Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹಿಂದೂಗಳು ವಿರೋಧಿಸಿದ್ದು ಬ್ರಿಟಿಷರನ್ನೇ...

ಹಿಂದೂಗಳು ವಿರೋಧಿಸಿದ್ದು ಬ್ರಿಟಿಷರನ್ನೇ ಹೊರತು, ಆಂಗ್ಲ ಭಾಷೆಯನ್ನಲ್ಲ: ಪುರುಷೋತ್ತಮ ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ11 Aug 2024 10:24 PM IST
share
ಹಿಂದೂಗಳು ವಿರೋಧಿಸಿದ್ದು ಬ್ರಿಟಿಷರನ್ನೇ ಹೊರತು, ಆಂಗ್ಲ ಭಾಷೆಯನ್ನಲ್ಲ: ಪುರುಷೋತ್ತಮ ಬಿಳಿಮಲೆ

ಬೆಂಗಳೂರು : ಭಾರತೀಯ ಹಿಂದೂಗಳು ವಿರೋಧಿಸಿದ್ದು ಬ್ರಿಟಿಷರನ್ನೆ ಹೊರತು, ಆಂಗ್ಲಭಾಷೆಯನಲ್ಲ. ಆದರೆ ದೇಶದ ಮುಸ್ಲಿಮರು ಬ್ರಿಟಿಷರೊಂದಿಗೆ ಆಂಗ್ಲ ಭಾಷೆಯನ್ನು ವಿರೋಧಿಸಿ ತಮ್ಮದೆ ಶಿಕ್ಷಣ ವ್ಯವಸ್ಥೆಯನ್ನು ಪ್ರಾರಂಭಿಸಿದ್ದರು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ರವಿವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುವ್ವಿ ಪಬ್ಲಿಕೇಶನ್ಸ್ ಮತ್ತು ರಂಗ ವಿಜಯಾ ಸಹಯೋಗದಲ್ಲಿ ಆಯೋಜಿಸಿದ್ದ ಲೇಖಕ ಡಾ.ಟಿ.ಲಕ್ಷ್ಮಿನಾರಾಯಣ ರಚಿಸಿರುವ ವಿರಚಿತ ‘ಸ್ವಾತಂತ್ರ್ಯ ಸಮರ ಕರುನಾಡು ಅಮರ’ ಸೇರಿದಂತೆ ಐದು ನಾಟಕ ಕೃತಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, 1857ರಲ್ಲಿ ಬಹದ್ದೂರ್ ಶಾ ಬ್ರಿಟಿಷರಿಂದ ಅಧಿಕಾರ ಕಳೆದುಕೊಂಡ ಬಳಿಕ ಮುಸ್ಲಿಮ್ ಸಮುದಾಯಕ್ಕೆ ಇತರಗಿಂತ ಹೆಚ್ಚಾಗಿ ಬ್ರಿಟಿಷರ ಮೇಲೆ ಕೋಪವಿತ್ತು ಎಂದು ತಿಳಿಸಿದರು.

ಮುಂದಿನ 100 ವರ್ಷಗಳ ವರೆಗೆ, ಭಾರತೀಯ ಮುಸ್ಲಿಮ್ ಸಮುದಾಯವರು ಬ್ರಿಟಿಷರೊಂದಿಗೆ ಅವರ ಆಂಗ್ಲ ಭಾಷೆಯನ್ನು ವಿರೋಧಿಸಿ ಹೋರಾಟ ಮಾಡಿರುವ ಫಲವಾಗಿ ಭಾರತದಲ್ಲಿ ಉರ್ದು ವಿಶ್ವವಿದ್ಯಾನಿಲಯ, ಜಾಮಿಯಾ ಶಿಕ್ಷಣ ವ್ಯವಸ್ಥೆ ಪ್ರಾರಂಭಗೊಂಡಿದ್ದು. ಭಾರತೀಯ ಹಿಂದೂಗಳು ಬ್ರಿಟಿಷರನ್ನು ವಿರೋಧಿಸಿದ್ದರು. ಗಾಂಧಿ, ನೆಹರೂ, ರಾಮಕೃಷ ಪರಮಹಂಸ, ದಯಾನಂದ ಸರಸ್ವತಿ, ಸ್ವಾಮಿ ವಿವೇಕನಂದ, ರಾಜಾರಾಮ್ ಮೋಹನ್‍ರಾಯ್ ಅವರು ವಿದೇಶಗಳಿಗೆ ತೆರಳಿ ಆಂಗ್ಲ ಶಿಕ್ಷಣ ಪಡೆದಿದ್ದರು ಎಂದು ಪುರುಷೋತ್ತಮ್ ಬಿಳಿಮಲೆ ಮಾಹಿತಿ ನೀಡಿದರು.

