Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ತರಗತಿಯಲ್ಲಿ ಮುಸ್ಲಿಮ್...

Bengaluru | ತರಗತಿಯಲ್ಲಿ ಮುಸ್ಲಿಮ್ ವಿದ್ಯಾರ್ಥಿಗೆ 13 ಬಾರಿ ‘ಟೆರರಿಸ್ಟ್‌’ ಎಂದ ಪ್ರಾಧ್ಯಾಪಕ ಡಾ.ಮುರಳೀಧರ್ ದೇಶಪಾಂಡೆ ಅಮಾನತು: ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ28 March 2026 10:32 AM IST
share
Bengaluru | ತರಗತಿಯಲ್ಲಿ ಮುಸ್ಲಿಮ್ ವಿದ್ಯಾರ್ಥಿಗೆ 13 ಬಾರಿ ‘ಟೆರರಿಸ್ಟ್‌’ ಎಂದ ಪ್ರಾಧ್ಯಾಪಕ ಡಾ.ಮುರಳೀಧರ್ ದೇಶಪಾಂಡೆ ಅಮಾನತು: ವಿಡಿಯೋ ವೈರಲ್

ಬೆಂಗಳೂರು: ನಗರದ ಪಿಇಎಸ್ ವಿಶ್ವವಿದ್ಯಾನಿಲಯದ ಇಲೆಕ್ಟ್ರಾನಿಕ್ ಸಿಟಿ ಕ್ಯಾಂಪಸ್ ನಲ್ಲಿ ಪ್ರಾಧ್ಯಾಪಕರೊಬ್ಬರು ಮುಸ್ಲಿಮ್ ವಿದ್ಯಾರ್ಥಿಯನ್ನು ತರಗತಿಯ ವೇಳೆ 13 ಬಾರಿ ‘ಟೆರರಿಸ್ಟ್’ ಎಂದು ಕರೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಡಾ. ಮುರಳೀಧರ್ ದೇಶಪಾಂಡೆ ಎಂದು ಗುರುತಿಸಲಾದ ಪ್ರಾಧ್ಯಾಪಕರು ಮಾರ್ಚ್ 27ರಂದು ತರಗತಿಯ ವೇಳೆ ವಿದ್ಯಾರ್ಥಿಯನ್ನು 13 ಬಾರಿ ‘ಟೆರರಿಸ್ಟ್’ ಎಂದು ಕರೆಯುವ ಮೂಲಕ ಅವಮಾನಿಸಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

‘ದಿ ಅಬ್ಸರ್ವರ್ ಪೋಸ್ಟ್’ ವರದಿ ಪ್ರಕಾರ, ಅಫಾನ್ ಎಂಬ ವಿದ್ಯಾರ್ಥಿಯನ್ನು ತರಗತಿಯಲ್ಲಿ ಪ್ರಾಧ್ಯಾಪಕರು ನಿಂದಿಸಿದ್ದಾರೆ ಎನ್ನಲಾಗಿದೆ. “ಇರಾನ್ ಯುದ್ಧವು ನಿಮ್ಮಂತಹವರಿಂದಾಗಿದೆ”, “ಟ್ರಂಪ್ ನಿಮ್ಮನ್ನು ಕರೆದೊಯ್ಯುತ್ತಾರೆ”, “ನೀವು ಮೂರ್ಖರು, ನೀವು ನರಕಕ್ಕೆ ಹೋಗುತ್ತೀರಿ” ಎಂಬ ಹೇಳಿಕೆಗಳನ್ನು ಸುಮಾರು 60 ವಿದ್ಯಾರ್ಥಿಗಳ ಎದುರು ನೀಡಿದ್ದಾರೆ ಎಂದು ವರದಿ ಹೇಳಿದೆ. ಇದರಿಂದಾಗಿ ತರಗತಿಯಲ್ಲಿ ಅವಮಾನಕಾರಿ ವಾತಾವರಣ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳನ್ನು ಅಳಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಅಫಾನ್ ಅವರಿಗೆ ಬೆಂಬಲ ನೀಡಿದ ಕೆಲವು ವಿದ್ಯಾರ್ಥಿಗಳನ್ನು “ತರಗತಿಯ ವೇಳೆ ಮಾತನಾಡಿದ ಕಾರಣ” ಅಮಾನತುಗೊಳಿಸಲಾಗಿದೆ ಎಂಬ ವರದಿಯೂ ಹೊರಬಂದಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿಲ್ಲ.

