲಿ, ಕಾಡಿನ ಒಳಗೆ ಜನ ಸಮುದಾಯಗಳು ವಾಸಿಸುತ್ತಿವೆ. ದೇಶದ 74,600 ಚದರ ಕಿ.ಮೀ. ಕಾಡಿನೊಳಗೆ 26 ಮಾದರಿಯ ಸಾಂಸ್ಕೃತಿಕ ವಿಶೇಷದ ಜನ ವಾಸಿಸುತ್ತಿದ್ದಾರೆ. ಇವರ ಭಾಷೆ, ಆಹಾರ ಪದ್ಧತಿ, ಸಂಸ್ಕೃತಿಯ ಬಗ್ಗೆ ನಮಗೆ ತಿಳಿದಿಲ್ಲ. 2011ರ ಜನಗಣತಿ ಪ್ರಕಾರ ಸುಮಾರು 11 ಕೋಟಿ ಜನ ಬುಡಕಟ್ಟು ಮತ್ತು ಅರೆ ಅಲೆಮಾರಿಗಳಿದ್ದಾರೆ. ದೇಶದ ಜನಸಂಖ್ಯೆಯಲ್ಲಿ ಶೇ.8.6ರಷ್ಟಿರುವ ಇವರ ಬಗ್ಗೆ ಎಷ್ಟರಮಟ್ಟಿಗೆ ನಮಗೆ ತಿಳಿದಿದೆ ಎಂದು ಪ್ರಶ್ನಿಸಿದರು.

ಕೊರಚ ಮಾತುಕತೆ ಕೃತಿಯು ಮುಖ್ಯ ವಾಹಿನಿಯ ಮೌನದ ಗಡ್ಡೆಗಳನ್ನು ಕರಗಿಸುತ್ತದೆ. ಆ ಮೂಲಕ ನಾವು ಇಲ್ಲಿದ್ದೇವೆ. ನಿಮ್ಮ ಜೊತೆ ನಮಗೆ ಬರುವ ಶಕ್ತಿ ಇದೆ ಎಂಬುದನ್ನು ತೋರಿಸಿಕೊಟ್ಟಿದ್ದೆ. ಎಚ್.ಆರ್.ಸ್ವಾಮಿ ಅವರು ವಿಶೇಷ ಅಧ್ಯಯನ ನಡೆಸಿ ಈ ಕೃತಿ ಹೊರ ತಂದಿದ್ದಾರೆ. ಅನೇಕ ಮಾದರಿಗಳನ್ನು ಸೇರಿಸಿ ಸಾಂಸ್ಕೃತಿಕ ಲೋಕಕ್ಕೆ ನೀಡಿದ ಅದ್ಭುತ ಕೊಡುಗೆ ಇದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಪ್ರೊ.ಹಂಪ ನಾಗರಾಜಯ್ಯ, ಪ್ರೊ.ಅಗ್ರಹಾರ ಕೃಷ್ಣಮೂರ್ತಿ, ರಾಷ್ಟ್ರೀಯ ಕಾನೂನು ಶಾಲೆಯ ತಳಸಮುದಾಯಗಳ ಅಧ್ಯಯನ ಕೇಂದ್ರ ಪ್ರಾಧ್ಯಾಪಕ ಡಾ.ಆರ್.ವಿ. ಚಂದ್ರಶೇಖರ್, ಲೇಖಕ ಡಾ.ಎಚ್.ಆರ್.ಸ್ವಾಮಿ, ತುಮಕೂರು ವಿವಿಯ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಬಸವರಾಜು ಜಿ. ಮತ್ತಿತರರು ಉಪಸ್ಥಿತರಿದ್ದರು.

‘ಕೊರಚ ಮಾತುಕತೆ’ ಕೃತಿಯು ಕನ್ನಡ ಸಾಂಸ್ಕೃತಿಕ ಲೋಕ ಅಷ್ಟೇ ಅಲ್ಲದೇ ಸಾಮಾಜಿಕ ಲೋಕಕ್ಕೆ ಕೊಟ್ಟ ದೊಡ್ಡ ಕೊಡುಗೆಯಾಗಿದೆ. ಇದೊಂದು ಅಸ್ಮಿತೆಯ ಹುಡುಕಾಟವಾಗಿದೆ. ಸಣ್ಣ ಸಣ್ಣ ಸಮುದಾಯಗಳು ಸಂಖ್ಯೆಯಿಂದ ಸಣ್ಣವು ಆದರೆ ಸಾಂಸ್ಕೃತಿಕವಾಗಿ ಬಹಳ ಮಹತ್ವದಿಂದ ಕೂಡಿವೆ.

-ಪ್ರೊ.ಬರಗೂರು ರಾಮಚಂದ್ರಪ್ಪ, ಹಿರಿಯ ಸಾಹಿತಿ

Tags

Prof. Baraguru Ramachandrappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X