ಬ್ರಿಟಿಷರು ದೇಶಬಿಟ್ಟು ಹೋಗುವಾಗ ಆಡಳಿತದ ಒಳಗೆ ಆಂಗ್ಲ ಕಲಿತ ಹಿಂದೂಗಳಿಗೆ ಅವಕಾಶ ಸಿಕಿತ್ತು. ಆದರೆ ಭಾರತೀಯ ಮುಸ್ಲಿಮ್ ಸಮುದಾಯದವರಿಗೆ ಸಿಕ್ಕಿರಲಿಲ್ಲ. ದೇಶ ವಿಭಜನೆಯ ಸಂದರ್ಭದಲ್ಲಿ ಆಂಗ್ಲ ಕಲಿತ ಮುಸ್ಲಿಮ್ ಸಮುದಾಯ ಪಾಕಿಸ್ತಾನಕ್ಕೆ ತೆರಳಿದ್ದರು. ಮುಸ್ಲಿಮರು 600ವರ್ಷಗಳಷ್ಟು ಭಾರತದಲ್ಲಿ ಆಳ್ವಿಕೆ ನಡೆಸಿದ್ದಾರೆ ಎನ್ನುವುದು ನಿಜವಾದರೆ, 1957ರ ಅನಂತರ ಏಕಾಏಕಿಯಾಗಿ ಅವರು ಬಡವರು ಹೇಗಾದರೂ? ಜಮೀನು, ಹಣ ಹೇಗೆ ಕಳೆದುಕೊಂಡರು? ಚರಿತ್ರೆ ಬಹಳ ಸಂಕಿರಣವಾದದ್ದು, ಅದನ್ನು ನಾವು ಮರೆಯಬಾರದು ಎಂದು ಅವರು ಎಚ್ಚೆರಿಕೆ ನೀಡಿದರು.

75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, 20ರಿಂದ 30ವರ್ಷದೊಳಗಿನ ಯುವಕರು ಸಂವಿಧಾನ 8ನೇ ಪರಿಚ್ಛೇದ ಅಂಗಿಕರಿಸಿದ 22ಭಾಷೆಯಲ್ಲಿ ಮುಖ್ಯವಾಹಿನಿಗೆ ಬಾರದ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಪುಸ್ತಕ ಬರೆಯುವ ಯೋಜನೆಗೆ ಅರ್ಜಿ ಆಹ್ವಾನಿಸಿದ್ದರು. ಕರ್ನಾಟಕದಿಂದ 258ಅರ್ಜಿಗಳು ಬಂದಿದ್ದು, ಅದರಲ್ಲಿ ಇಬ್ಬರು ಮಾತ್ರ ಅರ್ಹತೆ ಪಡೆಕೊಂಡಿದ್ದರು. ಇದನ್ನು ಗಮನಿಸಿದಾಗ ನಮ್ಮ ಯುವಕರಿಗೆ ಸ್ವಾತಂತ್ರ್ಯ ಹೋರಾಟದ ಕುರಿತು ತಿಳುವಳಿಕೆ ಎಷ್ಟಿದೆ ಎನ್ನುವ ಪರಮರ್ಶಿಸುವ ಕಾಲಘಟ್ಟಕ್ಕೆ ಬಂದು ತಲುಪಿದ್ದೇವೆ ಎಂದು ಪುರುಷೋತ್ತಮ್ ಬಿಳಿಮಲೆ ನುಡಿದರು.

ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶದ ದ್ರಾವಿಡ ವಿಶ್ವವಿದ್ಯಾನಿಲಯ ಡೀನ್ ಪ್ರೊ.ಎಂ.ಎನ್.ವೆಂಕಟೇಶ್, ಚಿತ್ರ ನಿರ್ದೇಶಕ ಪೃಥ್ವಿ ಕೊಣನೂರು, ಹೋರಾಟಗಾರ್ತಿ ಡಾ.ಲೀಲಾ ಸಂಪಿಗೆ, ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಮ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Purushottama bilimale
share
ವಾರ್ತಾಭಾರತಿ
ವಾರ್ತಾಭಾರತಿ
Next Story
X