ಘಟನೆಯ ಬಳಿಕ ಪ್ರಾಧ್ಯಾಪಕರು ಕಾಲೇಜಿಗೆ ಕ್ಷಮೆಯಾಚಿಸಿದ್ದಾರೆ ಎನ್ನಲಾಗಿದ್ದು, ಅವರು ಅಫಾನ್ ಅವರಿಗೆ ನೇರವಾಗಿ ಕ್ಷಮೆಯಾಚಿಸಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ.

ವಿಡಿಯೋ ಬಹಿರಂಗವಾದ ಬಳಿಕ ಪಿಇಎಸ್ ವಿಶ್ವವಿದ್ಯಾಲಯ ಆಡಳಿತ ತಕ್ಷಣ ಕ್ರಮ ಕೈಗೊಂಡಿದ್ದು, ಪ್ರಾಧ್ಯಾಪಕರನ್ನು ಅಮಾನತುಗೊಳಿಸಿದೆ. ಮಾರ್ಚ್ 27ರ ಅಧಿಕೃತ ಆದೇಶದಲ್ಲಿ, “ವಿದ್ಯಾರ್ಥಿಯಿಂದ ಬಂದ ದೂರನ್ನು ಸ್ವೀಕರಿಸಲಾಗಿದೆ. ಪ್ರಕರಣದ ಕುರಿತು ಸಮಗ್ರ ವಿಚಾರಣೆ ನಡೆಯುವವರೆಗೆ ನಿಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ” ಎಂದು ಉಲ್ಲೇಖಿಸಿ ಆದೇಶ ನೀಡಲಾಗಿದೆ. ಈ ಆದೇಶಕ್ಕೆ ಕುಲಪತಿಗಳು ಸಹಿ ಹಾಕಿದ್ದಾರೆ. ಆದರೆ, ಘಟನೆಯ ಸ್ವರೂಪದ ಬಗ್ಗೆ ಹೆಚ್ಚಿನ ವಿವರ ಅಮಾನತು ಆದೇಶದಲ್ಲಿ ನೀಡಲಾಗಿಲ್ಲ.

ಈ ಕುರಿತು SIO ನ PR ಕಾರ್ಯದರ್ಶಿ ಮುಹಮ್ಮದ್ ಹೈಯಾನ್ ಅವರು 'ವಾರ್ತಾ ಭಾರತಿ' ಗೆ ದೂರವಾಣಿ ಮೂಲಕ ಪ್ರತಿಕ್ರಿಯಿಸಿ, ಘಟನೆಯನ್ನು ಖಂಡಿಸಿದ್ದಾರೆ. ಈ ಘಟನೆ ಇಲೆಕ್ಟ್ರಾನಿಕ್ ಸಿಟಿ ಕ್ಯಾಂಪಸ್ ನಲ್ಲಿ ನಡೆದಿದ್ದು, ಸಂಬಂಧಿತ ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನೊಂದೆಡೆ, ಎನ್‌ಎಸ್‌ಯುಐ ಸಂಘಟನೆಯು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಿಸಿದೆ ಎಂದು ತಿಳಿದುಬಂದಿದೆ. ಆದರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಎಫ್‌ಐಆರ್ ದಾಖಲಾಗಿಲ್ಲ.

ಈ ಕುರಿತು ಸ್ಪಷ್ಟೀಕರಣಕ್ಕಾಗಿ ವಾರ್ತಾ ಭಾರತಿ ವಿಶ್ವವಿದ್ಯಾಲಯಕ್ಕೆ ಇಮೇಲ್ ಕಳುಹಿಸಿದ್ದು, ಡಾ. ಮುರಳೀಧರ್ ದೇಶಪಾಂಡೆ ಅವರಿಂದಲೂ ಪ್ರತಿಕ್ರಿಯೆ ಕೋರಲಾಗಿದೆ. ಅಧಿಕೃತ ಪ್ರತಿಕ್ರಿಯೆ ಲಭಿಸಿದ ಬಳಿಕ ಹೆಚ್ಚಿನ ವಿವರಗಳನ್ನು ಪ್ರಕಟಿಸಲಾಗುತ್ತದೆ.

🚨 Professor accused of calling Muslim student “terrorist” at PES University, BengaluruA serious controversy has emerged at PES University, Bengaluru, where professor Dr. Muralidhar Deshpande allegedly made derogatory remarks against a Muslim student, Affan, during a class on… pic.twitter.com/hckZVoTkQo

— Genzdigest (@genzdigest) March 27, 2026

Tags

BengaluruTerroristssuspend
share
ವಾರ್ತಾಭಾರತಿ
ವಾರ್ತಾಭಾರತಿ
Next Story
X