Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಾಡಗೀತೆಯಲ್ಲಿ ‘ಬೌದ್ಧರುದ್ಯಾನ’ ಪದ...

ನಾಡಗೀತೆಯಲ್ಲಿ ‘ಬೌದ್ಧರುದ್ಯಾನ’ ಪದ ಸೇರ್ಪಡೆಗೆ ತಜ್ಞರ ಸಮಿತಿ ಶಿಫಾರಸು : ಡಾ.ಪುರುಷೋತ್ತಮ ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ15 July 2026 8:56 PM IST
share
ನಾಡಗೀತೆಯಲ್ಲಿ ‘ಬೌದ್ಧರುದ್ಯಾನ’ ಪದ ಸೇರ್ಪಡೆಗೆ ತಜ್ಞರ ಸಮಿತಿ ಶಿಫಾರಸು : ಡಾ.ಪುರುಷೋತ್ತಮ ಬಿಳಿಮಲೆ

ಬೆಂಗಳೂರು : ರಾಷ್ಟ್ರಕವಿ ಕುವೆಂಪು ರಚಿಸಿರುವ ನಾಡಗೀತೆಯಲ್ಲಿ ‘ಬೌದ್ಧರುದ್ಯಾನ’ ಪದ ಸೇರಿಸುವಂತೆ ತಜ್ಞರ ಸಮಿತಿ ಸರಕಾರಕ್ಕೆ ಶಿಫಾರಸು ಮಾಡಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ತಜ್ಞರ ಸಮಿತಿಯ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

ಈ ಕುರಿತು ವಾರ್ತಾಭಾರತಿಯೊಂದಿಗೆ ಮಾಹಿತಿ ಹಂಚಿಕೊಂಡ ಅವರು, ನಾಡಗೀತೆಯಲ್ಲಿ ‘ಬೌದ್ಧ’ ಪದ ಸೇರ್ಪಡೆ ಮಾಡುವಂತೆ ಬೌದ್ಧ ಧರ್ಮಗುರುಗಳು, ಬೌದ್ಧ ಸಂಘಟನೆಗಳು ರಾಜ್ಯ ಸರಕಾರವನ್ನು ಆಗ್ರಹಿಸಿದ್ದವು. ಈ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರಕಾರ ತಜ್ಞರ ಸಮಿತಿ ರಚಿಸಿತ್ತು ಎಂದು ತಿಳಿಸಿದರು.

ಸಮಿತಿಯು ಇತ್ತೀಚಿಗೆ ಸಭೆ ನಡೆಸಿ, ‘ಬೌದ್ಧರುದ್ಯಾನ’ ಪದ ಸೇರ್ಪಡೆಗೆ ಒಮ್ಮತದ ತೀರ್ಮಾನ ಕೈಗೊಂಡಿದೆ. ನಾಡಗೀತೆಯಲ್ಲಿನ ‘ಪಾರಸಿಕ ಜೈನರುದ್ಯಾನ’ ಎಂಬ ಸಾಲುಗಳನ್ನು, 'ಪಾರಸಿಕ ಜೈನ ಬೌದ್ಧರುದ್ಯಾನ' ಎಂದು ಮಾರ್ಪಾಡು ಮಾಡಲು ಸಮಿತಿಯು ಶಿಫಾರಸು ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರದಿ ಸಲ್ಲಿಸಿದೆ ಎಂದು ತಿಳಿಸಿದರು.

ನಾಡಗೀತೆಯಲ್ಲಿ ಬೌದ್ಧರು ಎನ್ನುವ ಪದ ಸೇರಿಸಿದರೆ, ಏನು ತೊಂದರೆಯಾಗುತ್ತದೆ. ಕುವೆಂಪು ಆಶಯ, ಚಿಂತನೆಗೆ ವಿರೋಧವಾಗುತ್ತದೆಯೇ? ಎನ್ನುವುದನ್ನು ಸಭೆಯಲ್ಲಿ ಚರ್ಚಿಸಿದ್ದೇವೆ. ಹಿಂದೆ ಮಧ್ವ ಪದ ಸೇರಿಸಿದಾಗ ತುಂಬಾ ಗಲಾಟೆಯಾಗಿತ್ತು. ಆ ಹಿನ್ನೆಲೆಯಲ್ಲಿ ಕೂಡ ಚರ್ಚಿಸಿದ್ದೇವೆ. ಕುವೆಂಪು ಅವರಿಗೆ ಬೌದ್ಧರ ಬಗ್ಗೆ ಪ್ರೀತಿ ಇತ್ತು. ನಾಡಗೀತೆಯ ಕರಡಿನಲ್ಲಿ ಬೌದ್ಧರು ಪದ ಇತ್ತು. ಬೌದ್ಧರ ಬಗ್ಗೆ ನಾಟಕ, ಕವನವನ್ನು ಬರೆದಿದ್ದಾರೆ. ಅದರಿಂದ ‘ಬೌದ್ಧರುದ್ಯಾನ’ ಪದ ಸೇರಿಸಿದರೆ ಕುವೆಂಪು ಆಶಯಕ್ಕೆ ಧಕ್ಕೆ ಬರುವುದಿಲ್ಲ ಎಂಬ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಬೌದ್ಧರುದ್ಯಾನ ಪದ ಸೇರಿಸಿದಾಗ ನಾಡಗೀತೆ ಹಾಡುವಾಗ ಉದ್ದ ಹೆಚ್ಚಾಗಿ, ಲಯ ಹಾಳಾಗುತ್ತಾ ಎನ್ನುವುದನ್ನು ಕೂಡ ನೋಡಿದಾಗ ಲಯಕ್ಕೆ ಯಾವುದೇ ಧಕ್ಕೆ ಯಾಗುವುದಿಲ್ಲ ಎನ್ನುವುದು ತಿಳಿದು ಬಂದಿತು. ಈಗ ನಾಡಗೀತೆಯಲ್ಲಿ ಪಾರಸಿಕ ಜೈನರುದ್ಯಾನ ಎಂದಿದೆ. ಅದನ್ನು ‘ಪಾರಸಿಕ ಜೈನ ಬೌದ್ಧರುದ್ಯಾನ’ ಎಂದು ಸೇರಿಸುವಂತೆ ಸರ್ವಾನುಮತದಿಂದ ಶಿಫಾರಸು ಮಾಡಿದ್ದೇವೆ ಎಂದು ಹೇಳಿದರು.

ನಿವೃತ್ತ ಕುಲಪತಿ ಡಾ.ಚಿದಾನಂದಗೌಡ, ಹಿರಿಯ ಸಾಹಿತಿಗಳಾದ ಪ್ರೊ. ಹಂಪ ನಾಗರಾಜಯ್ಯ, ಪ್ರೊ.ಬರಗೂರು ರಾಮಚಂದ್ರಪ್ಪ, ಪ್ರೊ.ಕಾಳೇಗೌಡ ನಾಗವಾರ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಡಾ.ಮೂಡ್ನಾಕೂಡು ಚಿನ್ನಸ್ವಾಮಿ, ಡಾ.ಸಿ.ಎಸ್.ದ್ವಾರಕನಾಥ್, ಡಾ.ಮೀನಾಕ್ಷಿ ಬಾಳಿ, ಡಾ.ಎಂ.ಎಸ್.ಆಶಾದೇವಿ ಅವರು ಸಮಿತಿಯಲ್ಲಿದ್ದರು. ಪ್ರೊ.ಬರಗೂರು ರಾಮಚಂದ್ರಪ್ಪ ಅವರು ಬಿಟ್ಟು ಎಲ್ಲರೂ ಸಭೆಯಲ್ಲಿ ಭಾಗವಹಿಸಿದ್ದು, ಒಮ್ಮತದ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.

Tags

Dr. Purushothama Bilimale
share
ವಾರ್ತಾಭಾರತಿ
ವಾರ್ತಾಭಾರತಿ
Next Story
X